ನಗರದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಶಾಖೆಯಲ್ಲಿ ಬೆಳಿಗ್ಗೆ ₹ 2.50 ಲಕ್ಷ ಡ್ರಾ ಮಾಡಿಕೊಂಡ ಶಿವಕುಮಾರ್ ಆ ಹಣವನ್ನು ತಮ್ಮ ದ್ವಿಚಕ್ರ ವಾಹನದ ಡಿಕ್ಕಿಯಲ್ಲಿಟ್ಟು ಆಚಾರ್ಪೇಟೆ ಬಳಿ ವಾಹನ ನಿಲ್ಲಿಸಿ ತರಕಾರಿ ಖರೀದಿಸಲು ಮಾರುಕಟ್ಟೆಗೆ ಹೋಗಿದ್ದರು. ಈ ಸಂದರ್ಭ ನೋಡಿಕೊಂಡು ದುಷ್ಕರ್ಮಿಗಳು ಅವರ ವಾಹನವನ್ನು ಕಳವು ಮಾಡಿ ಪಕ್ಕದ ರಸ್ತೆಗೆ ಹೋಗಿ ಡಿಕ್ಕಿಯಲ್ಲಿದ್ದ ಹಣ ಎಗರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.