<p><strong>ಮುಳಬಾಗಿಲು</strong>: ‘ವಿದ್ಯಾರ್ಥಿಗಳು ನಲಿಯುತ್ತಾ ಆಡುತ್ತಾ ಕಲಿಯಬೇಕೆ ಹೊರತು ಬಲತ್ಕಾರದಿಂದ ಓದಬಾರದು’ ಎಂದು ಪ್ರಗತಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜೆ.ಎಂ. ಮುನೇಶ್ ಹೇಳಿದರು.</p>.<p>ತಾಲ್ಲೂಕಿನ ಕನ್ನಸಂದ್ರ ಗ್ರಾಮದಲ್ಲಿ ನಡೆದ ಎಮ್ಮೇನತ್ತ ಕ್ಲಸ್ಟರ್ ವ್ಯಾಪ್ತಿಯ ಮಕ್ಕಳ ಕಲಿಕಾ ಹಬ್ಬದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಣವನ್ನು ವಿದ್ಯಾರ್ಥಿಗಳು ಸಂತೋಷದಿಂದ ತೃಪ್ತಿಪಟ್ಟು ಕಲಿತಾಗ ಶಾಶ್ವತವಾಗಿ ಉಳಿಯುತ್ತದೆ. ಗಂಟೆಗಳ ಕಾಲ ಕೂತು ಕಷ್ಟಪಟ್ಟು ಓದುವ ಶಿಕ್ಷಣ ತಾತ್ಕಾಲಿಕವಾಗಿ ಮೆದುಳಿನಲ್ಲಿ ಸಂಗ್ರಹವಾಗುತ್ತದೆ ಎಂದು ತಿಳಿಸಿದರು.</p>.<p>ಮಕ್ಕಳ ಕಲಿಕಾ ಹಬ್ಬದಲ್ಲಿ ವಿದ್ಯಾರ್ಥಿಗಳು ನಾನಾ ವೇಷಭೂಷಣ ತೊಟ್ಟು ನಲಿದಾಡಿದರು. ಮಕ್ಕಳ ಆಟಪಾಠ ನೋಡಿದ ಶಿಕ್ಷಕರು ಹಾಗೂ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಸ್ಥಳೀಯ ಮುಖಂಡರು ವಿದ್ಯಾರ್ಥಿಗಳ ಜೊತೆಯಲ್ಲಿ ಕೋಲಾಟ, ಹುಲಿವೇಷ, ಕಾಂತಾರ ವೇಷ ಹಾಕಿ ನಲಿದಾಡಿದರು.</p>.<p>ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸೋಮೇಶ್, ಎಮ್ಮೆನತ್ತ ಅಭಿವೃದ್ಧಿ ಅಧಿಕಾರಿ ಸುಧಾಕರ್, ಉಪಾಧ್ಯಕ್ಷ ಹನುಮಪ್ಪ, ನಿವೃತ್ತ ಶಿಕ್ಷಕರಾದ ಕೆ. ಲಕ್ಷ್ಮೀನಾರಾಯಣ, ರಾಧಾಕೃಷ್ಣ, ವಿಶ್ವನಾಥ ರೆಡ್ಡಿ, ಶಾಮಣ್ಣ, ಕರಡಗೂರು ಗ್ರಾಮದ ವೆಂಕಟೇಶಪ್ಪ, ಶಿಕ್ಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ‘ವಿದ್ಯಾರ್ಥಿಗಳು ನಲಿಯುತ್ತಾ ಆಡುತ್ತಾ ಕಲಿಯಬೇಕೆ ಹೊರತು ಬಲತ್ಕಾರದಿಂದ ಓದಬಾರದು’ ಎಂದು ಪ್ರಗತಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜೆ.ಎಂ. ಮುನೇಶ್ ಹೇಳಿದರು.</p>.<p>ತಾಲ್ಲೂಕಿನ ಕನ್ನಸಂದ್ರ ಗ್ರಾಮದಲ್ಲಿ ನಡೆದ ಎಮ್ಮೇನತ್ತ ಕ್ಲಸ್ಟರ್ ವ್ಯಾಪ್ತಿಯ ಮಕ್ಕಳ ಕಲಿಕಾ ಹಬ್ಬದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಣವನ್ನು ವಿದ್ಯಾರ್ಥಿಗಳು ಸಂತೋಷದಿಂದ ತೃಪ್ತಿಪಟ್ಟು ಕಲಿತಾಗ ಶಾಶ್ವತವಾಗಿ ಉಳಿಯುತ್ತದೆ. ಗಂಟೆಗಳ ಕಾಲ ಕೂತು ಕಷ್ಟಪಟ್ಟು ಓದುವ ಶಿಕ್ಷಣ ತಾತ್ಕಾಲಿಕವಾಗಿ ಮೆದುಳಿನಲ್ಲಿ ಸಂಗ್ರಹವಾಗುತ್ತದೆ ಎಂದು ತಿಳಿಸಿದರು.</p>.<p>ಮಕ್ಕಳ ಕಲಿಕಾ ಹಬ್ಬದಲ್ಲಿ ವಿದ್ಯಾರ್ಥಿಗಳು ನಾನಾ ವೇಷಭೂಷಣ ತೊಟ್ಟು ನಲಿದಾಡಿದರು. ಮಕ್ಕಳ ಆಟಪಾಠ ನೋಡಿದ ಶಿಕ್ಷಕರು ಹಾಗೂ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಸ್ಥಳೀಯ ಮುಖಂಡರು ವಿದ್ಯಾರ್ಥಿಗಳ ಜೊತೆಯಲ್ಲಿ ಕೋಲಾಟ, ಹುಲಿವೇಷ, ಕಾಂತಾರ ವೇಷ ಹಾಕಿ ನಲಿದಾಡಿದರು.</p>.<p>ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸೋಮೇಶ್, ಎಮ್ಮೆನತ್ತ ಅಭಿವೃದ್ಧಿ ಅಧಿಕಾರಿ ಸುಧಾಕರ್, ಉಪಾಧ್ಯಕ್ಷ ಹನುಮಪ್ಪ, ನಿವೃತ್ತ ಶಿಕ್ಷಕರಾದ ಕೆ. ಲಕ್ಷ್ಮೀನಾರಾಯಣ, ರಾಧಾಕೃಷ್ಣ, ವಿಶ್ವನಾಥ ರೆಡ್ಡಿ, ಶಾಮಣ್ಣ, ಕರಡಗೂರು ಗ್ರಾಮದ ವೆಂಕಟೇಶಪ್ಪ, ಶಿಕ್ಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>