<p><strong>ಕೋಲಾರ</strong>: ರೈತರು, ಮಹಿಳೆಯರ ಆರ್ಥಿಕ ಜೀವನಾಡಿಯಾಗಿರುವ ಡಿಸಿಸಿ ಬ್ಯಾಂಕ್ ಉಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮೀಟರ್ ಬಡ್ಡಿ ದಂಧೆ ಬಲಗೊಳ್ಳಲು ಕಾರಣವಾಗುತ್ತದೆ ಎಂದು ತಾಲ್ಲೂಕಿನ ಕಡಗಟ್ಟೂರು ವಿವಿದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಂಘದ ಅಧ್ಯಕ್ಷ ಕೆ.ವಿ.ದಯಾನಂದ ಎಚ್ಚರಿಸಿದರು.</p>.<p>ಬುಧವಾರ ಸೊಸೈಟಿ ಸಭಾಂಗಣದಲ್ಲಿ ಮನೆ ನಿರ್ಮಾಣ, ಕುರಿ ಶೆಡ್ ನಿರ್ಮಾಣಕ್ಕೆ, ಹುಳು ಸಾಕಣೆ ಮನೆ, ಬೆಳೆಸಾಲದ ಸುಮಾರು ₹ 30 ಲಕ್ಷ ಸಾಲ ವಿತರಿಸಿ ಅವರು ಮಾತನಾಡಿದರು.</p>.<p>ಬ್ಯಾಂಕ್ ಈಗಾಗಲೇ ಗ್ರಾಹಕರಿಂದ ದೂರವಾಗಿದೆ. ನೀಡಲಾಗಿರುವ ಸಾಲ ವಸೂಲಿಯಲ್ಲಿ ಹಿಂದೆ ಉಳಿದು ಆರ್ಥಿಕ ಶಕ್ತಿ ಕಳೆದುಕೊಂಡಿದೆ ಎಂದು ದೂರಿದರು.</p>.<p>ಹಿಂದೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರ, ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಪರಿಸ್ಥಿತಿಯಲ್ಲಿತ್ತು. ಈಗ ಆ ಶಕ್ತಿಯನ್ನು ಕಳೆದುಕೊಂಡಿದೆ. ಈ ಬಗ್ಗೆ ಮೊದಲಿನಿಂದಲೂ ಎಚ್ಚರಿಸುತ್ತಾ ಬಂದಿದ್ದರೂ ಯಾರು ಎಚ್ಚೆತ್ತುಕೊಳ್ಳಲಿಲ್ಲ ಎಂದು ಕಿಡಿಕಾರಿದರು.</p>.<p>ಯಾರ ಖಾತೆಯಲ್ಲಿ ಹಣ ಇದೆ ಎಂಬುದನ್ನು ಪರಿಶೀಲಿಸಿ ಗ್ರಾಹಕರ ಗಮನಕ್ಕೆ ಇಲ್ಲದೆ ಅಧಿಕಾರಿಗಳೇ ಸ್ವಯಂ ಡ್ರಾ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಠೇವಣಿದಾರರ ಖಾತೆಗೆ ಕನ್ನ ಹಾಕಿ, ಅನ್ನದಾತರ ಹೊಟ್ಟೆಗೆ ಬರೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ದುರುಪಯೋಗ ಪಡಿಸಿಕೊಂಡಿರುವ ಹಣ ಮರು ಪಾವತಿ ಮಾಡಿಸಬೇಕು ಎಂದು ಒತ್ತಾಯಿಸಿದರು.</p>.<p>ಹಗರಣಗಳು ನಡೆಯುತ್ತಿರುವ ಬಗ್ಗೆ ಜನಪ್ರತಿನಿಧಿಗಳು, ಆಡಳಿತಾಧಿಕಾರಿಗಳ ಗಮನಕ್ಕೆ ಇದ್ದರೂ ಇಚ್ಚಾಶಕ್ತಿ ಕೊರತೆಯಿಂದ ಬ್ಯಾಂಕ್ನತ್ತ ಗಮನ ಹರಿಸುತ್ತಿಲ್ಲ. ಇನ್ನಾದರು ಎಚ್ಚೆತ್ತುಕೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಉಪಾಧ್ಯಕ್ಷ ಮಂಜುನಾಥ್, ಸೋಮಶೇಖರ್, ರಮೇಶ್, ಎಂ.ಬೈಯ್ಯಣ್ಣ, ಬಿ.ಎಂ.ರಾಮೇಗೌಡ, ಕುಮಾರಚಾರಿ, ಮುನಿಕೃಷ್ಣಪ್ಪ, ಸುರೇಶ್, ಸಿ.ಡಿ.ರಾಮಚಂದ್ರೇಗೌಡ, ಗೋಪಾಲಕೃಷ್ಣ, ರಾಜಣ್ಣ, ಸಿಇಒ ಮುನೀಶ್ವರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ರೈತರು, ಮಹಿಳೆಯರ ಆರ್ಥಿಕ ಜೀವನಾಡಿಯಾಗಿರುವ ಡಿಸಿಸಿ ಬ್ಯಾಂಕ್ ಉಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮೀಟರ್ ಬಡ್ಡಿ ದಂಧೆ ಬಲಗೊಳ್ಳಲು ಕಾರಣವಾಗುತ್ತದೆ ಎಂದು ತಾಲ್ಲೂಕಿನ ಕಡಗಟ್ಟೂರು ವಿವಿದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಂಘದ ಅಧ್ಯಕ್ಷ ಕೆ.ವಿ.ದಯಾನಂದ ಎಚ್ಚರಿಸಿದರು.</p>.<p>ಬುಧವಾರ ಸೊಸೈಟಿ ಸಭಾಂಗಣದಲ್ಲಿ ಮನೆ ನಿರ್ಮಾಣ, ಕುರಿ ಶೆಡ್ ನಿರ್ಮಾಣಕ್ಕೆ, ಹುಳು ಸಾಕಣೆ ಮನೆ, ಬೆಳೆಸಾಲದ ಸುಮಾರು ₹ 30 ಲಕ್ಷ ಸಾಲ ವಿತರಿಸಿ ಅವರು ಮಾತನಾಡಿದರು.</p>.<p>ಬ್ಯಾಂಕ್ ಈಗಾಗಲೇ ಗ್ರಾಹಕರಿಂದ ದೂರವಾಗಿದೆ. ನೀಡಲಾಗಿರುವ ಸಾಲ ವಸೂಲಿಯಲ್ಲಿ ಹಿಂದೆ ಉಳಿದು ಆರ್ಥಿಕ ಶಕ್ತಿ ಕಳೆದುಕೊಂಡಿದೆ ಎಂದು ದೂರಿದರು.</p>.<p>ಹಿಂದೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರ, ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಪರಿಸ್ಥಿತಿಯಲ್ಲಿತ್ತು. ಈಗ ಆ ಶಕ್ತಿಯನ್ನು ಕಳೆದುಕೊಂಡಿದೆ. ಈ ಬಗ್ಗೆ ಮೊದಲಿನಿಂದಲೂ ಎಚ್ಚರಿಸುತ್ತಾ ಬಂದಿದ್ದರೂ ಯಾರು ಎಚ್ಚೆತ್ತುಕೊಳ್ಳಲಿಲ್ಲ ಎಂದು ಕಿಡಿಕಾರಿದರು.</p>.<p>ಯಾರ ಖಾತೆಯಲ್ಲಿ ಹಣ ಇದೆ ಎಂಬುದನ್ನು ಪರಿಶೀಲಿಸಿ ಗ್ರಾಹಕರ ಗಮನಕ್ಕೆ ಇಲ್ಲದೆ ಅಧಿಕಾರಿಗಳೇ ಸ್ವಯಂ ಡ್ರಾ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಠೇವಣಿದಾರರ ಖಾತೆಗೆ ಕನ್ನ ಹಾಕಿ, ಅನ್ನದಾತರ ಹೊಟ್ಟೆಗೆ ಬರೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ದುರುಪಯೋಗ ಪಡಿಸಿಕೊಂಡಿರುವ ಹಣ ಮರು ಪಾವತಿ ಮಾಡಿಸಬೇಕು ಎಂದು ಒತ್ತಾಯಿಸಿದರು.</p>.<p>ಹಗರಣಗಳು ನಡೆಯುತ್ತಿರುವ ಬಗ್ಗೆ ಜನಪ್ರತಿನಿಧಿಗಳು, ಆಡಳಿತಾಧಿಕಾರಿಗಳ ಗಮನಕ್ಕೆ ಇದ್ದರೂ ಇಚ್ಚಾಶಕ್ತಿ ಕೊರತೆಯಿಂದ ಬ್ಯಾಂಕ್ನತ್ತ ಗಮನ ಹರಿಸುತ್ತಿಲ್ಲ. ಇನ್ನಾದರು ಎಚ್ಚೆತ್ತುಕೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಉಪಾಧ್ಯಕ್ಷ ಮಂಜುನಾಥ್, ಸೋಮಶೇಖರ್, ರಮೇಶ್, ಎಂ.ಬೈಯ್ಯಣ್ಣ, ಬಿ.ಎಂ.ರಾಮೇಗೌಡ, ಕುಮಾರಚಾರಿ, ಮುನಿಕೃಷ್ಣಪ್ಪ, ಸುರೇಶ್, ಸಿ.ಡಿ.ರಾಮಚಂದ್ರೇಗೌಡ, ಗೋಪಾಲಕೃಷ್ಣ, ರಾಜಣ್ಣ, ಸಿಇಒ ಮುನೀಶ್ವರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>