<p><strong>ಕೋಲಾರ</strong>: ಅಕ್ಷಯ ತೃತೀಯ ಪ್ರಯುಕ್ತ ನಗರದ ಚಿನ್ನಾಭರಣ ಮಳಿಗೆಗಳಲ್ಲಿ ಮಂಗಳವಾರ ಚಿನ್ನ, ಬೆಳ್ಳಿ ಹಾಗೂ ವಜ್ರಾದ ಆಭರಣಗಳ ಖರೀದಿ ಭರಾಟೆ ಜೋರಾಗಿತ್ತು.</p>.<p>ಅಕ್ಷಯ ತೃತೀಯ ದಿನದಂದು ಬಂಗಾರ ಕೊಂಡರೆ ವರ್ಷವಿಡೀ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿಂದ ಜನ ಚಿನ್ನಾಭರಣ ಮಳಿಗೆಗಳಿಗೆ ಮುಗಿಬಿದ್ದು ಆಭರಣ ಖರೀದಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಈ ಬಾರಿ ಚಿನ್ನದ ಉಂಗುರ, ಸರ, ನಕ್ಲೆಸ್, ಬಂಗಾರದ ನಾಣ್ಯಗಳಿಗೆ ಹೆಚ್ಚಿನ ಬೇಡಿಕೆ ಇತ್ತು.</p>.<p>ನಗರದ ಸತ್ಯನಾರಾಯಣ, ಸುಶೀಲ್, ರಾಜೇಶ್, ಅನಂತ್, ರಿತಿ, ಬಾಲಕೃಷ್ಣ ಚಿನ್ನಾಭರಣ ಮಳಿಗೆಗಳು ಗ್ರಾಹಕರಿಂದ ತುಂಬಿ ಹೋಗಿದ್ದವು. ಚಿನ್ನಾಭರಣ ಮಳಿಗೆಗಳ ಅಕ್ಕಪಕ್ಕದ ರಸ್ತೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.</p>.<p>‘ಅಕ್ಷಯ ತೃತೀಯ ಸಂದರ್ಭದಲ್ಲಿ ಚಿನ್ನ ಖರೀದಿಸಿದರೆ ಶಾಶ್ವತವಾಗಿ ಸಂಪತ್ತು ವೃದ್ಧಿಸಲಿದೆ ಎಂಬ ನಂಬಿಕೆ ಜನರಲ್ಲಿ ಬಲವಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವ್ಯಾಪಾರ ಜೋರಾಗಿದೆ. ಗ್ರಾಹಕರು ಅವರ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಆಭರಣ ಖರೀದಿಸುತ್ತಿದ್ದಾರೆ’ ಎಂದು ಚಿನ್ನಾಭರಣ ಮಳಿಗೆಗಳ ಮಾಲೀಕರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಹಿಂದಿನ 2 ವರ್ಷಗಳಲ್ಲಿ ಕೋವಿಡ್ ಹಾಗೂ ಲಾಕ್ಡೌನ್ ಕಾರಣಕ್ಕೆ ವಹಿವಾಟು ಕುಸಿದಿತ್ತು. ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಗ್ರಾಹಕರ ಸ್ಪಂದನೆ ಉತ್ತಮವಾಗಿದೆ. ಗ್ರಾಹಕರು ಮೂರ್ನಾಲ್ಕು ದಿನಗಳ ಹಿಂದೆಯೇ ಮುಂಗಡ ಬುಕ್ಕಿಂಗ್ ಮಾಡಿ ಆಭರಣ ಖರೀದಿಸಿದ್ದಾರೆ’ ಎಂದು ಮಾಲೀಕರು ಹೇಳಿದರು.</p>.<p><strong>ಮಂಗಳಕರ ದಿನ: </strong>‘ಹಿಂದೂ ಧರ್ಮದ ಪ್ರಕಾರ, ಅಕ್ಷಯ ತೃತೀಯ ದಿನವನ್ನು ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಚಿನ್ನ ಖರೀದಿಸುವುದು ಒಳ್ಳೆಯದು ಎಂಬ ನಂಬಿಕೆಯಿದೆ. ಈ ದಿನದಂದು ಖರೀದಿಸಿದ ಚಿನ್ನದಿಂದ ಮನೆಗಳಲ್ಲಿ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆಯಿಂದ ಚಿನ್ನ ಖರೀದಿಗೆ ಬಂದಿದ್ದೇವೆ. ಬೆಲೆ ಕೇಳಿದರೆ ತುಂಬಾ ಕಷ್ಟವೇನಿಸುತ್ತಿದೆ. ಚಿನ್ನದ ಬದಲಿಗೆ ಬೆಳ್ಳಿ ಖರೀದಿ ಮಾಡಿದ್ದೇವೆ ಎಂದು ಗ್ರಾಹಕಿ ರೂಪಾ ಹೇಳಿದರು.</p>.<p>ಸುಶೀಲ್, ಸತ್ಯನಾರಾಯಣ ಹಾಗೂ ಅನಂತ್ ಚಿನ್ನಾಭರಣ ಮಳಿಗೆಗಳಿರುವ ದೊಡ್ಡಪೇಟೆ ರಸ್ತೆಗಳಲ್ಲಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಮಳಿಗೆಗಳ ಬಳಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಅಕ್ಷಯ ತೃತೀಯ ಪ್ರಯುಕ್ತ ನಗರದ ಚಿನ್ನಾಭರಣ ಮಳಿಗೆಗಳಲ್ಲಿ ಮಂಗಳವಾರ ಚಿನ್ನ, ಬೆಳ್ಳಿ ಹಾಗೂ ವಜ್ರಾದ ಆಭರಣಗಳ ಖರೀದಿ ಭರಾಟೆ ಜೋರಾಗಿತ್ತು.</p>.<p>ಅಕ್ಷಯ ತೃತೀಯ ದಿನದಂದು ಬಂಗಾರ ಕೊಂಡರೆ ವರ್ಷವಿಡೀ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿಂದ ಜನ ಚಿನ್ನಾಭರಣ ಮಳಿಗೆಗಳಿಗೆ ಮುಗಿಬಿದ್ದು ಆಭರಣ ಖರೀದಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಈ ಬಾರಿ ಚಿನ್ನದ ಉಂಗುರ, ಸರ, ನಕ್ಲೆಸ್, ಬಂಗಾರದ ನಾಣ್ಯಗಳಿಗೆ ಹೆಚ್ಚಿನ ಬೇಡಿಕೆ ಇತ್ತು.</p>.<p>ನಗರದ ಸತ್ಯನಾರಾಯಣ, ಸುಶೀಲ್, ರಾಜೇಶ್, ಅನಂತ್, ರಿತಿ, ಬಾಲಕೃಷ್ಣ ಚಿನ್ನಾಭರಣ ಮಳಿಗೆಗಳು ಗ್ರಾಹಕರಿಂದ ತುಂಬಿ ಹೋಗಿದ್ದವು. ಚಿನ್ನಾಭರಣ ಮಳಿಗೆಗಳ ಅಕ್ಕಪಕ್ಕದ ರಸ್ತೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.</p>.<p>‘ಅಕ್ಷಯ ತೃತೀಯ ಸಂದರ್ಭದಲ್ಲಿ ಚಿನ್ನ ಖರೀದಿಸಿದರೆ ಶಾಶ್ವತವಾಗಿ ಸಂಪತ್ತು ವೃದ್ಧಿಸಲಿದೆ ಎಂಬ ನಂಬಿಕೆ ಜನರಲ್ಲಿ ಬಲವಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವ್ಯಾಪಾರ ಜೋರಾಗಿದೆ. ಗ್ರಾಹಕರು ಅವರ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಆಭರಣ ಖರೀದಿಸುತ್ತಿದ್ದಾರೆ’ ಎಂದು ಚಿನ್ನಾಭರಣ ಮಳಿಗೆಗಳ ಮಾಲೀಕರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಹಿಂದಿನ 2 ವರ್ಷಗಳಲ್ಲಿ ಕೋವಿಡ್ ಹಾಗೂ ಲಾಕ್ಡೌನ್ ಕಾರಣಕ್ಕೆ ವಹಿವಾಟು ಕುಸಿದಿತ್ತು. ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಗ್ರಾಹಕರ ಸ್ಪಂದನೆ ಉತ್ತಮವಾಗಿದೆ. ಗ್ರಾಹಕರು ಮೂರ್ನಾಲ್ಕು ದಿನಗಳ ಹಿಂದೆಯೇ ಮುಂಗಡ ಬುಕ್ಕಿಂಗ್ ಮಾಡಿ ಆಭರಣ ಖರೀದಿಸಿದ್ದಾರೆ’ ಎಂದು ಮಾಲೀಕರು ಹೇಳಿದರು.</p>.<p><strong>ಮಂಗಳಕರ ದಿನ: </strong>‘ಹಿಂದೂ ಧರ್ಮದ ಪ್ರಕಾರ, ಅಕ್ಷಯ ತೃತೀಯ ದಿನವನ್ನು ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಚಿನ್ನ ಖರೀದಿಸುವುದು ಒಳ್ಳೆಯದು ಎಂಬ ನಂಬಿಕೆಯಿದೆ. ಈ ದಿನದಂದು ಖರೀದಿಸಿದ ಚಿನ್ನದಿಂದ ಮನೆಗಳಲ್ಲಿ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆಯಿಂದ ಚಿನ್ನ ಖರೀದಿಗೆ ಬಂದಿದ್ದೇವೆ. ಬೆಲೆ ಕೇಳಿದರೆ ತುಂಬಾ ಕಷ್ಟವೇನಿಸುತ್ತಿದೆ. ಚಿನ್ನದ ಬದಲಿಗೆ ಬೆಳ್ಳಿ ಖರೀದಿ ಮಾಡಿದ್ದೇವೆ ಎಂದು ಗ್ರಾಹಕಿ ರೂಪಾ ಹೇಳಿದರು.</p>.<p>ಸುಶೀಲ್, ಸತ್ಯನಾರಾಯಣ ಹಾಗೂ ಅನಂತ್ ಚಿನ್ನಾಭರಣ ಮಳಿಗೆಗಳಿರುವ ದೊಡ್ಡಪೇಟೆ ರಸ್ತೆಗಳಲ್ಲಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಮಳಿಗೆಗಳ ಬಳಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>