ಬೇತಮಂಗಲ ಹೋಬಳಿ ಪಾರಂಡಹಳ್ಳಿ ಕಂದಾಯ ವೃತ್ತಕ್ಕೆ ಸೇರುವ ಸರ್ವೇ ನಂ. 6ರಲ್ಲಿ ಇರುವ ಗೋಮಾಳದ ಒಡೆತನಕ್ಕಾಗಿ ಎರಡು ಗುಂಪುಗಳು ಪೈಪೋಟಿ ನಡೆಸಿದ್ದವು. ಎರಡು ದಿನಗಳಿಂದ ಗೋಮಾಳ ಜಾಗವನ್ನು ಜೆಸಿಬಿ ಮೂಲಕ ಸಮತಟ್ಟು ಮಾಡುವ ಮೂಲಕ ಒಡೆತನಕ್ಕೆ ಹಕ್ಕು ಸಾಧಿಸಲು ಪ್ರಯತ್ನಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಎರಡು ಗುಂಪುಗಳು ಪರಸ್ಪರ ಕೈ ಕೈ ಮಿಲಾಯಿಸಿದ್ದರು. ಸ್ಥಳಕ್ಕೆ ಧಾವಿಸಿದ ರಾಬರ್ಟಸನ್ಪೇಟೆ ಪೊಲೀಸರು ಪರಿಸ್ಥಿತಿಯನ್ನು ತಹಬಂದಿಗೆ ತಂದರು.