<p><strong>ಕೋಲಾರ: </strong>‘ವೈಜ್ಞಾನಿಕ ಪದ್ದತಿ ಅಳವಡಿಕೆಯಿಂದ ರೈತರು ಉತ್ತಮ ಬೈವೊಲ್ಟಿನ್ ಗೂಡು ಉತ್ಪಾದನೆ ಮಾಡಬಹುದು’ ಎಂದುರೇಷ್ಮೆಇಲಾಖೆ ಉಪ ನಿರ್ದೇಶಕ ಪ್ರಭಾಕರ್ ತಿಳಿಸಿದರು.</p>.<p>ತಾಲ್ಲೂಕಿನ ಶಾನಬೋಗನಹಳ್ಳಿಯಲ್ಲಿ ರೇಷ್ಮೆ ಇಲಾಖೆಯಿಂದ ಆತ್ಮ ಯೋಜನೆಯಡಿ ಶನಿವಾರ ರೇಷ್ಮೆ ಬೆಳೆಗಾರರಿಗೆ ಹಮ್ಮಿಕೊಂಡಿದ್ದ ತರಬೇತಿ ಉದ್ಘಾಟಿಸಿ ಮಾತನಾಡಿ, ‘ಬಹುತೇಕ ರೈತರು ಹಿಂದಿನ ಪದ್ದತಿಯನ್ನೆ ಅಳವಡಿಸುತ್ತಿದ್ದಾರೆ, ವಾತಾವರಣಕ್ಕೆ ತಕ್ಕಂತೆ ಬೆಳೆ ಪದ್ದತಿಯನ್ನು ಬದಲಾವಣೆ ಮಾಡಿಕೊಳ್ಳುವುದರಿಂದ ಉತ್ತಮ ಇಳುವರಿಗಳಿಸಬಹುದು’ ಎಂದು ಹೇಳಿದರು.</p>.<p>‘ವಿದೇಶಿ ರೇಷ್ಮೆ ಪೈಪೋಟಿ ಎದುರಿಸಲು ಆಮದು ಶುಲ್ಕ ಹೆಚ್ಚಿಸಬೇಕಾಗಿದೆ. ಇದರಿಂದ ರೈತರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಜತೆಗೆ ಗುಣಮಟ್ಟದ ಬೈವೊಲ್ಟಿನ್ ಗೂಡು ಬೆಳೆಯಲು ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.</p>.<p>‘ನರೇಗಾ ಅನುಷ್ಟಾನದಲ್ಲಿ ಜಿಲ್ಲೆಯ ರೇಷ್ಮೆ ಇಲಾಖೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಹೊಸದಾಗಿ ಹಿಪ್ಪುನೇರಳ ಬೆಳೆ ನಾಟಿ ಮಾಡುವವರಿಗೆ ಮೊದಲ ವರ್ಷ ₨ 1 ಲಕ್ಷ ಹಾಗೂ ಎರಡು ವರ್ಷ ನಿರ್ವಹಣೆಗೆ ₨ 1.80,00 ಸಹಾಯಧನ ನೀಡಲಾಗುತ್ತಿದ್ದು, ಇದರ ಪ್ರಯೋಜನೆ ಪಡೆದುಕೊಳ್ಳಲು ರೈತರು ಮುಂದೆ ಬರಬೇಕು’ ಎಂದು ಕೋರಿದರು.</p>.<p>ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಮಾತನಾಡಿ, ‘ರೇಷ್ಮೆ ಬೆಳೆಗಾರರು ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಿಕೊಂಡು ಬೈವೊಲ್ಟಿನ್ ಗೂಡು ಉತ್ಪಾದನೆಗೆ ಒತ್ತು ನೀಡಬೇಕು, ಇದರಿಂದ ಆರ್ಥಿಕವಾಗಿಯೂ ಸದೃಢರಾಗಲು ಸಹಕಾರಿಯಾಗುತ್ತದೆ’ ಎಂದು ಹೇಳಿದರು.</p>.<p>‘ರೈತರು ಬೈವೋಲ್ಟಿನ್ ರೇಷ್ಮೆ ಹುಳು ಸಾಕಾಣಿಕೆಯಲ್ಲಿ ಅನುಸರಿಸಬೇಕಾದ ವೈಜ್ಞಾನಿಕ ವಿಧಾನಗಳು ಹಾಗೂ ರೋಗ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಲಾಖೆ ನೀಡುತ್ತಿರುವ ಅರಿವು ಕಾರ್ಯಕ್ರಮಗಳ ಪ್ರಯೋಜನೆ ಪಡೆದುಕೊಳ್ಳಬೇಕು’ ಎಂದು ಕೋರಿದರು.</p>.<p>ಕೇಂದ್ರ ರೇಷ್ಮೆ ಮಂಡಳಿ ವಿಜ್ಞಾನಿ ಮಾರಿಸನ್, ರೇಷ್ಮೆ ಸಹಾಯಕ ಅಧಿಕಾರಿಗಳಾದ ಕಲಾವತಿ, ಎಸ್.ಎನ್.ಶ್ರೀನಿವಾಸ್, ವಿಜ್ಞಾನಿಗಳಾದ ಶಶಿಧರ್, ಕಲ್ಯಾಣ್ ರಾಮ್, ವಿಸ್ತರಣಾಧಿಕಾರಿಗಳಾದ ಬೈರೇಗೌಡ, ಚಂದ್ರಶೇಖರ್, ನಾರಾಯಣಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ವೈಜ್ಞಾನಿಕ ಪದ್ದತಿ ಅಳವಡಿಕೆಯಿಂದ ರೈತರು ಉತ್ತಮ ಬೈವೊಲ್ಟಿನ್ ಗೂಡು ಉತ್ಪಾದನೆ ಮಾಡಬಹುದು’ ಎಂದುರೇಷ್ಮೆಇಲಾಖೆ ಉಪ ನಿರ್ದೇಶಕ ಪ್ರಭಾಕರ್ ತಿಳಿಸಿದರು.</p>.<p>ತಾಲ್ಲೂಕಿನ ಶಾನಬೋಗನಹಳ್ಳಿಯಲ್ಲಿ ರೇಷ್ಮೆ ಇಲಾಖೆಯಿಂದ ಆತ್ಮ ಯೋಜನೆಯಡಿ ಶನಿವಾರ ರೇಷ್ಮೆ ಬೆಳೆಗಾರರಿಗೆ ಹಮ್ಮಿಕೊಂಡಿದ್ದ ತರಬೇತಿ ಉದ್ಘಾಟಿಸಿ ಮಾತನಾಡಿ, ‘ಬಹುತೇಕ ರೈತರು ಹಿಂದಿನ ಪದ್ದತಿಯನ್ನೆ ಅಳವಡಿಸುತ್ತಿದ್ದಾರೆ, ವಾತಾವರಣಕ್ಕೆ ತಕ್ಕಂತೆ ಬೆಳೆ ಪದ್ದತಿಯನ್ನು ಬದಲಾವಣೆ ಮಾಡಿಕೊಳ್ಳುವುದರಿಂದ ಉತ್ತಮ ಇಳುವರಿಗಳಿಸಬಹುದು’ ಎಂದು ಹೇಳಿದರು.</p>.<p>‘ವಿದೇಶಿ ರೇಷ್ಮೆ ಪೈಪೋಟಿ ಎದುರಿಸಲು ಆಮದು ಶುಲ್ಕ ಹೆಚ್ಚಿಸಬೇಕಾಗಿದೆ. ಇದರಿಂದ ರೈತರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಜತೆಗೆ ಗುಣಮಟ್ಟದ ಬೈವೊಲ್ಟಿನ್ ಗೂಡು ಬೆಳೆಯಲು ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.</p>.<p>‘ನರೇಗಾ ಅನುಷ್ಟಾನದಲ್ಲಿ ಜಿಲ್ಲೆಯ ರೇಷ್ಮೆ ಇಲಾಖೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಹೊಸದಾಗಿ ಹಿಪ್ಪುನೇರಳ ಬೆಳೆ ನಾಟಿ ಮಾಡುವವರಿಗೆ ಮೊದಲ ವರ್ಷ ₨ 1 ಲಕ್ಷ ಹಾಗೂ ಎರಡು ವರ್ಷ ನಿರ್ವಹಣೆಗೆ ₨ 1.80,00 ಸಹಾಯಧನ ನೀಡಲಾಗುತ್ತಿದ್ದು, ಇದರ ಪ್ರಯೋಜನೆ ಪಡೆದುಕೊಳ್ಳಲು ರೈತರು ಮುಂದೆ ಬರಬೇಕು’ ಎಂದು ಕೋರಿದರು.</p>.<p>ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಮಾತನಾಡಿ, ‘ರೇಷ್ಮೆ ಬೆಳೆಗಾರರು ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಿಕೊಂಡು ಬೈವೊಲ್ಟಿನ್ ಗೂಡು ಉತ್ಪಾದನೆಗೆ ಒತ್ತು ನೀಡಬೇಕು, ಇದರಿಂದ ಆರ್ಥಿಕವಾಗಿಯೂ ಸದೃಢರಾಗಲು ಸಹಕಾರಿಯಾಗುತ್ತದೆ’ ಎಂದು ಹೇಳಿದರು.</p>.<p>‘ರೈತರು ಬೈವೋಲ್ಟಿನ್ ರೇಷ್ಮೆ ಹುಳು ಸಾಕಾಣಿಕೆಯಲ್ಲಿ ಅನುಸರಿಸಬೇಕಾದ ವೈಜ್ಞಾನಿಕ ವಿಧಾನಗಳು ಹಾಗೂ ರೋಗ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಲಾಖೆ ನೀಡುತ್ತಿರುವ ಅರಿವು ಕಾರ್ಯಕ್ರಮಗಳ ಪ್ರಯೋಜನೆ ಪಡೆದುಕೊಳ್ಳಬೇಕು’ ಎಂದು ಕೋರಿದರು.</p>.<p>ಕೇಂದ್ರ ರೇಷ್ಮೆ ಮಂಡಳಿ ವಿಜ್ಞಾನಿ ಮಾರಿಸನ್, ರೇಷ್ಮೆ ಸಹಾಯಕ ಅಧಿಕಾರಿಗಳಾದ ಕಲಾವತಿ, ಎಸ್.ಎನ್.ಶ್ರೀನಿವಾಸ್, ವಿಜ್ಞಾನಿಗಳಾದ ಶಶಿಧರ್, ಕಲ್ಯಾಣ್ ರಾಮ್, ವಿಸ್ತರಣಾಧಿಕಾರಿಗಳಾದ ಬೈರೇಗೌಡ, ಚಂದ್ರಶೇಖರ್, ನಾರಾಯಣಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>