ಅವಿರೋಧ ಆಯ್ಕೆ: ಬಂಗಾರಪೇಟೆ ತಾಲ್ಲೂಕು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್ ಮುಖಂಡ ಹಾಗೂ ಒಕ್ಕೂಟದ ಹಾಲಿ ನಿರ್ದೇಶಕ ಜಯಸಿಂಹ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.
ಅವರ ವಿರುದ್ಧ ಕಣಕ್ಕಿಳಿದಿದ್ದ ಹುನುಕುಂದದ ಬಿ.ಎಂ.ವೆಂಕಟೇಶ್, ಚಂದ್ರೇಗೌಡ, ಬಳವನಹಳ್ಳಿಯ ವೆಂಕಟರಾಮರೆಡ್ಡಿ ಉಮೇದುವಾರಿಕೆ ಹಿಂಪಡೆದ ಹಿನ್ನೆಲೆಯಲ್ಲಿ ಜಯಸಿಂಹ ಅವರ ಗೆಲುವಿನ ಹಾದಿ ಸುಗಮವಾಯಿತು.