<p><strong>ಕೋಲಾರ: </strong>‘ಸಾಲದ ಕಂತು ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿರುವ ಫಲಾನುಭವಿ ಮನೆ ಬಾಗಿಲಿಗೆ ಹೋಗಿ ವಸೂಲಿ ಮಾಡಬೇಕು, ಎನ್ಪಿಎ ಪ್ರಮಾಣ ಕಡಿಮೆ ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮಜರುಗಿಸಬೇಕಾಗುತ್ತದೆ’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಎಚ್ಚರಿಕೆ ನೀಡಿದರು.</p>.<p>ನಗರದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಗುರಿ ಮೀರಿ ಬ್ಯಾಂಕಿನಿಂದ ವಿವಿಧ ರೀತಿಯ ಸಾಲ ನೀಡಲಾಗಿದೆ. ಕೆಲವರು ಕಂತುಗಳನ್ನು ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದ್ದಾರೆ. ಮಾರ್ಚ್ ಅಂತ್ಯದೊಳಗೆ ವಸೂಲಿಯಾಗಿರಬೇಕು’ ಎಂದು ತಾಕೀತು ಮಾಡಿದರು.</p>.<p>‘ಎನ್ಪಿಎ ಶೇ.3.2ರಷ್ಟಿದ್ದು, ಕಳೆದ ವಾರ ಜಿಲ್ಲೆಗೆ ಬೇಟಿ ನೀಡಿದ್ದ ನಬಾರ್ಡ್ ಅಧಿಕಾರಿಗಳು ಇನ್ನು ಕಡಿಮೆ ಮಾಡಲು ತಿಳಿಸಿದ್ದಾರೆ. ₨400 ಕೋಟಿ ಠೇವಣಿ ಸಂಗ್ರಹಿಸುವ ಮೂಲಕ ಎನ್ಪಿಎ ಶೇ.2ಕ್ಕೆ ಇಳಿಸಬೇಕು. ಎರಡೂ ಜಿಲ್ಲೆಯಲ್ಲಿ ಈ ಭಾಗಿ ₨ 1 ಸಾವಿರ ಕೋಟಿ ಸಾಲ ವಿತರಣೆಗೆ ಯೋಜನೆ ರೂಪಿಸಲಾಗಿದೆ. ಅಧಿಕಾರಿಗಳು, ಆಡಳಿತ ಮಂಡಳಿಯವರು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಿದರೆ ಗುರಿ ಸಾಧನೆಗೆ ಖಚಿತ’ ಎಂದು ಹೇಳಿದರು.</p>.<p>‘ಅಧಿಕಾರಿಗಳು ಠೇವಣಿ ಸಂಗ್ರಹದ ಗುರಿ ಸಾಧನೆ ಮಾಡುವುದಾಗಿ ತಿಳಿಸಿದ್ದೀರಿ, ಈಗ ಈ ಸಾಧನೆಗೆ ಹಿನ್ನಡೆಯಾದರೆ ಹೇಗೆ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಅನ್ನ ನೀಡಿ ಪೋಷಿಸುತ್ತಿರುವ ಬ್ಯಾಂಕ್ಗೆ ದ್ರೋಹ ಮಾಡಿದರೆ ಹೇಗೆ ಎಂದು ಆತ್ಮಾವಲೋಕನ ಮಾಡಿಕೊಳ್ಳಿ, ಒಪ್ಪಿಕೊಂಡ ಕೆಲಸವನ್ನು ಪ್ರಮಾಣಿಕತೆಯಿಂದ ಮಾಡಿ ತೋರಿಸಿ’ ಎಂದು ಸಲಹೆ ನೀಡಿದರು.</p>.<p>‘ಹುದುಕುಳ ಸೊಸೈಟಿಯಲ್ಲಿ ಯಾವೂದೇ ಅವ್ಯವಹಾರಗಳು ನಡೆದಿಲ್ಲ. ಕಾರ್ಯದರ್ಶಿಯ ಕರ್ತವ್ಯ ಲೋಪದಿಂದ ಉಂಟಾಗಿದ್ದ ವ್ಯತ್ಯಾಸಗಳನ್ನು ಸರಿಪಡಿಸಲಾಗಿದೆ. ಆ ಸಂಘದ ನಿರ್ದೇಶಕನ ಕುಟುಂಬದ ಸದಸ್ಯರು ಬ್ಯಾಂಕಿಗೆ ಕೆಟ್ಟ ಹೆಸರು ತರಲು ಸಭೆಯಲ್ಲಿ ಗಲಭೆ ಸೃಷ್ಟಿಸಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಠೇವಣಿ ಸಂಗ್ರಹ ಮತ್ತು ಬಾಕಿ ಕಂತುಗಳ ವಸೂಲಾತಿಯಲ್ಲಿ ಅಧಿಕಾರಿಗಳು ರಾಜಿಯಾಗಬಾರದು. ಬ್ಯಾಂಕ್ ಈಗ ಸವಾಲಿನ ದಿಕ್ಕಿನಲ್ಲಿ ನಡೆಯುತ್ತಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಕೊಂಡು ಕೆಲಸ ನಿರ್ವಹಿಸಬೇಕು’ ಎಂದು ತಿಳಿಸಿದರು.</p>.<p>‘ಈ ಭಾರಿ ಶಿಡ್ಲಘಟ್ಟ ಮತ್ತು ಚಿಕ್ಕಬಳ್ಳಾಪುರ ಭಾಗದಲ್ಲಿನ ಮಹಿಳಾ ಸಂಘಗಳಿಗೆ ಸಾಲ ವಿತರಿಸಲು ಆದ್ಯತೆ ನೀಡಲಾಗುವುದು. ಕೆಸಿಸಿ ಸಾಲ ವಸೂಲಿ ಮಾ.10ರೊಳಗೆ ಆಗಬೇಕು. ನಬಾರ್ಡ್ ಮತ್ತು ಅಪೆಕ್ಸ್ ಬ್ಯಾಂಕಿನ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಪ್ರಮಾಣಿಕವಾಗಿ ಕೆಲಸ ಮಾಡಬೇಕು’ ಎಂದು ಕವಿಮಾತು ಹೇಳಿದರು.</p>.<p>ನಿರ್ದೇಶಕರಾದ ಸೋಮಣ್ಣ, ಎಂ.ಎಲ್.ಅನಿಲ್ ಕುಮಾರ್, ಕೆ.ವಿ.ದಯಾನಂದ್, ಹನುಮಂತರೆಡ್ಡಿ, ಮೋಹನ್ರೆಡ್ಡಿ, ಸೊಣ್ಣೇಗೌಡ, ನಾಗೀರೆಡ್ಡಿ, ಬಿ.ವಿ.ವೆಂಕಟರೆಡ್ಡಿ, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ರವಿ, ಎಜಿಎಂಗಳಾದ ಶಿವಕುಮಾರ್, ಬೈರೇಗೌಡ, ಕಲಿಂಮುಲ್ಲಾ, ನಾಗೇಶ್, ಚೌಡಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಸಾಲದ ಕಂತು ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿರುವ ಫಲಾನುಭವಿ ಮನೆ ಬಾಗಿಲಿಗೆ ಹೋಗಿ ವಸೂಲಿ ಮಾಡಬೇಕು, ಎನ್ಪಿಎ ಪ್ರಮಾಣ ಕಡಿಮೆ ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮಜರುಗಿಸಬೇಕಾಗುತ್ತದೆ’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಎಚ್ಚರಿಕೆ ನೀಡಿದರು.</p>.<p>ನಗರದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಗುರಿ ಮೀರಿ ಬ್ಯಾಂಕಿನಿಂದ ವಿವಿಧ ರೀತಿಯ ಸಾಲ ನೀಡಲಾಗಿದೆ. ಕೆಲವರು ಕಂತುಗಳನ್ನು ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದ್ದಾರೆ. ಮಾರ್ಚ್ ಅಂತ್ಯದೊಳಗೆ ವಸೂಲಿಯಾಗಿರಬೇಕು’ ಎಂದು ತಾಕೀತು ಮಾಡಿದರು.</p>.<p>‘ಎನ್ಪಿಎ ಶೇ.3.2ರಷ್ಟಿದ್ದು, ಕಳೆದ ವಾರ ಜಿಲ್ಲೆಗೆ ಬೇಟಿ ನೀಡಿದ್ದ ನಬಾರ್ಡ್ ಅಧಿಕಾರಿಗಳು ಇನ್ನು ಕಡಿಮೆ ಮಾಡಲು ತಿಳಿಸಿದ್ದಾರೆ. ₨400 ಕೋಟಿ ಠೇವಣಿ ಸಂಗ್ರಹಿಸುವ ಮೂಲಕ ಎನ್ಪಿಎ ಶೇ.2ಕ್ಕೆ ಇಳಿಸಬೇಕು. ಎರಡೂ ಜಿಲ್ಲೆಯಲ್ಲಿ ಈ ಭಾಗಿ ₨ 1 ಸಾವಿರ ಕೋಟಿ ಸಾಲ ವಿತರಣೆಗೆ ಯೋಜನೆ ರೂಪಿಸಲಾಗಿದೆ. ಅಧಿಕಾರಿಗಳು, ಆಡಳಿತ ಮಂಡಳಿಯವರು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಿದರೆ ಗುರಿ ಸಾಧನೆಗೆ ಖಚಿತ’ ಎಂದು ಹೇಳಿದರು.</p>.<p>‘ಅಧಿಕಾರಿಗಳು ಠೇವಣಿ ಸಂಗ್ರಹದ ಗುರಿ ಸಾಧನೆ ಮಾಡುವುದಾಗಿ ತಿಳಿಸಿದ್ದೀರಿ, ಈಗ ಈ ಸಾಧನೆಗೆ ಹಿನ್ನಡೆಯಾದರೆ ಹೇಗೆ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಅನ್ನ ನೀಡಿ ಪೋಷಿಸುತ್ತಿರುವ ಬ್ಯಾಂಕ್ಗೆ ದ್ರೋಹ ಮಾಡಿದರೆ ಹೇಗೆ ಎಂದು ಆತ್ಮಾವಲೋಕನ ಮಾಡಿಕೊಳ್ಳಿ, ಒಪ್ಪಿಕೊಂಡ ಕೆಲಸವನ್ನು ಪ್ರಮಾಣಿಕತೆಯಿಂದ ಮಾಡಿ ತೋರಿಸಿ’ ಎಂದು ಸಲಹೆ ನೀಡಿದರು.</p>.<p>‘ಹುದುಕುಳ ಸೊಸೈಟಿಯಲ್ಲಿ ಯಾವೂದೇ ಅವ್ಯವಹಾರಗಳು ನಡೆದಿಲ್ಲ. ಕಾರ್ಯದರ್ಶಿಯ ಕರ್ತವ್ಯ ಲೋಪದಿಂದ ಉಂಟಾಗಿದ್ದ ವ್ಯತ್ಯಾಸಗಳನ್ನು ಸರಿಪಡಿಸಲಾಗಿದೆ. ಆ ಸಂಘದ ನಿರ್ದೇಶಕನ ಕುಟುಂಬದ ಸದಸ್ಯರು ಬ್ಯಾಂಕಿಗೆ ಕೆಟ್ಟ ಹೆಸರು ತರಲು ಸಭೆಯಲ್ಲಿ ಗಲಭೆ ಸೃಷ್ಟಿಸಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಠೇವಣಿ ಸಂಗ್ರಹ ಮತ್ತು ಬಾಕಿ ಕಂತುಗಳ ವಸೂಲಾತಿಯಲ್ಲಿ ಅಧಿಕಾರಿಗಳು ರಾಜಿಯಾಗಬಾರದು. ಬ್ಯಾಂಕ್ ಈಗ ಸವಾಲಿನ ದಿಕ್ಕಿನಲ್ಲಿ ನಡೆಯುತ್ತಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಕೊಂಡು ಕೆಲಸ ನಿರ್ವಹಿಸಬೇಕು’ ಎಂದು ತಿಳಿಸಿದರು.</p>.<p>‘ಈ ಭಾರಿ ಶಿಡ್ಲಘಟ್ಟ ಮತ್ತು ಚಿಕ್ಕಬಳ್ಳಾಪುರ ಭಾಗದಲ್ಲಿನ ಮಹಿಳಾ ಸಂಘಗಳಿಗೆ ಸಾಲ ವಿತರಿಸಲು ಆದ್ಯತೆ ನೀಡಲಾಗುವುದು. ಕೆಸಿಸಿ ಸಾಲ ವಸೂಲಿ ಮಾ.10ರೊಳಗೆ ಆಗಬೇಕು. ನಬಾರ್ಡ್ ಮತ್ತು ಅಪೆಕ್ಸ್ ಬ್ಯಾಂಕಿನ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಪ್ರಮಾಣಿಕವಾಗಿ ಕೆಲಸ ಮಾಡಬೇಕು’ ಎಂದು ಕವಿಮಾತು ಹೇಳಿದರು.</p>.<p>ನಿರ್ದೇಶಕರಾದ ಸೋಮಣ್ಣ, ಎಂ.ಎಲ್.ಅನಿಲ್ ಕುಮಾರ್, ಕೆ.ವಿ.ದಯಾನಂದ್, ಹನುಮಂತರೆಡ್ಡಿ, ಮೋಹನ್ರೆಡ್ಡಿ, ಸೊಣ್ಣೇಗೌಡ, ನಾಗೀರೆಡ್ಡಿ, ಬಿ.ವಿ.ವೆಂಕಟರೆಡ್ಡಿ, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ರವಿ, ಎಜಿಎಂಗಳಾದ ಶಿವಕುಮಾರ್, ಬೈರೇಗೌಡ, ಕಲಿಂಮುಲ್ಲಾ, ನಾಗೇಶ್, ಚೌಡಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>