<p><strong>ಕೋಲಾರ:</strong> ‘ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು 1ರಿಂದ 5ರವರೆಗೆ ತರಗತಿ ಆರಂಭಿಸಿರುವ ಮಾಹಿತಿ ಬಂದಿದೆ. ಆ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಎಚ್ಚರಿಕೆ ನೀಡಿದರು.</p>.<p>ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘1ರಿಂದ 5ರವರೆಗೆ ತರಗತಿ ಆರಂಭಿಸುವಂತೆ ಒತ್ತಡವಿದೆ. ಆದರೆ, ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಮತ್ತೆ ಬದಲಾಗಿದೆ. 10 ದಿನದ ಹಿಂದೆ ಕೊರೊನಾ ಸೋಂಕಿನ ಸಂಖ್ಯೆ 350ಕ್ಕೆ ಇಳಿದಿತ್ತು. ಈಗ 700ಕ್ಕೆ ಏರಿಕೆಯಾಗಿದೆ’ ಎಂದರು.</p>.<p>‘ಕೋವಿಡ್ 2ನೇ ಅಲೆಯ ಆತಂಕ ಎದುರಾಗಿದೆ. ರಾಜ್ಯದಲ್ಲಿ ಪುನಃ ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಕೊರೊನಾ ವಿಚಾರವಾಗಿ ರಾಜ್ಯದಲ್ಲಿ ಪರಿಸ್ಥಿತಿ ನಿರ್ವಹಣೆ ಅಚ್ಚುಕಟ್ಟಾಗಿದೆ. ಮಹಾರಾಷ್ಟ್ರ ಹಾಗೂ ಕೇರಳ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಮಕ್ಕಳ ಯೋಗ ಕ್ಷೇಮದ ಕಾರಣಕ್ಕೆ ಸರ್ಕಾರ ಶೈಕ್ಷಣಿಕ ವರ್ಷ ಆರಂಭಿಸಿಲ್ಲ. ಸರ್ಕಾರದ ನಿರ್ಧಾರವನ್ನು ಎಲ್ಲರೂ ಪಾಲಿಸಿ, ಗೌರವಿಸಬೇಕು. ಆದರೆ, ಖಾಸಗಿ ಶಿಕ್ಷಣ ಸಂಸ್ಥೆಗಳು ಈ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲೇರಿವೆ. ನ್ಯಾಯಾಲಯದಲ್ಲಿ ಮಾರ್ಚ್ 24ರಂದು ವಿಚಾರಣೆ ನಡೆಯಲಿದೆ. ಆರೋಗ್ಯ ಇಲಾಖೆ ಸಲಹೆಯಂತೆ ತರಗತಿ ಆರಂಭದ ಬಗ್ಗೆ ತೀರ್ಮಾನ ಮಾಡುತ್ತೇವೆ’ ಎಂದು ಹೇಳಿದರು.</p>.<p>‘ಕೋವಿಡ್ ಕಾರಣಕ್ಕೆ ಶಿಕ್ಷಣ ಇಲಾಖೆಗೆ ಅನುದಾನ ಕಡಿಮೆಯಾಗಿದೆ. ಮಧ್ಯಾಹ್ನದ ಬಿಸಿಯೂಟ ಆರಂಭಕ್ಕೆ ಅನುದಾನ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಆದರೆ, ಕೇಂದ್ರವು ಮಧ್ಯಾಹ್ನ ಬಿಸಿಯೂಟ ಆರಂಭಕ್ಕೆ ಹಸಿರು ನಿಶಾನೆ ತೋರಿಲ್ಲ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು 1ರಿಂದ 5ರವರೆಗೆ ತರಗತಿ ಆರಂಭಿಸಿರುವ ಮಾಹಿತಿ ಬಂದಿದೆ. ಆ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಎಚ್ಚರಿಕೆ ನೀಡಿದರು.</p>.<p>ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘1ರಿಂದ 5ರವರೆಗೆ ತರಗತಿ ಆರಂಭಿಸುವಂತೆ ಒತ್ತಡವಿದೆ. ಆದರೆ, ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಮತ್ತೆ ಬದಲಾಗಿದೆ. 10 ದಿನದ ಹಿಂದೆ ಕೊರೊನಾ ಸೋಂಕಿನ ಸಂಖ್ಯೆ 350ಕ್ಕೆ ಇಳಿದಿತ್ತು. ಈಗ 700ಕ್ಕೆ ಏರಿಕೆಯಾಗಿದೆ’ ಎಂದರು.</p>.<p>‘ಕೋವಿಡ್ 2ನೇ ಅಲೆಯ ಆತಂಕ ಎದುರಾಗಿದೆ. ರಾಜ್ಯದಲ್ಲಿ ಪುನಃ ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಕೊರೊನಾ ವಿಚಾರವಾಗಿ ರಾಜ್ಯದಲ್ಲಿ ಪರಿಸ್ಥಿತಿ ನಿರ್ವಹಣೆ ಅಚ್ಚುಕಟ್ಟಾಗಿದೆ. ಮಹಾರಾಷ್ಟ್ರ ಹಾಗೂ ಕೇರಳ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಮಕ್ಕಳ ಯೋಗ ಕ್ಷೇಮದ ಕಾರಣಕ್ಕೆ ಸರ್ಕಾರ ಶೈಕ್ಷಣಿಕ ವರ್ಷ ಆರಂಭಿಸಿಲ್ಲ. ಸರ್ಕಾರದ ನಿರ್ಧಾರವನ್ನು ಎಲ್ಲರೂ ಪಾಲಿಸಿ, ಗೌರವಿಸಬೇಕು. ಆದರೆ, ಖಾಸಗಿ ಶಿಕ್ಷಣ ಸಂಸ್ಥೆಗಳು ಈ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲೇರಿವೆ. ನ್ಯಾಯಾಲಯದಲ್ಲಿ ಮಾರ್ಚ್ 24ರಂದು ವಿಚಾರಣೆ ನಡೆಯಲಿದೆ. ಆರೋಗ್ಯ ಇಲಾಖೆ ಸಲಹೆಯಂತೆ ತರಗತಿ ಆರಂಭದ ಬಗ್ಗೆ ತೀರ್ಮಾನ ಮಾಡುತ್ತೇವೆ’ ಎಂದು ಹೇಳಿದರು.</p>.<p>‘ಕೋವಿಡ್ ಕಾರಣಕ್ಕೆ ಶಿಕ್ಷಣ ಇಲಾಖೆಗೆ ಅನುದಾನ ಕಡಿಮೆಯಾಗಿದೆ. ಮಧ್ಯಾಹ್ನದ ಬಿಸಿಯೂಟ ಆರಂಭಕ್ಕೆ ಅನುದಾನ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಆದರೆ, ಕೇಂದ್ರವು ಮಧ್ಯಾಹ್ನ ಬಿಸಿಯೂಟ ಆರಂಭಕ್ಕೆ ಹಸಿರು ನಿಶಾನೆ ತೋರಿಲ್ಲ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>