ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಗರ್ಭಿಣಿ ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ಸೋಮವಾರ ಮಧ್ಯಾಹ್ನ 2.45ಕ್ಕೆ ಬಂದು ಆಸ್ಪತ್ರೆ ಮುಂಭಾಗ ಕುಳಿತಿದ್ದಾಳೆ. ಅಲ್ಲಿನ ವೈದ್ಯಾಧಿಕಾರಿ ಡಾ.ಶಿವಕುಮಾರ್ ಕಾರ್ಯ ನಿಮಿತ್ತ ಹೊರಗೆ ಹೋಗಿದ್ದು ಆಸ್ಪತ್ರೆಗೆ ಸಂಜೆ 5 ಗಂಟೆಗೆ ಬಂದು ಮಹಿಳೆಯನ್ನು ತಪಾಸಣೆ ಮಾಡಿ ಸ್ಕ್ಯಾನ್ ಮಾಡಿಸಿಕೊಂಡು ಬರಲು ತಿಳಿಸಿದ್ದಾರೆ’ ಎಂದರು.