ಮಾಲೂರು ತಾಲ್ಲೂಕಿನ ಲಕ್ಕೂರು ಹೋಬಳಿಯ ದೊಮ್ಮಲೂರು ಗ್ರಾಮದ ನಂದಿತಾ (15) ಎಂಬ ದಲಿತ ಬಾಲಕಿಯನ್ನು ಫೆ.7ರಂದು ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲ್ಲೂಕಿನ ಬಾಣರಹಳ್ಳಿ ಬಳಿ ಚಾಕುವಿನಿಂದ ಚುಚ್ಚಿ ಕೊಂದ ಆರೋಪವಿದ್ದು, ತಾನೂ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ನಿತಿನ್ ಅವರನ್ನು ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಕೊಲೆ ಸಂಬಂಧ ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ನಿತಿನ್ ಹಾಗೂ ಇತರರ ಮೇಲೆ ಫೆ.8ರಂದು ದೌರ್ಜನ್ಯ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.