ಭರತ್ಕುಮಾರ್ ಮತ್ತು ಶ್ರೀನಿವಾಸ್ ರಾತ್ರಿ ಪಾಳಿಯ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ಬರುತ್ತಿದ್ದಾಗ ಹಿಂಭಾಗದಿಂದ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಭರತ್ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀನಿವಾಸ್ ಅವರನ್ನು ಜಿಲ್ಲಾ ಕೇಂದ್ರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಸಂಜೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.