<p><strong>ಕೋಲಾರ: ‘</strong>ವಿದ್ಯಾರ್ಥಿಗಳು ಕೇವಲ ಪದವಿ ಪಡೆದರೆ ಸಾಲದು. ಜತೆಗೆ ಕೌಶಲ ತರಬೇತಿ ಪಡೆದುಕೊಂಡಾಗ ಮಾತ್ರ ಆಸಕ್ತ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಸಾಧ್ಯ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಕೆ.ಆರ್.ವೇಣುಗೋಪಾಲ್ ಅಭಿಪ್ರಾಯಪಟ್ಟರು.</p>.<p>ಇಲ್ಲಿ ಗುರುವಾರ ನಡೆದ ಶ್ರೀ ದಾನಮ್ಮ ಚನ್ನಬಸವಯ್ಯ (ಎಸ್ಡಿಸಿ) ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ‘ಪದವಿ ಜತೆಗೆ ಕೌಶಲ ತರಬೇತಿ ಪಡೆದಾಗ ಮಾತ್ರ ಜೀವನದ ಗುರಿ ಸಾಧಿಸಬಹುದು’ ಎಂದು ಕಿವಿಮಾತು ಹೇಳಿದರು.</p>.<p>‘ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಬೆರಳ ತುದಿಯಲ್ಲೇ ಮಾಹಿತಿ ಸಿಗುತ್ತದೆ. ಇದನ್ನು ಜ್ಞಾನವನ್ನಾಗಿಸಿಕೊಳ್ಳುವ ಜಾಣ್ಮೆ ವಿದ್ಯಾರ್ಥಿಗಳಲ್ಲಿ ಇರಬೇಕು. ನಿರಂತರ ಕಲಿಕೆ ಮೂಲಕ ಜ್ಞಾನವನ್ನು ಅವಶ್ಯಕತೆಗೆ ಅನುಗುಣವಾಗಿ ಕೌಶಲವಾಗಿಸಿಕೊಳ್ಳುವ ಚತುರತೆಯೂ ಇರಬೇಕು’ ಎಂದರು.</p>.<p>‘ಕೇವಲ ಪದವೀಧರರಾದರೆ ಪ್ರಯೋಜನವಿಲ್ಲ. ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಪದವಿಯ ಅರ್ಹತೆ ಬೇಕಾಗುತ್ತದೆ. ನಂತರ ಲಿಖಿತ ಪರೀಕ್ಷೆ, ಸಂದರ್ಶನ ಎದುರಿಸಲು ಸನ್ನದ್ಧರಾಗಬೇಕು. ಪದವಿ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜವಾಬ್ದಾರಿ ಹೆಚ್ಚಾಗಿದೆ’ ಎಂದು ತಿಳಿಸಿದರು.</p>.<p>‘ಹಿಂದಿನ ಒಂದು ದಶಕಕ್ಕೆ ಹೋಲಿಸಿದರೆ ಈಗ ತಂತ್ರಜ್ಞಾನ ಸಾವಿರಪಟ್ಟು ಬೆಳೆದಿದೆ. ಜೈವಿಕ ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರದಲ್ಲಿನ ಆವಿಷ್ಕಾರದಿಂದ ಕೃತಕ ಅಂಗಾಂಗ ಸೃಷ್ಟಿ ಸಾಧ್ಯವಾಗಿದೆ. ಇಂದು ಕಲಿತ ಕೋರ್ಸ್ ನಾಳೆ ಪ್ರಯೋಜನಕ್ಕೆ ಬರುವುದಿಲ್ಲ. ಆದ ಕಾರಣ ಕಲಿಕೆ ನಿರಂತರವಾಗಿರಬೇಕು’ ಎಂದು ಸಲಹೆ ನೀಡಿದರು.</p>.<p><strong>ಪರಿಶ್ರಮ ಅತ್ಯಗತ್ಯ</strong>: ‘ಮನುಷ್ಯನಿಗೆ ನಿತ್ಯ ಜೀವನದಲ್ಲಿ 8 ತಾಸು ನಿದ್ದೆ ಅವಶ್ಯಕ. ಕಾರ್ಯ ಕ್ಷೇತ್ರದಲ್ಲಿ ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆ ಅತ್ಯಗತ್ಯ. ಆರೋಗ್ಯವಂತ ದೇಹದಲ್ಲಿ ಆರೋಗ್ಯವಂತ ಮನಸ್ಸು ಇರುತ್ತದೆ. ಉತ್ತಮ ಆರೋಗ್ಯಕ್ಕೆ ಸಕಾಲದಲ್ಲಿ ಆಹಾರ ಸೇವನೆ, ಯೋಗ, ಧ್ಯಾನ ಅವಶ್ಯಕ’ ಎಂದು ತಿಳಿಸಿದರು.</p>.<p>‘ಮಾದಕ ವಸ್ತುಗಳು, ಧೂಮಪಾನ, ಮದ್ಯಪಾನ ಒಳ್ಳೆಯದಲ್ಲ. ಇಂದು ಹೆಣ್ಣು ಮಕ್ಕಳು ಕೂಡ ಕುಡಿತದ ಚಟಕ್ಕೆ ಬಿದ್ದಿರುವುದು ದುರಂತ. ಧೂಮಪಾನದಿಂದ ಗರ್ಭಕೋಶಕ್ಕೆ ಅಪಾಯ’ ಎಂದು ಎಚ್ಚರಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲೆ ಕೆ.ಪುಷ್ಪಲತಾ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಬೆಂಗಳೂರು ವಿ.ವಿಯ ಬಿ.ಕಾಂ ಕೋರ್ಸ್ನಲ್ಲಿ ರ್ಯಾಂಕ್ಪಡೆದಿರುವ ಕಾಲೇಜಿನ ವಿದ್ಯಾರ್ಥಿನಿ ಎನ್.ಸುನಿತಾ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.</p>.<p>ಎಸ್ಡಿಸಿ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಉಷಾ ಗಂಗಾಧರ್, ಟ್ರಸ್ಟಿ ತ್ರಿಶೂಲ್, ಬೆಂಗಳೂರು ವಿವಿ ಕುಲಸಚಿವ ಬಿ.ಕೆ.ರವಿ, ಬೆಂಗಳೂರು ಉತ್ತರ ವಿ.ವಿ ಕುಲಸಚಿವ ಎಂ.ಎಸ್.ರೆಡ್ಡಿ, ಬಂಗಾರಪೇಟೆಯ ಎಸ್ಡಿಸಿ ಕಾಲೇಜು ಪ್ರಾಂಶುಪಾಲ ಜಗದೀಶ್, ಮುಳಬಾಗಿಲಿನ ಎಸ್ಡಿಸಿ ಕಾಲೇಜು ಪ್ರಾಂಶುಪಾಲ ಸೈಫುಲ್ಲಾಖಾನ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: ‘</strong>ವಿದ್ಯಾರ್ಥಿಗಳು ಕೇವಲ ಪದವಿ ಪಡೆದರೆ ಸಾಲದು. ಜತೆಗೆ ಕೌಶಲ ತರಬೇತಿ ಪಡೆದುಕೊಂಡಾಗ ಮಾತ್ರ ಆಸಕ್ತ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಸಾಧ್ಯ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಕೆ.ಆರ್.ವೇಣುಗೋಪಾಲ್ ಅಭಿಪ್ರಾಯಪಟ್ಟರು.</p>.<p>ಇಲ್ಲಿ ಗುರುವಾರ ನಡೆದ ಶ್ರೀ ದಾನಮ್ಮ ಚನ್ನಬಸವಯ್ಯ (ಎಸ್ಡಿಸಿ) ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ‘ಪದವಿ ಜತೆಗೆ ಕೌಶಲ ತರಬೇತಿ ಪಡೆದಾಗ ಮಾತ್ರ ಜೀವನದ ಗುರಿ ಸಾಧಿಸಬಹುದು’ ಎಂದು ಕಿವಿಮಾತು ಹೇಳಿದರು.</p>.<p>‘ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಬೆರಳ ತುದಿಯಲ್ಲೇ ಮಾಹಿತಿ ಸಿಗುತ್ತದೆ. ಇದನ್ನು ಜ್ಞಾನವನ್ನಾಗಿಸಿಕೊಳ್ಳುವ ಜಾಣ್ಮೆ ವಿದ್ಯಾರ್ಥಿಗಳಲ್ಲಿ ಇರಬೇಕು. ನಿರಂತರ ಕಲಿಕೆ ಮೂಲಕ ಜ್ಞಾನವನ್ನು ಅವಶ್ಯಕತೆಗೆ ಅನುಗುಣವಾಗಿ ಕೌಶಲವಾಗಿಸಿಕೊಳ್ಳುವ ಚತುರತೆಯೂ ಇರಬೇಕು’ ಎಂದರು.</p>.<p>‘ಕೇವಲ ಪದವೀಧರರಾದರೆ ಪ್ರಯೋಜನವಿಲ್ಲ. ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಪದವಿಯ ಅರ್ಹತೆ ಬೇಕಾಗುತ್ತದೆ. ನಂತರ ಲಿಖಿತ ಪರೀಕ್ಷೆ, ಸಂದರ್ಶನ ಎದುರಿಸಲು ಸನ್ನದ್ಧರಾಗಬೇಕು. ಪದವಿ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜವಾಬ್ದಾರಿ ಹೆಚ್ಚಾಗಿದೆ’ ಎಂದು ತಿಳಿಸಿದರು.</p>.<p>‘ಹಿಂದಿನ ಒಂದು ದಶಕಕ್ಕೆ ಹೋಲಿಸಿದರೆ ಈಗ ತಂತ್ರಜ್ಞಾನ ಸಾವಿರಪಟ್ಟು ಬೆಳೆದಿದೆ. ಜೈವಿಕ ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರದಲ್ಲಿನ ಆವಿಷ್ಕಾರದಿಂದ ಕೃತಕ ಅಂಗಾಂಗ ಸೃಷ್ಟಿ ಸಾಧ್ಯವಾಗಿದೆ. ಇಂದು ಕಲಿತ ಕೋರ್ಸ್ ನಾಳೆ ಪ್ರಯೋಜನಕ್ಕೆ ಬರುವುದಿಲ್ಲ. ಆದ ಕಾರಣ ಕಲಿಕೆ ನಿರಂತರವಾಗಿರಬೇಕು’ ಎಂದು ಸಲಹೆ ನೀಡಿದರು.</p>.<p><strong>ಪರಿಶ್ರಮ ಅತ್ಯಗತ್ಯ</strong>: ‘ಮನುಷ್ಯನಿಗೆ ನಿತ್ಯ ಜೀವನದಲ್ಲಿ 8 ತಾಸು ನಿದ್ದೆ ಅವಶ್ಯಕ. ಕಾರ್ಯ ಕ್ಷೇತ್ರದಲ್ಲಿ ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆ ಅತ್ಯಗತ್ಯ. ಆರೋಗ್ಯವಂತ ದೇಹದಲ್ಲಿ ಆರೋಗ್ಯವಂತ ಮನಸ್ಸು ಇರುತ್ತದೆ. ಉತ್ತಮ ಆರೋಗ್ಯಕ್ಕೆ ಸಕಾಲದಲ್ಲಿ ಆಹಾರ ಸೇವನೆ, ಯೋಗ, ಧ್ಯಾನ ಅವಶ್ಯಕ’ ಎಂದು ತಿಳಿಸಿದರು.</p>.<p>‘ಮಾದಕ ವಸ್ತುಗಳು, ಧೂಮಪಾನ, ಮದ್ಯಪಾನ ಒಳ್ಳೆಯದಲ್ಲ. ಇಂದು ಹೆಣ್ಣು ಮಕ್ಕಳು ಕೂಡ ಕುಡಿತದ ಚಟಕ್ಕೆ ಬಿದ್ದಿರುವುದು ದುರಂತ. ಧೂಮಪಾನದಿಂದ ಗರ್ಭಕೋಶಕ್ಕೆ ಅಪಾಯ’ ಎಂದು ಎಚ್ಚರಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲೆ ಕೆ.ಪುಷ್ಪಲತಾ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಬೆಂಗಳೂರು ವಿ.ವಿಯ ಬಿ.ಕಾಂ ಕೋರ್ಸ್ನಲ್ಲಿ ರ್ಯಾಂಕ್ಪಡೆದಿರುವ ಕಾಲೇಜಿನ ವಿದ್ಯಾರ್ಥಿನಿ ಎನ್.ಸುನಿತಾ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.</p>.<p>ಎಸ್ಡಿಸಿ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಉಷಾ ಗಂಗಾಧರ್, ಟ್ರಸ್ಟಿ ತ್ರಿಶೂಲ್, ಬೆಂಗಳೂರು ವಿವಿ ಕುಲಸಚಿವ ಬಿ.ಕೆ.ರವಿ, ಬೆಂಗಳೂರು ಉತ್ತರ ವಿ.ವಿ ಕುಲಸಚಿವ ಎಂ.ಎಸ್.ರೆಡ್ಡಿ, ಬಂಗಾರಪೇಟೆಯ ಎಸ್ಡಿಸಿ ಕಾಲೇಜು ಪ್ರಾಂಶುಪಾಲ ಜಗದೀಶ್, ಮುಳಬಾಗಿಲಿನ ಎಸ್ಡಿಸಿ ಕಾಲೇಜು ಪ್ರಾಂಶುಪಾಲ ಸೈಫುಲ್ಲಾಖಾನ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>