<p><strong>ಬಂಗಾರಪೇಟೆ:</strong> ಶ್ರೀನಿವಾಸಪುರದಲ್ಲಿ ಆರ್ಎಫ್ಒ ಆಗಿ ಕಾರ್ಯ ನಿರ್ವಹಿಸುತ್ತಿರುವ ಪಟ್ಟಣದ ನಿವಾಸಿ ರಾಮಕೃಷ್ಣಪ್ಪ ಅವರ ಮನೆ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿ ಆಸ್ತಿ ಮತ್ತು ಇತರೆ ದಾಖಲೆಗಳನ್ನು ಪರಿಶೀಲನೆ ನಡೆಸಿದರು.</p>.<p>ಆದಾಯಕ್ಕಿಂತ ಹೆಚ್ಚಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ ಆರೋಪದಡಿ ದಾಳಿ ನಡೆದಿದೆ. ಬೆಂಗಳೂರಿನಿಂದ ನಾಲ್ಕು ವಾಹನಗಳಲ್ಲಿ ಬಂದಿದ್ದ ಎಸಿಬಿ ಪೊಲೀಸರು ಬೆಳಿಗ್ಗೆಯಿಂದ ರಾತ್ರಿವರೆಗೂ ದಾಖಲೆ ಪರಿಶೀಲಿಸಿದರು.</p>.<p>ಪಟ್ಟಣದಲ್ಲಿದ್ದ ರಾಮಕೃಷ್ಣಪ್ಪ ಅವರ ಮನೆ, ಕೆಲಸ ನಿರ್ವಹಿಸುತ್ತಿದ್ದ ಶ್ರೀನಿವಾಸಪುರ ಆರ್ಎಫ್ಒ ಕಚೇರಿ, ತಾಲ್ಲೂಕಿನ ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿಟ್ಟಹಳ್ಳಿ ಗ್ರಾಮದ ಮನೆ ಹಾಗೂ ಪಟ್ಟಣದಲ್ಲಿರುವ ಸಂಬಂಧಿ ಪುರಸಭೆ ಸದಸ್ಯರೊಬ್ಬರ ಮನೆ, ಬಾರ್ ಮತ್ತು ರೆಸ್ಟೋರೆಂಟ್ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.</p>.<p>ರಾಮಕೃಷ್ಣಪ್ಪ ಅವರು ಆದಾಯಕ್ಕಿಂತಲೂ ಅಧಿಕ ಬೆಲೆ ಬಾಳುವ ನಿವೇಶನ, ಐಷಾರಾಮಿ ಬಂಗಲೆ, ಕಾರು, ಚಿನ್ನದ ಒಡವೆ ಮತ್ತು ಸಂಬಂಧಿಕರ ಹೆಸರಲ್ಲಿಯೂ ಅಕ್ರಮ ಆಸ್ತಿ ಮಾಡಿದ್ದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಶ್ರೀನಿವಾಸಪುರದಲ್ಲಿ ಆರ್ಎಫ್ಒ ಆಗಿ ಕಾರ್ಯ ನಿರ್ವಹಿಸುತ್ತಿರುವ ಪಟ್ಟಣದ ನಿವಾಸಿ ರಾಮಕೃಷ್ಣಪ್ಪ ಅವರ ಮನೆ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿ ಆಸ್ತಿ ಮತ್ತು ಇತರೆ ದಾಖಲೆಗಳನ್ನು ಪರಿಶೀಲನೆ ನಡೆಸಿದರು.</p>.<p>ಆದಾಯಕ್ಕಿಂತ ಹೆಚ್ಚಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ ಆರೋಪದಡಿ ದಾಳಿ ನಡೆದಿದೆ. ಬೆಂಗಳೂರಿನಿಂದ ನಾಲ್ಕು ವಾಹನಗಳಲ್ಲಿ ಬಂದಿದ್ದ ಎಸಿಬಿ ಪೊಲೀಸರು ಬೆಳಿಗ್ಗೆಯಿಂದ ರಾತ್ರಿವರೆಗೂ ದಾಖಲೆ ಪರಿಶೀಲಿಸಿದರು.</p>.<p>ಪಟ್ಟಣದಲ್ಲಿದ್ದ ರಾಮಕೃಷ್ಣಪ್ಪ ಅವರ ಮನೆ, ಕೆಲಸ ನಿರ್ವಹಿಸುತ್ತಿದ್ದ ಶ್ರೀನಿವಾಸಪುರ ಆರ್ಎಫ್ಒ ಕಚೇರಿ, ತಾಲ್ಲೂಕಿನ ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿಟ್ಟಹಳ್ಳಿ ಗ್ರಾಮದ ಮನೆ ಹಾಗೂ ಪಟ್ಟಣದಲ್ಲಿರುವ ಸಂಬಂಧಿ ಪುರಸಭೆ ಸದಸ್ಯರೊಬ್ಬರ ಮನೆ, ಬಾರ್ ಮತ್ತು ರೆಸ್ಟೋರೆಂಟ್ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.</p>.<p>ರಾಮಕೃಷ್ಣಪ್ಪ ಅವರು ಆದಾಯಕ್ಕಿಂತಲೂ ಅಧಿಕ ಬೆಲೆ ಬಾಳುವ ನಿವೇಶನ, ಐಷಾರಾಮಿ ಬಂಗಲೆ, ಕಾರು, ಚಿನ್ನದ ಒಡವೆ ಮತ್ತು ಸಂಬಂಧಿಕರ ಹೆಸರಲ್ಲಿಯೂ ಅಕ್ರಮ ಆಸ್ತಿ ಮಾಡಿದ್ದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>