<p>ಕೋಲಾರ: ‘ಮುಖ್ಯಮಂತ್ರಿಗಳ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ 41 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿದ್ದು, ಈ ಪಂಚಾಯಿತಿಗಳನ್ನು ಸರ್ವತ್ತೋಮುಖವಾಗಿ ಅಭಿವೃದ್ಧಿಪಡಿಸುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಮುನಿರತ್ನ ಹೇಳಿದರು.</p>.<p>ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರೂ ಯುವ ಕೇಂದ್ರದ ಸಹಯೋಗದಲ್ಲಿ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಫ್ರೀಡಂ ರನ್ 2.0’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಪ್ರಪಂಚದಲ್ಲಿಯೇ ಭಾರತೀಯರು ಪುಣ್ಯವಂತರು. ಭಾರತದಲ್ಲಿ ಹುಟ್ಟಿರುವುದೇ ಹೆಮ್ಮೆ. ದೇಶ ಬಲಿಷ್ಠವಾಗಿದೆ ಎಂಬುದು ಪ್ರಪಂಚಕ್ಕೆ ತಿಳಿದಿದೆ. ಹಲವು ಮಹನೀಯರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಅವರ ಸ್ಮರಣಾರ್ಥ ಫ್ರೀಡಂ ರನ್ ಹಮ್ಮಿಕೊಳ್ಳಲಾಗಿದೆ’ ಎಂದು ವಿವರಿಸಿದರು.</p>.<p>‘ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುತ್ತೇವೆ. ಜನರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಎಲ್ಲಾ ರೀತಿಯ ವೈದ್ಯಕೀಯ ಸೇವೆ ಸಿಗಬೇಕು. ಚಿಕಿತ್ಸೆಗಾಗಿ ಯಾರೊಬ್ಬರು ಬೆಂಗಳೂರಿನತ್ತ ಹೋಗಬಾರದು ಎಂಬುದು ನಮ್ಮ ಉದ್ದೇಶ’ ಎಂದು ತಿಳಿಸಿದರು.</p>.<p>‘ಆರೋಗ್ಯವೇ ಭಾಗ್ಯ. ಜನರು ಹಣ ಹಾಗೂ ಆಸ್ತಿ ಸಂಪಾದನೆಗಿಂತ ಆರೋಗ್ಯದತ್ತ ಕಾಳಜಿ ವಹಿಸಬೇಕು. ಕೋವಿಡ್ ಹಿನ್ನೆಲೆಯಲ್ಲಿ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬೇಕೆಂದು ಜನರಿಗೆ ಅರಿವಾಗಿದೆ. ಪ್ರತಿಯೊಬ್ಬರು ದಿನಕ್ಕೆ ಕನಿಷ್ಠ ಅರ್ಧ ತಾಸು ಯೋಗ ಮಾಡಬೇಕು’ ಎಂದು ಸಂಸದ ಎಸ್.ಮುನಿಸ್ವಾಮಿ ಕಿವಿಮಾತು ಹೇಳಿದರು.</p>.<p>‘ದೇಶದ ಜನರನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶ. ಅ.2ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಪ್ರತಿನಿತ್ಯ ಅರ್ಧ ತಾಸು ವ್ಯಾಯಾಮ ಮಾಡುವ ಮೂಲಕ ದೇಹ ದಂಡಿಸಬೇಕು. ದೇಶದ ಪ್ರತಿ ಪ್ರಜೆಯೂ ಆರೋಗ್ಯಕರವಾಗಿರಬೇಕು’ ಎಂದು ನೆಹರೂ ಯುವ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಎಸ್.ಪಿ.ಪಟ್ನಾಯಕ್ ಆಶಿಸಿದರು.</p>.<p>ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ಬಾಬು, ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಸರಣ್ಯಾ, ಯುವಕ ಯುವತಿಯರು ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ‘ಮುಖ್ಯಮಂತ್ರಿಗಳ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ 41 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿದ್ದು, ಈ ಪಂಚಾಯಿತಿಗಳನ್ನು ಸರ್ವತ್ತೋಮುಖವಾಗಿ ಅಭಿವೃದ್ಧಿಪಡಿಸುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಮುನಿರತ್ನ ಹೇಳಿದರು.</p>.<p>ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರೂ ಯುವ ಕೇಂದ್ರದ ಸಹಯೋಗದಲ್ಲಿ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಫ್ರೀಡಂ ರನ್ 2.0’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಪ್ರಪಂಚದಲ್ಲಿಯೇ ಭಾರತೀಯರು ಪುಣ್ಯವಂತರು. ಭಾರತದಲ್ಲಿ ಹುಟ್ಟಿರುವುದೇ ಹೆಮ್ಮೆ. ದೇಶ ಬಲಿಷ್ಠವಾಗಿದೆ ಎಂಬುದು ಪ್ರಪಂಚಕ್ಕೆ ತಿಳಿದಿದೆ. ಹಲವು ಮಹನೀಯರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಅವರ ಸ್ಮರಣಾರ್ಥ ಫ್ರೀಡಂ ರನ್ ಹಮ್ಮಿಕೊಳ್ಳಲಾಗಿದೆ’ ಎಂದು ವಿವರಿಸಿದರು.</p>.<p>‘ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುತ್ತೇವೆ. ಜನರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಎಲ್ಲಾ ರೀತಿಯ ವೈದ್ಯಕೀಯ ಸೇವೆ ಸಿಗಬೇಕು. ಚಿಕಿತ್ಸೆಗಾಗಿ ಯಾರೊಬ್ಬರು ಬೆಂಗಳೂರಿನತ್ತ ಹೋಗಬಾರದು ಎಂಬುದು ನಮ್ಮ ಉದ್ದೇಶ’ ಎಂದು ತಿಳಿಸಿದರು.</p>.<p>‘ಆರೋಗ್ಯವೇ ಭಾಗ್ಯ. ಜನರು ಹಣ ಹಾಗೂ ಆಸ್ತಿ ಸಂಪಾದನೆಗಿಂತ ಆರೋಗ್ಯದತ್ತ ಕಾಳಜಿ ವಹಿಸಬೇಕು. ಕೋವಿಡ್ ಹಿನ್ನೆಲೆಯಲ್ಲಿ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬೇಕೆಂದು ಜನರಿಗೆ ಅರಿವಾಗಿದೆ. ಪ್ರತಿಯೊಬ್ಬರು ದಿನಕ್ಕೆ ಕನಿಷ್ಠ ಅರ್ಧ ತಾಸು ಯೋಗ ಮಾಡಬೇಕು’ ಎಂದು ಸಂಸದ ಎಸ್.ಮುನಿಸ್ವಾಮಿ ಕಿವಿಮಾತು ಹೇಳಿದರು.</p>.<p>‘ದೇಶದ ಜನರನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶ. ಅ.2ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಪ್ರತಿನಿತ್ಯ ಅರ್ಧ ತಾಸು ವ್ಯಾಯಾಮ ಮಾಡುವ ಮೂಲಕ ದೇಹ ದಂಡಿಸಬೇಕು. ದೇಶದ ಪ್ರತಿ ಪ್ರಜೆಯೂ ಆರೋಗ್ಯಕರವಾಗಿರಬೇಕು’ ಎಂದು ನೆಹರೂ ಯುವ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಎಸ್.ಪಿ.ಪಟ್ನಾಯಕ್ ಆಶಿಸಿದರು.</p>.<p>ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ಬಾಬು, ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಸರಣ್ಯಾ, ಯುವಕ ಯುವತಿಯರು ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>