<p><strong>ಕೋಲಾರ</strong>: ಸದಾ ಪ್ರವಾಸಿಗರು, ಚಾರಣಿಗರನ್ನು ಆಕರ್ಷಿಸುವ ಜಿಲ್ಲೆಯ ಅಂತರಗಂಗೆ ಬೆಟ್ಟದಲ್ಲಿ ಈಗ ಕಿರು ಜಲಪಾತ ಸೃಷ್ಟಿಯಾಗಿದೆ.</p>.<p>ಕೆಲ ದಿನಗಳಿಂದ ಜಿಲ್ಲೆಯಲ್ಲಿ ರಾತ್ರಿ ಹೊತ್ತು ಧಾರಾಕಾರ ಮಳೆಯಾಗುತ್ತಿದ್ದು, ಶತಶೃಂಗ ಪರ್ವತ ಶ್ರೇಣಿಯ ಅಂತರಗಂಗೆ ಬೆಟ್ಟದಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿದೆ. ಇದು ಮಕ್ಕಳು ಹಾಗೂ ಯುವತಿಯರ ಖುಷಿಗೆ ಕಾರಣವಾಗಿದ್ದು, ನೀರಿನಲ್ಲಿ ಆಟದಲ್ಲಿ ತಲ್ಲೀನರಾಗುತ್ತಿದ್ದಾರೆ.</p>.<p>ಕಾಡಿನ ಮಧ್ಯೆ, ಕಲ್ಲುಗಳ ಹಾದಿಯಲ್ಲಿ ಹಾಲಿನ ನೊರೆಯಂತೆ ಮೈದುಂಬಿ ಹರಿಯುತ್ತಿದ್ದು ನೋಡುಗರ ಮನಸೂರೆಗೊಳ್ಳುತ್ತಿದೆ. ಸುಮಾರು 30 ಅಡಿ ಎತ್ತರದಿಂದ ನೀರು ಧುಮ್ಮಿಕುತ್ತಿದೆ. ಜೊತೆಗೆ ಈ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಿದೆ. ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ.</p>.<p>ದಕ್ಷಿಣ ಕಾಶಿ ಎಂದೇ ಈ ಪ್ರದೇಶ ಪ್ರಸಿದ್ಧಿ ಪಡೆದಿದ್ದು, ಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲವಿದೆ. ಇಲ್ಲಿನ ಕಲ್ಯಾಣಿ ಬಳಿ ಇರುವ ಬಸವನ ಬಾಯಿಯಿಂದ ವರ್ಷಪೂರ್ತಿ ನೀರು ಬರುತ್ತಿರುತ್ತದೆ. ಹೀಗಾಗಿ, ಪ್ರತಿ ಶನಿವಾರ, ಭಾನುವಾರ ಬೆಂಗಳೂರಿನಿಂದ ಪ್ರವಾಸಿಗರು ಅದರಲ್ಲೂ ಟೆಕ್ಕಿಗಳು ಹೆಚ್ಚಾಗಿ ಬರುತ್ತಾರೆ. ಪ್ರೇಮಿಗಳ ನೆಚ್ಚಿನ ತಾಣ ಎನಿಸಿದೆ.</p>.<p>ಹಿಂದೊಮ್ಮೆ ಬರದ ನಾಡು, ಬಯಲು ಪ್ರದೇಶವೆಂದು ಕರೆಸಿಕೊಳ್ಳುತ್ತಿದ್ದ ಕೋಲಾರದಲ್ಲಿ ಇತ್ತೀಚಿನ ವರ್ಷಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಹೀಗಾಗಿ, ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಸದಾ ಪ್ರವಾಸಿಗರು, ಚಾರಣಿಗರನ್ನು ಆಕರ್ಷಿಸುವ ಜಿಲ್ಲೆಯ ಅಂತರಗಂಗೆ ಬೆಟ್ಟದಲ್ಲಿ ಈಗ ಕಿರು ಜಲಪಾತ ಸೃಷ್ಟಿಯಾಗಿದೆ.</p>.<p>ಕೆಲ ದಿನಗಳಿಂದ ಜಿಲ್ಲೆಯಲ್ಲಿ ರಾತ್ರಿ ಹೊತ್ತು ಧಾರಾಕಾರ ಮಳೆಯಾಗುತ್ತಿದ್ದು, ಶತಶೃಂಗ ಪರ್ವತ ಶ್ರೇಣಿಯ ಅಂತರಗಂಗೆ ಬೆಟ್ಟದಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿದೆ. ಇದು ಮಕ್ಕಳು ಹಾಗೂ ಯುವತಿಯರ ಖುಷಿಗೆ ಕಾರಣವಾಗಿದ್ದು, ನೀರಿನಲ್ಲಿ ಆಟದಲ್ಲಿ ತಲ್ಲೀನರಾಗುತ್ತಿದ್ದಾರೆ.</p>.<p>ಕಾಡಿನ ಮಧ್ಯೆ, ಕಲ್ಲುಗಳ ಹಾದಿಯಲ್ಲಿ ಹಾಲಿನ ನೊರೆಯಂತೆ ಮೈದುಂಬಿ ಹರಿಯುತ್ತಿದ್ದು ನೋಡುಗರ ಮನಸೂರೆಗೊಳ್ಳುತ್ತಿದೆ. ಸುಮಾರು 30 ಅಡಿ ಎತ್ತರದಿಂದ ನೀರು ಧುಮ್ಮಿಕುತ್ತಿದೆ. ಜೊತೆಗೆ ಈ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಿದೆ. ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ.</p>.<p>ದಕ್ಷಿಣ ಕಾಶಿ ಎಂದೇ ಈ ಪ್ರದೇಶ ಪ್ರಸಿದ್ಧಿ ಪಡೆದಿದ್ದು, ಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲವಿದೆ. ಇಲ್ಲಿನ ಕಲ್ಯಾಣಿ ಬಳಿ ಇರುವ ಬಸವನ ಬಾಯಿಯಿಂದ ವರ್ಷಪೂರ್ತಿ ನೀರು ಬರುತ್ತಿರುತ್ತದೆ. ಹೀಗಾಗಿ, ಪ್ರತಿ ಶನಿವಾರ, ಭಾನುವಾರ ಬೆಂಗಳೂರಿನಿಂದ ಪ್ರವಾಸಿಗರು ಅದರಲ್ಲೂ ಟೆಕ್ಕಿಗಳು ಹೆಚ್ಚಾಗಿ ಬರುತ್ತಾರೆ. ಪ್ರೇಮಿಗಳ ನೆಚ್ಚಿನ ತಾಣ ಎನಿಸಿದೆ.</p>.<p>ಹಿಂದೊಮ್ಮೆ ಬರದ ನಾಡು, ಬಯಲು ಪ್ರದೇಶವೆಂದು ಕರೆಸಿಕೊಳ್ಳುತ್ತಿದ್ದ ಕೋಲಾರದಲ್ಲಿ ಇತ್ತೀಚಿನ ವರ್ಷಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಹೀಗಾಗಿ, ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>