ಮಾಲೂರು: ಸುಮಾರು ₹ 50 ಸಾವಿರಕ್ಕಿಂತಲೂ ಹೆಚ್ಚು ಬೆಲೆ ಬಾಳುವ ಗಾಂಜಾವನ್ನು ಯುವಕರಿಗೆ ಮಾರಾಟ ಮಾಡಲು ತಂದಿದ್ದ ಆರೋಪಿಗಳನ್ನು ಇಲ್ಲಿನ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಆರೋಪಿಗಳನ್ನು ಚಿಕ್ಕಾಪುರ ಗ್ರಾಮದ ವೆಂಕಟೇಶ್, ಚೂಡಗೊಂಡಹಳ್ಳಿ ಎನ್. ಹರೀಶ್, ಕಾಡದೇನಹಳ್ಳಿಯ ನಿಖಿಲ್ ಎಂದು ಗುರುತಿಸಲಾಗಿದೆ. ಈ ಮೂವರೂ ಬೊಪ್ಪನಹಳ್ಳಿ ಗ್ರಾಮದ ರೈಲ್ವೆ ಸೇತುವೆ ಬಳಿಯ ನೀಲಗಿರಿ ತೋಪಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಇನ್ಸ್ಪೆಕ್ಟರ್ ವಸಂತ್ ಮತ್ತು ತಂಡ ದಾಳಿ ನಡೆಸಿದೆ. ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.