ನಂಗಲಿ: ತಾತಿಕಲ್ಲು ಸಮೀಪ ಇರುವ ಆದರ್ಶ ವಿದ್ಯಾಲಯದಲ್ಲಿ 2020-21ನೇ ಸಾಲಿನಡಿ ಆರನೇ ತರಗತಿ ಪ್ರವೇಶಕ್ಕೆ ಜುಲೈ 27ರಂದು ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಪ್ರಾಂಶುಪಾಲ ಬಿ.ಕೆ. ನಟರಾಜ್ ತಿಳಿಸಿದ್ದಾರೆ.
ಆದರ್ಶ ಶಾಲೆಯ ದಾಖಲಾತಿಗಾಗಿ ಈ ಹಿಂದೆ ಏ. 25ರಂದು ಪರೀಕ್ಷೆ ನಿಗದಿಪಡಿಸಲಾಗಿತ್ತು. ಆದರೆ, ಕೋವಿಡ್ ಎರಡನೇ ಅಲೆಯ ಲಾಕ್ಡೌನ್ ಕಾರಣದಿಂದ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆಯನ್ನು ರದ್ದುಪಡಿಸಲಾಗಿತ್ತು.
ಕೊರೊನಾ ಸೋಂಕು ಕಡಿಮೆಯಾಗಿರುವುದರಿಂದ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರ ಆದೇಶದಂತೆ ಪರೀಕ್ಷೆ ನಡೆಯಲಿದೆ. ಎಸ್.ಒ.ಪಿ ಪ್ರಕಾರ ಪರೀಕ್ಷಾ ಕೇಂದ್ರಗಳನ್ನು ಸಹ ನಿಗದಿಪಡಿಸಲಾಗಿದೆ. ನಂತರ ಆದರ್ಶ ಶಾಲೆಗೆ ದಾಖಲಾತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.