ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಮಾಳ ಒತ್ತುವರಿ ಗ್ರಾಮಸ್ಥರ ಜಟಾ‍ಪಟಿ

Last Updated 8 ಜನವರಿ 2021, 7:25 IST
ಅಕ್ಷರ ಗಾತ್ರ

ಕೆಜಿಎಫ್‌: ಗೋಮಾಳ ಜಮೀನಿನ ಒಡೆತನಕ್ಕಾಗಿ ಗ್ರಾಮಸ್ಥರು ಹೊಡೆದಾಡಿದ ಘಟನೆ ಗುರುವಾರ ಪಾರಾಂಡಹಳ್ಳಿಯ ಬಳಿಯ ಗುಟ್ಟಹಳ್ಳಿಯಲ್ಲಿ ನಡೆದಿದೆ.

ಬೇತಮಂಗಲ ಹೋಬಳಿ ಪಾರಂಡಹಳ್ಳಿ ಕಂದಾಯ ವೃತ್ತಕ್ಕೆ ಸೇರುವ ಸರ್ವೇ ನಂ. 6ರಲ್ಲಿ ಇರುವ ಗೋಮಾಳದ ಒಡೆತನಕ್ಕಾಗಿ ಎರಡು ಗುಂಪುಗಳು ಪೈಪೋಟಿ ನಡೆಸಿದ್ದವು. ಎರಡು ದಿನಗಳಿಂದ ಗೋಮಾಳ ಜಾಗವನ್ನು ಜೆಸಿಬಿ ಮೂಲಕ ಸಮತಟ್ಟು ಮಾಡುವ ಮೂಲಕ ಒಡೆತನಕ್ಕೆ ಹಕ್ಕು ಸಾಧಿಸಲು ಪ್ರಯತ್ನಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಎರಡು ಗುಂಪುಗಳು ಪರಸ್ಪರ ಕೈ ಕೈ ಮಿಲಾಯಿಸಿದ್ದರು. ಸ್ಥಳಕ್ಕೆ ಧಾವಿಸಿದ ರಾಬರ್ಟಸನ್‌ಪೇಟೆ ಪೊಲೀಸರು ಪರಿಸ್ಥಿತಿಯನ್ನು ತಹಬಂದಿಗೆ ತಂದರು.

ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಕೆ.ಎನ್‌. ಸುಜಾತಾ, ಈ ಜಮೀನು ಸರ್ಕಾರಿ ಗೋಮಾಳವಾಗಿದೆ. ಅದನ್ನು ಯಾರಿಗೂ ಮಂಜೂರು ಮಾಡಿಲ್ಲ. ಒತ್ತುವರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT