<p><strong>ಮಾಲೂರು:</strong> ಸೀತನಾಯಕನಹಳ್ಳಿ ಗ್ರಾಮದ ಬಳಿ ಭಾನುವಾರ ಟೆಂಪೊ ಟ್ರಾವೆಲರ್ (ಟಿ.ಟಿ) ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಗಾಯಗೊಂಡಿದ್ದಾರೆ.</p>.<p>ಬೆಂಗಳೂರಿನ ನಾಗವಾರದ ಮಂಜುನಾಥ್ ತಮ್ಮ ಸಂಬಂಧಿಕರೊಂದಿಗೆ ತಾಲ್ಲೂಕಿನ ಮಿಣಸಂದ್ರ ಗ್ರಾಮಕ್ಕೆ ಸೀಮಂತ ಕಾರ್ಯಕ್ರಮಕ್ಕೆ ಟಿ.ಟಿಯಲ್ಲಿ ಬಂದಿದ್ದರು.</p>.<p>ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಬೆಂಗಳೂರಿಗೆ ಹಿಂದಿರುಗುವಾಗ ಸೀತನಾಯಕನಹಳ್ಳಿ ಗೇಟ್ ಬಳಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. </p>.<p>ಟಿ.ಟಿಯಲ್ಲಿದ್ದ ಮಮತಾ, ಗೌರಮ್ಮ, ರಾಧಮ್ಮ, ಯಶೋದಮ್ಮ, ಚಾಲಕ ಮಹಮ್ಮದ್ ಆಸಿಫ್ ಹಾಗೂ ಸಿಂಧೂ ಹಾಗೂ ಚಂದನ್ ಎಂಬ ಮಕ್ಕಳಿಗೆ ಗಾಯಗಳಾಗಿವೆ. ಕಾರಿನಲ್ಲಿದ್ದ ಮಿಣಸಂದ್ರ ಗ್ರಾಮದ ಲಕ್ಷ್ಮಮ್ಮ ಹಾಗೂ ವೆಂಕಟೇಶ್ ದಂಪತಿಗೆ ಗಾಯಗಳಾಗಿವೆ. ಉಳಿದವರ ಕೈ,ಕಾಲಿಗೆ ಗಾಯಗಳಾಗಿವೆ.</p>.<p>ಮಾಲೂರಿನ ಸಾರ್ವಜನಿಕ ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ಸೀತನಾಯಕನಹಳ್ಳಿ ಗ್ರಾಮದ ಬಳಿ ಭಾನುವಾರ ಟೆಂಪೊ ಟ್ರಾವೆಲರ್ (ಟಿ.ಟಿ) ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಗಾಯಗೊಂಡಿದ್ದಾರೆ.</p>.<p>ಬೆಂಗಳೂರಿನ ನಾಗವಾರದ ಮಂಜುನಾಥ್ ತಮ್ಮ ಸಂಬಂಧಿಕರೊಂದಿಗೆ ತಾಲ್ಲೂಕಿನ ಮಿಣಸಂದ್ರ ಗ್ರಾಮಕ್ಕೆ ಸೀಮಂತ ಕಾರ್ಯಕ್ರಮಕ್ಕೆ ಟಿ.ಟಿಯಲ್ಲಿ ಬಂದಿದ್ದರು.</p>.<p>ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಬೆಂಗಳೂರಿಗೆ ಹಿಂದಿರುಗುವಾಗ ಸೀತನಾಯಕನಹಳ್ಳಿ ಗೇಟ್ ಬಳಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. </p>.<p>ಟಿ.ಟಿಯಲ್ಲಿದ್ದ ಮಮತಾ, ಗೌರಮ್ಮ, ರಾಧಮ್ಮ, ಯಶೋದಮ್ಮ, ಚಾಲಕ ಮಹಮ್ಮದ್ ಆಸಿಫ್ ಹಾಗೂ ಸಿಂಧೂ ಹಾಗೂ ಚಂದನ್ ಎಂಬ ಮಕ್ಕಳಿಗೆ ಗಾಯಗಳಾಗಿವೆ. ಕಾರಿನಲ್ಲಿದ್ದ ಮಿಣಸಂದ್ರ ಗ್ರಾಮದ ಲಕ್ಷ್ಮಮ್ಮ ಹಾಗೂ ವೆಂಕಟೇಶ್ ದಂಪತಿಗೆ ಗಾಯಗಳಾಗಿವೆ. ಉಳಿದವರ ಕೈ,ಕಾಲಿಗೆ ಗಾಯಗಳಾಗಿವೆ.</p>.<p>ಮಾಲೂರಿನ ಸಾರ್ವಜನಿಕ ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>