ಪ್ರಚಾರಕ್ಕೆ ಪ್ರತಿಭಟನೆ: ‘ಜಾಗತಿಕವಾಗಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದರಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ ಪ್ರತಿಭಟಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ತೈಲೋತ್ಪನ್ನಗಳ ಮೇಲಿನ ತೆರಿಗೆ ಇಳಿಸಿದ್ದಾರಾ?. ತೈಲೋತ್ಪನ್ನಗಳ ಬೆಲೆ ಏರಿಕೆಯು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ನ ಪ್ರಶ್ನೆಯಲ್ಲ. ಬದಲಿಗೆ ಇದು ಜಾಗತಿಕ ಸಮಸ್ಯೆ. ಆದರೆ, ಕಾಂಗ್ರೆಸ್ನವರು ಪ್ರಚಾರಕ್ಕಾಗಿ ಪ್ರತಿಭಟಿಸುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.