ತಾಲ್ಲೂಕಿನ ಬೈರಕೂರಿನಿಂದ ಆಂಧ್ರಪ್ರದೇಶದ ಪುಂಗನೂರಿಗೆ ಹೋಗುವ ಮಾರ್ಗದ ಬೂಡಿದೇರು ಮತ್ತು ಕಿರುಮಣಿ ಮಿಟ್ಟೆಯ ಮಧ್ಯದಲ್ಲಿ ಜಿಂಕೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿತ್ತು. ಜಿಂಕೆ ರಸ್ತೆಯ ಪಕ್ಕದಲ್ಲಿ ಬಿದ್ದು ರಕ್ತ ಸ್ರಾವವಾಗಿ ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ಸೋಮಶೇಖರ್ ಕೂಡಲೇ ಬೈರಕೂರು ಪಶು ವೈದ್ಯ ರಾಮಚಂದ್ರಪ್ಪ ಅವರಿಗೆ ಮಾಹಿತಿ ನೀಡಿ ಚಿಕಿತ್ಸೆ ಕೊಡಿಸಿ ನಂತರ ಅರಣ್ಯ ಅಧಿಕಾರಿ ಜ್ಯೋತಿ ಅವರಿಗೆ ತಿಳಿಸಿದರು.