ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆಯ ವಿನಾಯಕ ದೇವಸ್ಥಾನದಲ್ಲಿ ಸೋಮವಾರ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರ ಪುತ್ರನ ಮದುವೆಗೆಂದು ದೆಹಲಿಗೆ ಹೋಗಿದ್ದರು ಅಷ್ಟೇ. ನಾನೂ ಹೋಗಬೇಕಿತ್ತು. ಆದರೆ, ಮನೆ ಕಾರ್ಯಕ್ರಮ ಇದ್ದಿದ್ದರಿಂದ ಹೋಗಲು ಆಗಲಿಲ್ಲ’ ಎಂದರು.