<p><strong>ಕೋಲಾರ:</strong> ಶ್ರೀನಿವಾಸಪುರ ಎಪಿಎಂಸಿ ಮಾರುಕಟ್ಟೆ ಅಧ್ಯಕ್ಷ ಎನ್.ರಾಜೇಂದ್ರ ಪ್ರಸಾದ್ ಸೂಚಿಸಿದ ಅಕ್ರಮ ಬಿಲ್ಗಳನ್ನು ಮಾಡಲು ಒಪ್ಪದ ಕಾರಣ ಮಾರುಕಟ್ಟೆ ಸಹಾಯಕ ಕಾರ್ಯದರ್ಶಿ ಪಿ.ಎನ್ ಜಗನ್ನಾಥ್ ಅವರ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಜಗನ್ನಾಥ್ ಕುಟುಂಬದವರುದೂರಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಟುಂಬಸ್ಥರು, ‘ಇತ್ತೀಚೆಗೆ ಜಗನ್ನಾಥ್ ಮಾರುಕಟ್ಟೆ ಕಚೇರಿಯ ಕಂಪ್ಯೂಟರ್ ಆಪರೇಟರ್ ಮಹಿಳೆಯನ್ನು ನಿಂದಿಸಿದ್ದಾರೆ ಎಂದು, ಮಹಿಳೆಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ. ಇದರ ಹಿಂದೆ ಅಧ್ಯಕ್ಷರ ಕೈವಾಡವಿದೆ’ ಎಂದು ಆರೋಪಿಸಿದರು.</p>.<p>ಶ್ರೀನಿವಾಸಪುರದ ಮಾರುಕಟ್ಟೆಯಲ್ಲಿ ನಕಲಿ ವಿದ್ಯುತ್ ಬಿಲ್ಗಳನ್ನು ಮಾಡಲು ಅಧ್ಯಕ್ಷರು ಹೇಳಿದ್ದಾರೆ. ಇದಕ್ಕೆ ಜಗನ್ನಾಥ್ ಒಪ್ಪದ ಕಾರಣ ದ್ವೇಷದಿಂದ ಹಲ್ಲೆ ಮಾಡಿಸಿದ್ದಾರೆ. ಜಗನ್ನಾಥ್ ಯಾವ ಮಹಿಳೆಯನ್ನು ನಿಂದಿಸಿಲ್ಲ ಎಂದು ತಿಳಿಸಿದರು.</p>.<p>ಮಾರುಕಟ್ಟೆಯ ಪ್ರಧಾನ ನಿರ್ದೇಶಕರಿಗೆ ದೂರು ಸಲ್ಲಿಸಿದ್ದೇವೆ. ಜಗನ್ನಾಥ್ ಅವರ ಪ್ರಾಣಕ್ಕೆ ಅಪಾಯವಾದರೆ ಎಪಿಎಂಸಿ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಅವರೇ ಕಾರಣ. ಅಧ್ಯಕ್ಷರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಿ ನಮಗೆ ನ್ಯಾಯ ಕೊಡಿಸಬೇಕು ಎಂದು ಮನವಿ<br />ಮಾಡಿದರು.</p>.<p>ಗೋಷ್ಠಿಯಲ್ಲಿ ಲತಾ, ಸರೋಜಮ್ಮ, ಜ್ಯೋತಿ, ವಿಶ್ವನಾಥ್, ವೆಂಕಟೇಶ್, ಮಂಜುಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಶ್ರೀನಿವಾಸಪುರ ಎಪಿಎಂಸಿ ಮಾರುಕಟ್ಟೆ ಅಧ್ಯಕ್ಷ ಎನ್.ರಾಜೇಂದ್ರ ಪ್ರಸಾದ್ ಸೂಚಿಸಿದ ಅಕ್ರಮ ಬಿಲ್ಗಳನ್ನು ಮಾಡಲು ಒಪ್ಪದ ಕಾರಣ ಮಾರುಕಟ್ಟೆ ಸಹಾಯಕ ಕಾರ್ಯದರ್ಶಿ ಪಿ.ಎನ್ ಜಗನ್ನಾಥ್ ಅವರ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಜಗನ್ನಾಥ್ ಕುಟುಂಬದವರುದೂರಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಟುಂಬಸ್ಥರು, ‘ಇತ್ತೀಚೆಗೆ ಜಗನ್ನಾಥ್ ಮಾರುಕಟ್ಟೆ ಕಚೇರಿಯ ಕಂಪ್ಯೂಟರ್ ಆಪರೇಟರ್ ಮಹಿಳೆಯನ್ನು ನಿಂದಿಸಿದ್ದಾರೆ ಎಂದು, ಮಹಿಳೆಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ. ಇದರ ಹಿಂದೆ ಅಧ್ಯಕ್ಷರ ಕೈವಾಡವಿದೆ’ ಎಂದು ಆರೋಪಿಸಿದರು.</p>.<p>ಶ್ರೀನಿವಾಸಪುರದ ಮಾರುಕಟ್ಟೆಯಲ್ಲಿ ನಕಲಿ ವಿದ್ಯುತ್ ಬಿಲ್ಗಳನ್ನು ಮಾಡಲು ಅಧ್ಯಕ್ಷರು ಹೇಳಿದ್ದಾರೆ. ಇದಕ್ಕೆ ಜಗನ್ನಾಥ್ ಒಪ್ಪದ ಕಾರಣ ದ್ವೇಷದಿಂದ ಹಲ್ಲೆ ಮಾಡಿಸಿದ್ದಾರೆ. ಜಗನ್ನಾಥ್ ಯಾವ ಮಹಿಳೆಯನ್ನು ನಿಂದಿಸಿಲ್ಲ ಎಂದು ತಿಳಿಸಿದರು.</p>.<p>ಮಾರುಕಟ್ಟೆಯ ಪ್ರಧಾನ ನಿರ್ದೇಶಕರಿಗೆ ದೂರು ಸಲ್ಲಿಸಿದ್ದೇವೆ. ಜಗನ್ನಾಥ್ ಅವರ ಪ್ರಾಣಕ್ಕೆ ಅಪಾಯವಾದರೆ ಎಪಿಎಂಸಿ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಅವರೇ ಕಾರಣ. ಅಧ್ಯಕ್ಷರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಿ ನಮಗೆ ನ್ಯಾಯ ಕೊಡಿಸಬೇಕು ಎಂದು ಮನವಿ<br />ಮಾಡಿದರು.</p>.<p>ಗೋಷ್ಠಿಯಲ್ಲಿ ಲತಾ, ಸರೋಜಮ್ಮ, ಜ್ಯೋತಿ, ವಿಶ್ವನಾಥ್, ವೆಂಕಟೇಶ್, ಮಂಜುಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>