<p><strong>ಕೋಲಾರ</strong>: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಭಾನುವಾರ 4 ಮಂದಿ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.</p>.<p>ಮುಳಬಾಗಿಲು ತಾಲ್ಲೂಕಿನ 4 ಮಂದಿ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 480ಕ್ಕೆ ಏರಿಕೆಯಾಗಿದೆ. ಸೋಂಕಿತರ ಸರಣಿ ಸಾವಿನ ಬೆನ್ನಲ್ಲೇ ಹೊಸದಾಗಿ 77 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,390ಕ್ಕೆ ಇಳಿದಿದೆ.</p>.<p>ಕೋಲಾರ ತಾಲ್ಲೂಕಿನ 14 ಮಂದಿಗೆ, ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 17 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 8 ಮಂದಿಗೆ, ಕೆಜಿಎಫ್ ತಾಲ್ಲೂಕಿನ 11 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 10 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.</p>.<p>ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 93 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 28 ಮಂದಿ, ಮಾಲೂರು ತಾಲ್ಲೂಕಿನ 22, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್ ತಾಲ್ಲೂಕಿನ 12, ಮುಳಬಾಗಿಲು ತಾಲ್ಲೂಕಿನ 17 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 11 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಭಾನುವಾರ 4 ಮಂದಿ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.</p>.<p>ಮುಳಬಾಗಿಲು ತಾಲ್ಲೂಕಿನ 4 ಮಂದಿ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 480ಕ್ಕೆ ಏರಿಕೆಯಾಗಿದೆ. ಸೋಂಕಿತರ ಸರಣಿ ಸಾವಿನ ಬೆನ್ನಲ್ಲೇ ಹೊಸದಾಗಿ 77 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,390ಕ್ಕೆ ಇಳಿದಿದೆ.</p>.<p>ಕೋಲಾರ ತಾಲ್ಲೂಕಿನ 14 ಮಂದಿಗೆ, ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 17 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 8 ಮಂದಿಗೆ, ಕೆಜಿಎಫ್ ತಾಲ್ಲೂಕಿನ 11 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 10 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.</p>.<p>ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 93 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 28 ಮಂದಿ, ಮಾಲೂರು ತಾಲ್ಲೂಕಿನ 22, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್ ತಾಲ್ಲೂಕಿನ 12, ಮುಳಬಾಗಿಲು ತಾಲ್ಲೂಕಿನ 17 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 11 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>