‘ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಬೇಕೆಂದು ರಾಜ್ಯದಲ್ಲಿ ಬೃಹತ್ ಹೋರಾಟ ನಡೆದಿದ್ದು, ಎಲ್ಲರೂ ಸಹಕಾರ ನೀಡಿದ್ದಾರೆ. ಸಿದ್ದರಾಮಯ್ಯ ಅವರೂ ಸಹಕಾರ ನೀಡಿ ಸಮಾವೇಶಕ್ಕೆ ಬರಬೇಕಿತ್ತು. ಆದರೆ, ಅವರು ಯಾವ ಕಾರಣಕ್ಕೆ ಬರಲಿಲ್ಲ ಎಂಬುದು ಗೊತ್ತಿಲ್ಲ. ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್ಎಸ್ಎಸ್ ಇದೆ, ಸಮಾಜದ ಜಗದ್ಗುರುಗಳು ಕೈಗೊಂಡ ಪಾದಯಾತ್ರೆಗೆ ಆರ್ಎಸ್ಎಸ್ ದುಡ್ಡು ಕೊಟ್ಟಿದೆ ಎಂದು ಸಿದ್ದರಾಮಯ್ಯ ಅವರು ಹೇಳಿಕೆ ನೀಡಿರುವುದಕ್ಕೆ ನೋವಾಗಿದೆ’ ಎಂದರು.