ಅವರ ಆಪ್ತರು ಇಲ್ಲಿ ಸೋಮವಾರ ಕೋಚಿಮುಲ್ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ತೀವ್ರ ಬರಗಾಲವಿದೆ. ಹೈನೋದ್ಯಮ ಅವಳಿ ಜಿಲ್ಲೆಗಳ ರೈತರ ಜೀವನಾಡಿಯಾಗಿದ್ದು, ಈ ಕ್ಷೇತ್ರವನ್ನು ಕಲುಷಿತಗೊಳಿಸಿದರೆ ರೈತರ ಶಾಪ ತಟ್ಟುತ್ತದೆ’ ಎಂದರು.