<p><strong>ಮುಳಬಾಗಿಲು (ಕೋಲಾರ):</strong> ತಾಲ್ಲೂಕಿನ ಕಸುವುಗಾನಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಕಿಡಿಗೇಡಿಗಳು ಗುಡಿಸಲಿಗೆ ಬೆಂಕಿ ಇಟ್ಟು ಸುಟ್ಟು ಹಾಕಿದ್ದಾರೆ.</p><p>ಮುದಿಗೆರೆ ಮಜರಾ ಗಡ್ಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುವುಗಾನಹಳ್ಳಿ ಗ್ರಾಮದ ಶಿವಮ್ಮ ಎಂಬುವರಿಗೆ ಸೇರಿದ ಗುಡಿಸಲು ಇದಾಗಿದೆ. ಬೆಂಕಿ ಇಟ್ಟ ಆರೋಪದ ಮೇಲೆ ಗ್ರಾಮದ ಬಾಲರಾಜು ಎಂಬುವರನ್ನು ಮುಳಬಾಗಿಲು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p><p>ಗುಡಿಸಲಿನಲ್ಲಿ ಮಂಜುನಾಥ್, ತಾಯಿ ಶಿವಮ್ಮ ಹಾಗೂ ಅಜ್ಜಿ ರಾಜಮ್ಮ ಮಲಗಿದ್ದಾಗ ಘಟನೆ ನಡೆದಿದ್ದು, ತಕ್ಷಣ ಹೊರಗೆ ಬಂದಿದ್ದರಿಂದ ಅನಾಹುತ ತಪ್ಪಿದೆ. </p><p>ರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ, ಹಳೆ ದ್ವೇಷದ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಗುಡಿಸಲಿಗೆ ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.</p><p>ಶಿವಮ್ಮ ಪುತ್ರ ಮಂಜುನಾಥ್ ಹಾಗೂ ಗ್ರಾಮದ ಬಾಲರಾಜ್ ನಡುವೆ ಹಣದ ವಿಚಾರವಾಗಿ ಗಲಾಟೆ ನಡೆದಿತ್ತು. ಬಾಲರಾಜು ಎಂಬುವರಿಗೆ ಮಂಜುನಾಥ್ ₹1 ಲಕ್ಷ ಕೊಟ್ಟಿದ್ದು ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ್ಗೆ ಗಲಾಟೆ ನಡೆಯುತಿತ್ತು.</p><p>ಹೀಗಾಗಿ, ಬಾಲರಾಜು ಎಂಬುವರೇ ಗುಡಿಸಲಿಗೆ ಬೆಂಕಿ ಹಾಕಿರಬಹುದು ಎಂದು ಮಂಜುನಾಥ್ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ.</p><p>ಬೆಂಕಿಯಿಂದ ಸಂಪೂರ್ಣವಾಗಿ ಗುಡಿಸಲು ಸುಟ್ಟು ಭಸ್ಮವಾಗಿದ್ದು, ಮನೆಯಲ್ಲಿದ್ದ ಬಟ್ಟೆಗಳು, ಆಹಾರ ಸಾಮಗ್ರಿಗಳು ಸುಟ್ಟು ನಾಶವಾಗಿವೆ.</p><p>ಬೆರಳಚ್ಚು ತಜ್ಞರು, ವೃತ್ತ ನಿರೀಕ್ಷಕ ಸತೀಶ್, ಪಿ.ಎಸ್.ಐ ಅರ್ಜುನ್ ಎಸ್.ಆರ್.ಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು (ಕೋಲಾರ):</strong> ತಾಲ್ಲೂಕಿನ ಕಸುವುಗಾನಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಕಿಡಿಗೇಡಿಗಳು ಗುಡಿಸಲಿಗೆ ಬೆಂಕಿ ಇಟ್ಟು ಸುಟ್ಟು ಹಾಕಿದ್ದಾರೆ.</p><p>ಮುದಿಗೆರೆ ಮಜರಾ ಗಡ್ಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುವುಗಾನಹಳ್ಳಿ ಗ್ರಾಮದ ಶಿವಮ್ಮ ಎಂಬುವರಿಗೆ ಸೇರಿದ ಗುಡಿಸಲು ಇದಾಗಿದೆ. ಬೆಂಕಿ ಇಟ್ಟ ಆರೋಪದ ಮೇಲೆ ಗ್ರಾಮದ ಬಾಲರಾಜು ಎಂಬುವರನ್ನು ಮುಳಬಾಗಿಲು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p><p>ಗುಡಿಸಲಿನಲ್ಲಿ ಮಂಜುನಾಥ್, ತಾಯಿ ಶಿವಮ್ಮ ಹಾಗೂ ಅಜ್ಜಿ ರಾಜಮ್ಮ ಮಲಗಿದ್ದಾಗ ಘಟನೆ ನಡೆದಿದ್ದು, ತಕ್ಷಣ ಹೊರಗೆ ಬಂದಿದ್ದರಿಂದ ಅನಾಹುತ ತಪ್ಪಿದೆ. </p><p>ರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ, ಹಳೆ ದ್ವೇಷದ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಗುಡಿಸಲಿಗೆ ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.</p><p>ಶಿವಮ್ಮ ಪುತ್ರ ಮಂಜುನಾಥ್ ಹಾಗೂ ಗ್ರಾಮದ ಬಾಲರಾಜ್ ನಡುವೆ ಹಣದ ವಿಚಾರವಾಗಿ ಗಲಾಟೆ ನಡೆದಿತ್ತು. ಬಾಲರಾಜು ಎಂಬುವರಿಗೆ ಮಂಜುನಾಥ್ ₹1 ಲಕ್ಷ ಕೊಟ್ಟಿದ್ದು ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ್ಗೆ ಗಲಾಟೆ ನಡೆಯುತಿತ್ತು.</p><p>ಹೀಗಾಗಿ, ಬಾಲರಾಜು ಎಂಬುವರೇ ಗುಡಿಸಲಿಗೆ ಬೆಂಕಿ ಹಾಕಿರಬಹುದು ಎಂದು ಮಂಜುನಾಥ್ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ.</p><p>ಬೆಂಕಿಯಿಂದ ಸಂಪೂರ್ಣವಾಗಿ ಗುಡಿಸಲು ಸುಟ್ಟು ಭಸ್ಮವಾಗಿದ್ದು, ಮನೆಯಲ್ಲಿದ್ದ ಬಟ್ಟೆಗಳು, ಆಹಾರ ಸಾಮಗ್ರಿಗಳು ಸುಟ್ಟು ನಾಶವಾಗಿವೆ.</p><p>ಬೆರಳಚ್ಚು ತಜ್ಞರು, ವೃತ್ತ ನಿರೀಕ್ಷಕ ಸತೀಶ್, ಪಿ.ಎಸ್.ಐ ಅರ್ಜುನ್ ಎಸ್.ಆರ್.ಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>