ಜಿಲ್ಲಾ ಪಂಚಾಯಿತಿಯಲ್ಲಿ ಚಂದ್ರಮೌಳೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ‘ಜನಪರ ಅಧಿಕಾರಿಯಾಗಿದ್ದ ಚಂದ್ರಮೌಳೇಶ್ವರ ಅವರು ಕೋವಿಡ್–-19 ವಿರುದ್ಧ ಯೋಧರಂತೆ ರೀತಿ ಕೆಲಸ ಮಾಡುತ್ತಿದ್ದರು. ಸರ್ಕಾರದ ಜಮೀನು ಉಳಿಸುವ ನಿಟ್ಟಿನಲ್ಲಿ ಅವರಿಗೆ ಸಾಕಷ್ಟು ಬದ್ಧತೆಯಿತ್ತು. ಜನರ ಸಮಸ್ಯೆಗೆ ತಕ್ಷಣವೇ ಸ್ಪಂದಿಸುತ್ತಿದ್ದರು’ ಎಂದು ಸ್ಮರಿಸಿದರು.