<p><strong>ಕೋಲಾರ</strong>: ನೀರಾವರಿ ಹೋರಾಟ ಸಮಿತಿಯ ವೇದಿಕೆ ಸ್ಥಳಾಂತರಿಸಿ ನಗರದ ಹಳೇ ಬಸ್ ನಿಲ್ದಾಣದ ಬಳಿಯ ಇಂದಿರಾ ಕ್ಯಾಂಟೀನ್ ಪಕ್ಕದಲ್ಲಿ ನಿರ್ಮಿಸಿಕೊಡುವಂತೆ ಸಮಿತಿ ಸದಸ್ಯರು ಇಲ್ಲಿ ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶಿವಸ್ವಾಮಿ ಅವರಿಗೆ ಮನವಿ ಮಾಡಿದರು.</p>.<p>ಜಿಲ್ಲೆಯ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಹೋರಾಟ ನಡೆಸಲು ಸಮಿತಿ ಸದಸ್ಯರು ಈ ಹಿಂದೆ ನಗರಸಭೆಗೆ ಮನವಿ ಮಾಡಿ ಬಂಗಾರಪೇಟೆ ರಸ್ತೆಯ ಸರ್ವಜ್ಞ ಉದ್ಯಾನದ ಬಳಿ ಜಾಗ ಪಡೆದುಕೊಂಡಿದ್ದರು. 2016ರ ಜೂನ್ 12ರಂದು ಕನ್ನಡ ಚಿತ್ರರಂಗದ ನಟರು ನೀರಾವರಿ ಹೋರಾಟದ ವೇದಿಕೆ ಉದ್ಘಾಟಿಸಿದ್ದರು. ನಂತರ ಈ ವೇದಿಕೆಯಲ್ಲಿ ಸತತ 365 ದಿನಗಳ ಕಾಲ ಧರಣಿ ನಡೆಸಲಾಗಿತ್ತು.</p>.<p>ಇದೀಗ ಬಂಗಾರಪೇಟೆ ರಸ್ತೆ ಅಗಲೀಕರಣಕ್ಕಾಗಿ ಜಿಲ್ಲಾಡಳಿತವು ಈ ವೇದಿಕೆ ತೆರವುಗೊಳಿಸಲಿದೆ. ಈ ಹಿನ್ನೆಲೆಯಲ್ಲಿ ಹೋರಾಟಕ್ಕೆ ಶಾಶ್ವತ ಸ್ಥಳ ಪಡೆಯಲು ಸಮಿತಿ ಸದಸ್ಯರು ಬುಧವಾರ ನಡೆಸಿ ಚರ್ಚಿಸಿದರು. ಹಳೇ ಬಸ್ ನಿಲ್ದಾಣದ ಬಳಿಯ ಇಂದಿರಾ ಕ್ಯಾಂಟೀನ್ ಪಕ್ಕದ ಜಾಗಕ್ಕೆ ಹೋರಾಟದ ವೇದಿಕೆ ಸ್ಥಳಾಂತರಿಸುವುದು ಸೂಕ್ತವೆಂದು ಸಮಿತಿ ಸದಸ್ಯರು ಸಭೆಯಲ್ಲಿ ನಿರ್ಣಯ ಕೈಗೊಂಡರು.</p>.<p>ಬಳಿಕ ಸ್ಥಳಕ್ಕೆ ಬಂದು ಸಮಿತಿ ಸದಸ್ಯರಿಂದ ಮನವಿ ಸ್ವೀಕರಿಸಿದ ಹೆಚ್ಚುವರಿ ಜಿಲ್ಲಾಧಿಕಾರಿಯು, ‘ಹೋರಾಟಕ್ಕೆ ಇಂದಿರಾ ಕ್ಯಾಂಟೀನ್ ಬಳಿ ಜಾಗ ನೀಡುವ ಸಂಬಂಧ ಜಿಲ್ಲಾಧಿಕಾರಿ ಜತೆ ಚರ್ಚಿಸಲು 3 ದಿನದೊಳಗೆ ಸಭೆ ನಿಗದಿಪಡಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>ನೀರಾವರಿ ಹೋರಾಟ ಸಮಿತಿ ಸದಸ್ಯರಾದ ಪ್ರಕಾಶ್, ವೆಂಕಟೇಶ್, ಜಯದೇವ ಪ್ರಸನ್ನ, ನಾಗರಾಜ್, ಮಂಜುನಾಥ್ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ನೀರಾವರಿ ಹೋರಾಟ ಸಮಿತಿಯ ವೇದಿಕೆ ಸ್ಥಳಾಂತರಿಸಿ ನಗರದ ಹಳೇ ಬಸ್ ನಿಲ್ದಾಣದ ಬಳಿಯ ಇಂದಿರಾ ಕ್ಯಾಂಟೀನ್ ಪಕ್ಕದಲ್ಲಿ ನಿರ್ಮಿಸಿಕೊಡುವಂತೆ ಸಮಿತಿ ಸದಸ್ಯರು ಇಲ್ಲಿ ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶಿವಸ್ವಾಮಿ ಅವರಿಗೆ ಮನವಿ ಮಾಡಿದರು.</p>.<p>ಜಿಲ್ಲೆಯ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಹೋರಾಟ ನಡೆಸಲು ಸಮಿತಿ ಸದಸ್ಯರು ಈ ಹಿಂದೆ ನಗರಸಭೆಗೆ ಮನವಿ ಮಾಡಿ ಬಂಗಾರಪೇಟೆ ರಸ್ತೆಯ ಸರ್ವಜ್ಞ ಉದ್ಯಾನದ ಬಳಿ ಜಾಗ ಪಡೆದುಕೊಂಡಿದ್ದರು. 2016ರ ಜೂನ್ 12ರಂದು ಕನ್ನಡ ಚಿತ್ರರಂಗದ ನಟರು ನೀರಾವರಿ ಹೋರಾಟದ ವೇದಿಕೆ ಉದ್ಘಾಟಿಸಿದ್ದರು. ನಂತರ ಈ ವೇದಿಕೆಯಲ್ಲಿ ಸತತ 365 ದಿನಗಳ ಕಾಲ ಧರಣಿ ನಡೆಸಲಾಗಿತ್ತು.</p>.<p>ಇದೀಗ ಬಂಗಾರಪೇಟೆ ರಸ್ತೆ ಅಗಲೀಕರಣಕ್ಕಾಗಿ ಜಿಲ್ಲಾಡಳಿತವು ಈ ವೇದಿಕೆ ತೆರವುಗೊಳಿಸಲಿದೆ. ಈ ಹಿನ್ನೆಲೆಯಲ್ಲಿ ಹೋರಾಟಕ್ಕೆ ಶಾಶ್ವತ ಸ್ಥಳ ಪಡೆಯಲು ಸಮಿತಿ ಸದಸ್ಯರು ಬುಧವಾರ ನಡೆಸಿ ಚರ್ಚಿಸಿದರು. ಹಳೇ ಬಸ್ ನಿಲ್ದಾಣದ ಬಳಿಯ ಇಂದಿರಾ ಕ್ಯಾಂಟೀನ್ ಪಕ್ಕದ ಜಾಗಕ್ಕೆ ಹೋರಾಟದ ವೇದಿಕೆ ಸ್ಥಳಾಂತರಿಸುವುದು ಸೂಕ್ತವೆಂದು ಸಮಿತಿ ಸದಸ್ಯರು ಸಭೆಯಲ್ಲಿ ನಿರ್ಣಯ ಕೈಗೊಂಡರು.</p>.<p>ಬಳಿಕ ಸ್ಥಳಕ್ಕೆ ಬಂದು ಸಮಿತಿ ಸದಸ್ಯರಿಂದ ಮನವಿ ಸ್ವೀಕರಿಸಿದ ಹೆಚ್ಚುವರಿ ಜಿಲ್ಲಾಧಿಕಾರಿಯು, ‘ಹೋರಾಟಕ್ಕೆ ಇಂದಿರಾ ಕ್ಯಾಂಟೀನ್ ಬಳಿ ಜಾಗ ನೀಡುವ ಸಂಬಂಧ ಜಿಲ್ಲಾಧಿಕಾರಿ ಜತೆ ಚರ್ಚಿಸಲು 3 ದಿನದೊಳಗೆ ಸಭೆ ನಿಗದಿಪಡಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>ನೀರಾವರಿ ಹೋರಾಟ ಸಮಿತಿ ಸದಸ್ಯರಾದ ಪ್ರಕಾಶ್, ವೆಂಕಟೇಶ್, ಜಯದೇವ ಪ್ರಸನ್ನ, ನಾಗರಾಜ್, ಮಂಜುನಾಥ್ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>