ಚರಿತಾ ಕಳೆದೊಂದು ವರ್ಷದಿಂದ ಕೂಡಿಟ್ಟಿದ್ದ ಹಣವು ದೇಶದೆಲ್ಲೆಡೆ ಕೊರೊನಾ ಸೋಂಕಿನಿಂದ ತೊಂದರೆಗೆ ಸಿಲುಕಿರುವವರ ಕಷ್ಟ ಪರಿಹಾರಕ್ಕೆ ಬಳಕೆಯಾಗಲಿ ಎಂಬ ಸದುದ್ದೇಶದಿಂದ ಪ್ರಧಾನಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿ, ಪೋಷಕರೊಂದಿಗೆ ಇಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರಿಗೆ ಹಣ ನೀಡಿದಳು. ಬಾಲಕಿಯ ಸೇವಾ ಮನೋಭಾವಕ್ಕೆ ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.