<p><strong>ಬಂಗಾರಪೇಟೆ:</strong> ‘ರಾಜಕೀಯ ದುರುದ್ದೇಶಕ್ಕಾಗಿ ಲಿಂಗಾಯತ ಹಾಗೂ ವೀರಶೈವರ ನಡುವೆ ಭಿನ್ನಮತ ಸೃಷ್ಟಿ ಮಾಡುತ್ತಿದ್ದಾರೆಯೇ ಹೊರತು ಜನಾಂಗದ ಅಭಿವೃದ್ಧಿಗಲ್ಲ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕ ಉಪಾಧ್ಯಕ್ಷ ಬಿ.ಎಸ್.ಸಚ್ಚಿದಾನಂದ ಮೂರ್ತಿ ಹೇಳಿದರು.</p>.<p>ಪಟ್ಟಣದ ಅಕ್ಕಚ್ಚಮ್ಮ ಕಲ್ಯಾಣ ಮಂಟಪದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ ಪ್ರತಿಭಾನ್ವಿತ ಮಕ್ಕಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಹಾನಗಲ್ ಕುಮಾರಸ್ವಾಮಿ ಅವರ 150ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>‘ವೀರಶೈವ ಲಿಂಗಾಯತ ಸಮಾಜ ಒಂದೇ ಆಗಿದ್ದು, ಇತರೆ ಸಮಾಜಗಳಿಗಿಂತ ಬಲಿಷ್ಠವಾಗಿದೆ. ರಾಜಕೀಯ ದುರುದ್ದೇಶದಿಂದ ವೀರಶೈವ ಬೇರೆ, ಲಿಂಗಾಯತ ಸಮಾಜವೆ ಬೇರೆ’ ಎಂದು ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹೇಳುತ್ತಿರುವುದು ಖಂಡನೀಯ ಎಂದರು.</p>.<p>‘ಪೂರ್ವಿಕರ ಕಾಲದಿಂದಲೂ ಲಿಂಗಾಯತ ಹಾಗೂ ವೀರಶೈವ ಸಮಾಜ ಒಗ್ಗಟ್ಟಾಗಿದೆ. ಸಮಾಜದ ಧಾರ್ಮಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸದ ಅವರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಇದರಿಂದ ಸಮಾಜದ ಸಮಗ್ರ ಅಭಿವೃದ್ಧಿಗೆ ತೀವ್ರ ಹಿನ್ನೆಡೆಯಾಗುತ್ತಿದೆ’ ಎಂದು ಹೇಳಿದರು.</p>.<p>ವೀರಶೈವ ಮಹಾಸಭಾದ ರಾಷ್ಟ್ರೀಯ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ಜಯಂತ್ ಮಾತನಾಡಿ, ‘ಲಿಂಗಾಯತ ಮತ್ತು ವೀರಶೈವ ಸಮಾಜವು ಎರಡೂ ಒಂದೇ ಆಗಿದ್ದರೂ ಸಹ ನಮ್ಮಲ್ಲಿರುವವರೇ ಸಮಾಜವನ್ನು ಇಬ್ಭಾಗ ಮಾಡಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಜನಾಂಗದ 20ಕ್ಕೂ ಹೆಚ್ಚು ಮಕ್ಕಳನ್ನು ಸನ್ಮಾನಿಸಲಾಯಿತು.</p>.<p>ಮಹಾಸಭಾ ರಾಜ್ಯ ಘಟಕ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್, ಸರ್ಕಲ್ ಇನ್ಸ್ಪೆಕ್ಟರ್ ದಿನೇಶ್ ಪಾಟೀಲ್, ಜಿಲ್ಲಾ ಘಟಕ ಅಧ್ಯಕ್ಷ ಎ.ಎನ್.ಸದಾಶಿವಯ್ಯ, ಮಾಲೂರು ಟಿ.ಸಿ.ನಾಗರಾಜ್, ಕೆ.ಬಿ.ಬೈಲಪ್ಪ, ಪ್ರಮೀಳಾ ಮಲ್ಲಿಕಾರ್ಜುನ್, ಆರ್.ವಿಜಯಕುಮಾರ್, ಬಿ.ಜಿ.ನಂಜಪ್ಪ, ಕೆ.ಸಿ.ಉಮೇಶ್ಕುಮಾರ್, ಬಿ.ಎಂ.ಶಂಭಣ್ಣ, ಎಸ್.ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ‘ರಾಜಕೀಯ ದುರುದ್ದೇಶಕ್ಕಾಗಿ ಲಿಂಗಾಯತ ಹಾಗೂ ವೀರಶೈವರ ನಡುವೆ ಭಿನ್ನಮತ ಸೃಷ್ಟಿ ಮಾಡುತ್ತಿದ್ದಾರೆಯೇ ಹೊರತು ಜನಾಂಗದ ಅಭಿವೃದ್ಧಿಗಲ್ಲ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕ ಉಪಾಧ್ಯಕ್ಷ ಬಿ.ಎಸ್.ಸಚ್ಚಿದಾನಂದ ಮೂರ್ತಿ ಹೇಳಿದರು.</p>.<p>ಪಟ್ಟಣದ ಅಕ್ಕಚ್ಚಮ್ಮ ಕಲ್ಯಾಣ ಮಂಟಪದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ ಪ್ರತಿಭಾನ್ವಿತ ಮಕ್ಕಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಹಾನಗಲ್ ಕುಮಾರಸ್ವಾಮಿ ಅವರ 150ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>‘ವೀರಶೈವ ಲಿಂಗಾಯತ ಸಮಾಜ ಒಂದೇ ಆಗಿದ್ದು, ಇತರೆ ಸಮಾಜಗಳಿಗಿಂತ ಬಲಿಷ್ಠವಾಗಿದೆ. ರಾಜಕೀಯ ದುರುದ್ದೇಶದಿಂದ ವೀರಶೈವ ಬೇರೆ, ಲಿಂಗಾಯತ ಸಮಾಜವೆ ಬೇರೆ’ ಎಂದು ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹೇಳುತ್ತಿರುವುದು ಖಂಡನೀಯ ಎಂದರು.</p>.<p>‘ಪೂರ್ವಿಕರ ಕಾಲದಿಂದಲೂ ಲಿಂಗಾಯತ ಹಾಗೂ ವೀರಶೈವ ಸಮಾಜ ಒಗ್ಗಟ್ಟಾಗಿದೆ. ಸಮಾಜದ ಧಾರ್ಮಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸದ ಅವರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಇದರಿಂದ ಸಮಾಜದ ಸಮಗ್ರ ಅಭಿವೃದ್ಧಿಗೆ ತೀವ್ರ ಹಿನ್ನೆಡೆಯಾಗುತ್ತಿದೆ’ ಎಂದು ಹೇಳಿದರು.</p>.<p>ವೀರಶೈವ ಮಹಾಸಭಾದ ರಾಷ್ಟ್ರೀಯ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ಜಯಂತ್ ಮಾತನಾಡಿ, ‘ಲಿಂಗಾಯತ ಮತ್ತು ವೀರಶೈವ ಸಮಾಜವು ಎರಡೂ ಒಂದೇ ಆಗಿದ್ದರೂ ಸಹ ನಮ್ಮಲ್ಲಿರುವವರೇ ಸಮಾಜವನ್ನು ಇಬ್ಭಾಗ ಮಾಡಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಜನಾಂಗದ 20ಕ್ಕೂ ಹೆಚ್ಚು ಮಕ್ಕಳನ್ನು ಸನ್ಮಾನಿಸಲಾಯಿತು.</p>.<p>ಮಹಾಸಭಾ ರಾಜ್ಯ ಘಟಕ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್, ಸರ್ಕಲ್ ಇನ್ಸ್ಪೆಕ್ಟರ್ ದಿನೇಶ್ ಪಾಟೀಲ್, ಜಿಲ್ಲಾ ಘಟಕ ಅಧ್ಯಕ್ಷ ಎ.ಎನ್.ಸದಾಶಿವಯ್ಯ, ಮಾಲೂರು ಟಿ.ಸಿ.ನಾಗರಾಜ್, ಕೆ.ಬಿ.ಬೈಲಪ್ಪ, ಪ್ರಮೀಳಾ ಮಲ್ಲಿಕಾರ್ಜುನ್, ಆರ್.ವಿಜಯಕುಮಾರ್, ಬಿ.ಜಿ.ನಂಜಪ್ಪ, ಕೆ.ಸಿ.ಉಮೇಶ್ಕುಮಾರ್, ಬಿ.ಎಂ.ಶಂಭಣ್ಣ, ಎಸ್.ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>