<p><strong>ಮುಳಬಾಗಿಲು</strong>: ತಾಲ್ಲೂಕಿನ ಕೊಲದೇವಿ ಪ್ರಸನ್ನ ಚೌಡೇಶ್ವರಿ ಪ್ರೌಢಶಾಲೆಯ ಆವರಣದಲ್ಲಿ ಮಂಗಳವಾರ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಕೂಟಗಳನ್ನು ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.</p>.<p>ದುಗ್ಗಸಂದ್ರ ಹೋಬಳಿ ವ್ಯಾಪ್ತಿಯ ಒಂದರಿಂದ ಹತ್ತನೆಯ ತರಗತಿಯ ಸುಮಾರು 50ಕ್ಕೂ ಹೆಚ್ಚು ವಿಶೇಷ ಚೇತನ ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರೀಡಾಕೂಟಗಳಲ್ಲಿ ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಕ್ರೀಡೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. </p>.<p>ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಸಮನ್ವಯಾಧಿಕಾರಿ ಪಿ. ಸೋಮೇಶ್, ವಿಶೇಷ ಚೇತನ ಮಕ್ಕಳನ್ನು ಎಲ್ಲಾ ರಂಗಗಳಲ್ಲೂ ಹಾಗೂ ಎಲ್ಲಾ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಪೋಷಕರು ಪ್ರೋತ್ಸಾಹಿಸಬೇಕು. ಅವರಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು ಶಿಕ್ಷಕರು ಹಾಗೂ ಪೋಷಕರು ವೇದಿಕೆ ಕಲ್ಪಿಸಬೇಕು ಎಂದು ತಿಳಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ರಾಮಚಂದ್ರ ಮಾತನಾಡಿ, ವಿಶೇಷ ಚೇತನ ಮಕ್ಕಳು ಯಾವುದೇ ಕಾರಣಕ್ಕೂ ಮಾನಸಿಕವಾಗಿ ಕುಗ್ಗದೆ, ಹಿಂಜರಿಯದೇ, ಕೀಳರಿಮೆ ಬೆಳೆಸಿಕೊಳ್ಳದೇ ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಬೇಕು ಎಂದು ಹೇಳಿದರು.</p>.<p>ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ, ನಾರಾಯಣಸ್ವಾಮಿ, ಸುಧೀರ್, ಶಿವಕುಮಾರ್, ಸುಜಾತಮ್ಮ, ಮುನಿಸ್ವಾಮಿ, ಮಂಜುಳಾ ಕೆ., ಆರತಿ, ಸುರೇಶ್ , ಸಿ.ಎನ್. ರಮೇಶ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ತಾಲ್ಲೂಕಿನ ಕೊಲದೇವಿ ಪ್ರಸನ್ನ ಚೌಡೇಶ್ವರಿ ಪ್ರೌಢಶಾಲೆಯ ಆವರಣದಲ್ಲಿ ಮಂಗಳವಾರ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಕೂಟಗಳನ್ನು ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.</p>.<p>ದುಗ್ಗಸಂದ್ರ ಹೋಬಳಿ ವ್ಯಾಪ್ತಿಯ ಒಂದರಿಂದ ಹತ್ತನೆಯ ತರಗತಿಯ ಸುಮಾರು 50ಕ್ಕೂ ಹೆಚ್ಚು ವಿಶೇಷ ಚೇತನ ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರೀಡಾಕೂಟಗಳಲ್ಲಿ ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಕ್ರೀಡೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. </p>.<p>ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಸಮನ್ವಯಾಧಿಕಾರಿ ಪಿ. ಸೋಮೇಶ್, ವಿಶೇಷ ಚೇತನ ಮಕ್ಕಳನ್ನು ಎಲ್ಲಾ ರಂಗಗಳಲ್ಲೂ ಹಾಗೂ ಎಲ್ಲಾ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಪೋಷಕರು ಪ್ರೋತ್ಸಾಹಿಸಬೇಕು. ಅವರಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು ಶಿಕ್ಷಕರು ಹಾಗೂ ಪೋಷಕರು ವೇದಿಕೆ ಕಲ್ಪಿಸಬೇಕು ಎಂದು ತಿಳಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ರಾಮಚಂದ್ರ ಮಾತನಾಡಿ, ವಿಶೇಷ ಚೇತನ ಮಕ್ಕಳು ಯಾವುದೇ ಕಾರಣಕ್ಕೂ ಮಾನಸಿಕವಾಗಿ ಕುಗ್ಗದೆ, ಹಿಂಜರಿಯದೇ, ಕೀಳರಿಮೆ ಬೆಳೆಸಿಕೊಳ್ಳದೇ ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಬೇಕು ಎಂದು ಹೇಳಿದರು.</p>.<p>ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ, ನಾರಾಯಣಸ್ವಾಮಿ, ಸುಧೀರ್, ಶಿವಕುಮಾರ್, ಸುಜಾತಮ್ಮ, ಮುನಿಸ್ವಾಮಿ, ಮಂಜುಳಾ ಕೆ., ಆರತಿ, ಸುರೇಶ್ , ಸಿ.ಎನ್. ರಮೇಶ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>