ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾಭಿವೃದ್ಧಿಗೆ ಶ್ರಮಿಸಲು ಸಲಹೆ

Last Updated 3 ಫೆಬ್ರುವರಿ 2020, 12:40 IST
ಅಕ್ಷರ ಗಾತ್ರ

ಕೋಲಾರ: ‘ಇತ್ತೀಚಿನ ದಿನಗಳಲ್ಲಿ ಶಾಲಾ ಅಭಿವೃದ್ಧಿ ಸಮಿತಿಗಳಲ್ಲಿ ರಾಜಕೀಯ ಹೆಚ್ಚಾಗಿದ್ದು, ಶೈಕ್ಷಣಿಕ ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ವಿಷಾದ ವ್ಯಕ್ತಪಡಿಸಿದರು.

ತಾಲ್ಲೂಕಿನ ಕಾಡಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಕ್ಲಸ್ಟರ್ ಮಟ್ಟದ ಎಸ್‌ಡಿಎಂಸಿ ಸದಸ್ಯರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ‘ಶಾಲೆಗಳಲ್ಲಿ ಅಭಿವೃದ್ಧಿಯಲ್ಲಿ ಎಸ್‌ಡಿಎಂಸಿ ಪಾತ್ರ ಮಹತ್ವವಾದದು. ಸದಸ್ಯರು ಸೇವಾಮನೋಭಾವದಿಂದ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

‘ಸಮಿತಿ ಸದಸ್ಯರು ಸ್ಥಳೀಯ ದಾನಿಗಳನ್ನು ಗುರುತಿಸಿ ಅವರಿಂದ ಶಾಲಾ ಅಭಿವೃದ್ಧಿಗೆ ನೆರವು ಪಡೆಯಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರಿ ಜಾರಿಗೆ ತಂದಿರುವ ಯೋಜನೆಗಳ ಕುರಿತು ಪೋಷಕರಿಗೆ ಅರಿವು ಮೂಡಿಸಬೇಕು’ ಎಂದು ಹೇಳಿದರು.

‘ಗ್ರಾಮೀಣ ಪ್ರದೇಶದಲ್ಲಿ ಆಧುನಿಕತೆ ಬೆಳೆದರೂ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ಜೀವಂತವಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ಇಂತಹ ಪ್ರಕರಣಗಳನ್ನು ತಡೆಯಬೇಕು. ೧೪ ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಕ ಕೊಡಿಸಲು ಮುಂದಾಗಬೇಕು’ ಎಂದು ತಿಳಿಸಿದರು.

‘ಅನೇಕ ಕಾರಣಾಂತರಗಳಿಂದ ಮಕ್ಕಳು ಶಾಲೆಗೆ ಗೈರಾಗುತ್ತಿದ್ದಾರೆ. ಶಿಕ್ಷಕರು ಪೋಷಕರ ಮನೆ ಬಾಗಿಲಿಗೆ ಹೋಗಿ ಅರಿವು ಮೂಡಿಸಿದರೂ ಪ್ರಯೋಜನೆಯಾಗುತ್ತಿಲ್ಲ. ಇದಕ್ಕೆ ಎಸ್‌ಡಿಎಂಸಿ ಸದಸ್ಯರು ಕೈಜೋಡಿಸಿದರೆ ಶಾಲೆಬಿಟ್ಟ ಮಕ್ಕಳನ್ನು ಕರೆತರಲು ಅನುಕೂಲವಾಗುತ್ತದೆ’ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ನಿದೇಶಕ ಸೋಮಣ್ಣ, ಮುಖ್ಯ ಶಿಕ್ಷಕ ಅಶ್ವಥ್ಥನಾರಾಯಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT