<p><strong>ಕೋಲಾರ:</strong> ತಾಲ್ಲೂಕಿನ ಶ್ರೀನಿವಾಸಪುರ ರಸ್ತೆಯ ಅರಿನಾಗನಹಳ್ಳಿ ಗೇಟ್ ಬಳಿ ಮಂಗಳವಾರ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಡಿಎಆರ್) ವಾಹನ ಮಗುಚಿ ಬಿದ್ದು, ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.</p>.<p>ಡಿಎಆರ್ನ 5 ಮಂದಿ ಕಾನ್ಸ್ಟೆಬಲ್ಗಳು ಇಲಾಖೆಯ ವಾಹನದಲ್ಲಿ ಜಿಲ್ಲಾ ಕೇಂದ್ರದಿಂದ ಶ್ರೀನಿವಾಸಪುರಕ್ಕೆ ಕರ್ತವ್ಯ ನಿರ್ವಹಣೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗಾಯಾಳುಗಳಾದ ಮಂಜುನಾಥ್, ಕೇಶವ್ ಹಾಗೂ ವೇಣು ಅವರನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಡಿಎಆರ್ ವಾಹನ ಚಾಲಕ ಎದುರುಗಡೆಯಿಂದ ವೇಗವಾಗಿ ಬಂದ ಖಾಸಗಿ ವಾಹನವು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಡ ಭಾಗಕ್ಕೆ ವಾಹನ ತಿರುಗಿಸಿದ್ದಾರೆ. ಈ ವೇಳೆ ಡಿಎಆರ್ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ತಾಲ್ಲೂಕಿನ ಶ್ರೀನಿವಾಸಪುರ ರಸ್ತೆಯ ಅರಿನಾಗನಹಳ್ಳಿ ಗೇಟ್ ಬಳಿ ಮಂಗಳವಾರ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಡಿಎಆರ್) ವಾಹನ ಮಗುಚಿ ಬಿದ್ದು, ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.</p>.<p>ಡಿಎಆರ್ನ 5 ಮಂದಿ ಕಾನ್ಸ್ಟೆಬಲ್ಗಳು ಇಲಾಖೆಯ ವಾಹನದಲ್ಲಿ ಜಿಲ್ಲಾ ಕೇಂದ್ರದಿಂದ ಶ್ರೀನಿವಾಸಪುರಕ್ಕೆ ಕರ್ತವ್ಯ ನಿರ್ವಹಣೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗಾಯಾಳುಗಳಾದ ಮಂಜುನಾಥ್, ಕೇಶವ್ ಹಾಗೂ ವೇಣು ಅವರನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಡಿಎಆರ್ ವಾಹನ ಚಾಲಕ ಎದುರುಗಡೆಯಿಂದ ವೇಗವಾಗಿ ಬಂದ ಖಾಸಗಿ ವಾಹನವು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಡ ಭಾಗಕ್ಕೆ ವಾಹನ ತಿರುಗಿಸಿದ್ದಾರೆ. ಈ ವೇಳೆ ಡಿಎಆರ್ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>