ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ ಮಾತನಾಡಿ, ಕರ್ಫ್ಯೂ ಸಂದರ್ಭದಲ್ಲಿ ಸಮಯ ಪಾಲನೆ ಅತ್ಯಗತ್ಯ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ನಿಯಮ ಬಾಹಿರ. ಅಂಥ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುವುದು. ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕೋವಿಡ್ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.