<p><strong>ಶ್ರೀನಿವಾಸಪುರ:</strong> ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಕರ್ನಾಟಕ ಸರ್ಕಾರಿ ಮಾದರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗಾಗಿ ಪುರಸಭೆಯಿಂದ ₹50 ಲಕ್ಷ ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ₹20 ಲಕ್ಷ ನೀಡಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.</p>.<p>ಕರ್ನಾಟಕ ಸರ್ಕಾರಿ ಮಾದರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಾಲೆಯ ಶತಮಾನೋತ್ಸವ ನೆನಪಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಶಾಲೆಗೆ ಅಗತ್ಯವಾದ ತರಗತಿ ಕೊಠಡಿ ನಿರ್ಮಿಸಲಾಗುವುದು. ಅಗತ್ಯ ಸಂಖ್ಯೆಯ ಶಿಕ್ಷರ ಸೇವೆ ಒದಗಿಸಲಾಗುವುದು. ಶತಮಾನೋತ್ಸವ ಸಮಾರಂಭಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಹೇಳಿದರು.</p>.<p>ವಿದ್ಯಾರ್ಥಿಗಳು ಗುಣಮಟ್ಟದ ಫಲಿತಾಂಶ ಪಡೆಯುವುದರ ಜತೆಗೆ, ನೈತಿಕವಾಗಿ ಬೆಳೆಯಬೇಕು. ಗುರು ಹಿರಿಯರ ಬಗ್ಗೆ ಗೌರವ ಭಾವನೆ ಹೊಂದಿರಬೇಕು. ಶಾಲೆ, ಶಿಕ್ಷಕರು ಹಾಗೂ ಪೋಷಕರಿಗೆ ಗೌರವ ತರಬೇಕು ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯ ಕೈ ಜೋಡಿಸಬೇಕು. ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಕೈಗೊಳ್ಳಲು ಸರ್ಕಾರೇತರ ಸಂಸ್ಥೆಗಳು ಮುಂದೆ ಬಂದಿರುವುದು ಶ್ಲಾಘನೀಯ ಸಂಗತಿ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಮ್ಮ, ಮುಖ್ಯ ಶಿಕ್ಷಕ ಎಂ.ಬೈರೇಗೌಡ, ಶ್ರೀನಿವಾಸಮೂರ್ತಿ ಯದುನಾಥ್, ಪ್ರಸಾದ್ ಮಾತನಾಡಿದರು. ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಲೇಖನ ಸಾಮಗ್ರಿ ವಿತರಿಸಲಾಯಿತು.</p>.<p>ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಎಸ್ಡಿಎಂಸಿ ಅಧ್ಯಕ್ಷ ಆನಂದ ರೆಡ್ಡಿ, ಉಪಾಧ್ಯಕ್ಷೆ ರಜಿಯಾ ಸುಲ್ತಾನ್, ಕೈಗಾರಿಕೆ ಹಾಗೂ ವಾಣಿಜ್ಯ ಮಂಡಳಿ ಉಪ ನಿರ್ದೇಶಕ ರವಿಚಂದ್ರ, ಶ್ರೀನಿವಾಸಪ್ಪ, ಸತ್ಯನಾರಾಯಣ, ಜಗನ್ ಮೋಹನ್ ರೆಡ್ಡಿ, ಗೋವಿಂದರೆಡ್ಡಿ, ಸುರೇಶ್, ಕೃಷ್ಣಪ್ಪ, ವಿಶ್ವನಾಥರೆಡ್ಡಿ, ವೇಣುಗೋಪಾಲರೆಡ್ಡಿ, ವಿಜಯ್, ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಕರ್ನಾಟಕ ಸರ್ಕಾರಿ ಮಾದರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗಾಗಿ ಪುರಸಭೆಯಿಂದ ₹50 ಲಕ್ಷ ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ₹20 ಲಕ್ಷ ನೀಡಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.</p>.<p>ಕರ್ನಾಟಕ ಸರ್ಕಾರಿ ಮಾದರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಾಲೆಯ ಶತಮಾನೋತ್ಸವ ನೆನಪಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಶಾಲೆಗೆ ಅಗತ್ಯವಾದ ತರಗತಿ ಕೊಠಡಿ ನಿರ್ಮಿಸಲಾಗುವುದು. ಅಗತ್ಯ ಸಂಖ್ಯೆಯ ಶಿಕ್ಷರ ಸೇವೆ ಒದಗಿಸಲಾಗುವುದು. ಶತಮಾನೋತ್ಸವ ಸಮಾರಂಭಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಹೇಳಿದರು.</p>.<p>ವಿದ್ಯಾರ್ಥಿಗಳು ಗುಣಮಟ್ಟದ ಫಲಿತಾಂಶ ಪಡೆಯುವುದರ ಜತೆಗೆ, ನೈತಿಕವಾಗಿ ಬೆಳೆಯಬೇಕು. ಗುರು ಹಿರಿಯರ ಬಗ್ಗೆ ಗೌರವ ಭಾವನೆ ಹೊಂದಿರಬೇಕು. ಶಾಲೆ, ಶಿಕ್ಷಕರು ಹಾಗೂ ಪೋಷಕರಿಗೆ ಗೌರವ ತರಬೇಕು ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯ ಕೈ ಜೋಡಿಸಬೇಕು. ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಕೈಗೊಳ್ಳಲು ಸರ್ಕಾರೇತರ ಸಂಸ್ಥೆಗಳು ಮುಂದೆ ಬಂದಿರುವುದು ಶ್ಲಾಘನೀಯ ಸಂಗತಿ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಮ್ಮ, ಮುಖ್ಯ ಶಿಕ್ಷಕ ಎಂ.ಬೈರೇಗೌಡ, ಶ್ರೀನಿವಾಸಮೂರ್ತಿ ಯದುನಾಥ್, ಪ್ರಸಾದ್ ಮಾತನಾಡಿದರು. ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಲೇಖನ ಸಾಮಗ್ರಿ ವಿತರಿಸಲಾಯಿತು.</p>.<p>ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಎಸ್ಡಿಎಂಸಿ ಅಧ್ಯಕ್ಷ ಆನಂದ ರೆಡ್ಡಿ, ಉಪಾಧ್ಯಕ್ಷೆ ರಜಿಯಾ ಸುಲ್ತಾನ್, ಕೈಗಾರಿಕೆ ಹಾಗೂ ವಾಣಿಜ್ಯ ಮಂಡಳಿ ಉಪ ನಿರ್ದೇಶಕ ರವಿಚಂದ್ರ, ಶ್ರೀನಿವಾಸಪ್ಪ, ಸತ್ಯನಾರಾಯಣ, ಜಗನ್ ಮೋಹನ್ ರೆಡ್ಡಿ, ಗೋವಿಂದರೆಡ್ಡಿ, ಸುರೇಶ್, ಕೃಷ್ಣಪ್ಪ, ವಿಶ್ವನಾಥರೆಡ್ಡಿ, ವೇಣುಗೋಪಾಲರೆಡ್ಡಿ, ವಿಜಯ್, ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>