<p><strong>ಕೋಲಾರ</strong>: ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ದೇಶದೆಲ್ಲೆಡೆ ರೈತ, ಕಾರ್ಮಿಕ, ಕೂಲಿಕಾರರ ಜಂಟಿ ಕ್ರಿಯಾ ಸಮಿತಿ ವತಿಯಿಂದ ಆ.9ರಂದು ಕ್ವಿಟ್ ಇಂಡಿಯಾ ಚಳವಳಿ ಭಾಗವಾಗಿ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ವಿಜಿಕೃಷ್ಣ ತಿಳಿಸಿದರು.</p>.<p>ಇಲ್ಲಿ ಮಂಗಳವಾರ ನಡೆದ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸಭೆಯಲ್ಲಿ ಮಾತನಾಡಿ, ‘ಪ್ರತಿಭಟನೆಯ ಭಾಗವಾಗಿ ಜುಲೈ 25ರಿಂದ ಆಗಸ್ಟ್ 8ರವರೆಗೆ ತಾಲ್ಲೂಕಿನಾದ್ಯಂತ ಪ್ರಚಾರ ಆಂದೋಲನ ನಡೆಸಲಾಗುತ್ತದೆ’ ಎಂದು ಹೇಳಿದರು.</p>.<p>‘ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ರೈತರು, ಕಾರ್ಮಿಕರು ಹಾಗೂ ಕೃಷಿ ಕೂಲಿಕಾರರ ಹಿತ ಕಡೆಗಣಿಸಿ ಜನವಿರೋಧಿ ಕಾಯ್ದೆಗಳನ್ನು ರೂಪಿಸುತ್ತಿದೆ. ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ನಡೆಸುವಂತೆ ಕೇಂದ್ರ ಸಮಿತಿಯ ಸಂಘಟನೆಗಳು ಕರೆ ನೀಡಿವೆ’ ಎಂದು ವಿವರಿಸಿದರು.</p>.<p>‘ತಾಲ್ಲೂಕಿನಲ್ಲಿ ವ್ಯಾಪಕ ಪ್ರಚಾರ ನಡೆಸಿ ಜನರು ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಬೇಕು. ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಐತಿಹಾಸಿಕ ಹೋರಾಟವನ್ನು ಬೆಂಬಲಿಸಬೇಕು. ಸರ್ಕಾರಗಳು ಜನಪರ, ರೈತರ ಪರವಾದ ಕಾಯ್ದೆಗಳನ್ನು ರೂಪಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಂತೆ ಮತ್ತು ನಿರ್ದಿಷ್ಟ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಸಬೇಕು. ಪ್ರಚಾರದ ನಂತರ ಆ.9ರಂದು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಸಂಘಟನೆಗಳು ಕರೆ ನೀಡಿವೆ. ಪ್ರತಿಭಟನೆ ವೇಳೆ ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆಯಾಗಬೇಕು’ ಎಂದರು.</p>.<p>‘ಸರ್ಕಾರಗಳು ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕೃಷಿ ಉತ್ಪನ್ನಗಳಿಗೆ ಕಾನೂನುಬದ್ಧವಾಗಿ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ಪಡಿತರ ವ್ಯವಸ್ಥೆಯಲ್ಲಿ ಆಹಾರಧಾನ್ಯಗಳನ್ನು ಉಚಿತವಾಗಿ ನೀಡಬೇಕು. ಆದಾಯ ತೆರಿಗೆ ಮಿತಿಗೆ ಒಳಪಟ್ಟು ಪ್ರತಿಯೊಬ್ಬರಿಗೂ ₹ 10 ಸಾವಿರ ಪರಿಹಾರ ನೀಡಬೇಕು. ಉಚಿತವಾಗಿ ಕೋವಿಡ್ ಲಸಿಕೆ ಕೊಡಬೇಕು’ ಎಂದು ಕೆಪಿಆರ್ಎಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಟಿ.ಎಂ.ವೆಂಕಟೇಶ್ ಆಗ್ರಹಿಸಿದರು.</p>.<p>‘ಸಾರ್ವಜನಿಕ ಉದ್ಯಮೆಗಳ ಖಾಸಗೀಕರಣ ಕೈಬಿಡಬೇಕು. ರಾಜ್ಯದಲ್ಲಿನ ಎಪಿಎಂಸಿ ಕಾಯ್ದೆ, ಭೂಸುಧಾರಣೆ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ಕೆಪಿಆರ್ಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎನ್.ಶ್ರೀರಾಮ್, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಸದಸ್ಯರಾದ ಭೀಮರಾಜ್, ಮಂಜುಳಾ, ಆಶಾ, ಕೆ.ವಿ.ಮಂಜುನಾಥ್ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ದೇಶದೆಲ್ಲೆಡೆ ರೈತ, ಕಾರ್ಮಿಕ, ಕೂಲಿಕಾರರ ಜಂಟಿ ಕ್ರಿಯಾ ಸಮಿತಿ ವತಿಯಿಂದ ಆ.9ರಂದು ಕ್ವಿಟ್ ಇಂಡಿಯಾ ಚಳವಳಿ ಭಾಗವಾಗಿ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ವಿಜಿಕೃಷ್ಣ ತಿಳಿಸಿದರು.</p>.<p>ಇಲ್ಲಿ ಮಂಗಳವಾರ ನಡೆದ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸಭೆಯಲ್ಲಿ ಮಾತನಾಡಿ, ‘ಪ್ರತಿಭಟನೆಯ ಭಾಗವಾಗಿ ಜುಲೈ 25ರಿಂದ ಆಗಸ್ಟ್ 8ರವರೆಗೆ ತಾಲ್ಲೂಕಿನಾದ್ಯಂತ ಪ್ರಚಾರ ಆಂದೋಲನ ನಡೆಸಲಾಗುತ್ತದೆ’ ಎಂದು ಹೇಳಿದರು.</p>.<p>‘ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ರೈತರು, ಕಾರ್ಮಿಕರು ಹಾಗೂ ಕೃಷಿ ಕೂಲಿಕಾರರ ಹಿತ ಕಡೆಗಣಿಸಿ ಜನವಿರೋಧಿ ಕಾಯ್ದೆಗಳನ್ನು ರೂಪಿಸುತ್ತಿದೆ. ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ನಡೆಸುವಂತೆ ಕೇಂದ್ರ ಸಮಿತಿಯ ಸಂಘಟನೆಗಳು ಕರೆ ನೀಡಿವೆ’ ಎಂದು ವಿವರಿಸಿದರು.</p>.<p>‘ತಾಲ್ಲೂಕಿನಲ್ಲಿ ವ್ಯಾಪಕ ಪ್ರಚಾರ ನಡೆಸಿ ಜನರು ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಬೇಕು. ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಐತಿಹಾಸಿಕ ಹೋರಾಟವನ್ನು ಬೆಂಬಲಿಸಬೇಕು. ಸರ್ಕಾರಗಳು ಜನಪರ, ರೈತರ ಪರವಾದ ಕಾಯ್ದೆಗಳನ್ನು ರೂಪಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಂತೆ ಮತ್ತು ನಿರ್ದಿಷ್ಟ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಸಬೇಕು. ಪ್ರಚಾರದ ನಂತರ ಆ.9ರಂದು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಸಂಘಟನೆಗಳು ಕರೆ ನೀಡಿವೆ. ಪ್ರತಿಭಟನೆ ವೇಳೆ ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆಯಾಗಬೇಕು’ ಎಂದರು.</p>.<p>‘ಸರ್ಕಾರಗಳು ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕೃಷಿ ಉತ್ಪನ್ನಗಳಿಗೆ ಕಾನೂನುಬದ್ಧವಾಗಿ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ಪಡಿತರ ವ್ಯವಸ್ಥೆಯಲ್ಲಿ ಆಹಾರಧಾನ್ಯಗಳನ್ನು ಉಚಿತವಾಗಿ ನೀಡಬೇಕು. ಆದಾಯ ತೆರಿಗೆ ಮಿತಿಗೆ ಒಳಪಟ್ಟು ಪ್ರತಿಯೊಬ್ಬರಿಗೂ ₹ 10 ಸಾವಿರ ಪರಿಹಾರ ನೀಡಬೇಕು. ಉಚಿತವಾಗಿ ಕೋವಿಡ್ ಲಸಿಕೆ ಕೊಡಬೇಕು’ ಎಂದು ಕೆಪಿಆರ್ಎಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಟಿ.ಎಂ.ವೆಂಕಟೇಶ್ ಆಗ್ರಹಿಸಿದರು.</p>.<p>‘ಸಾರ್ವಜನಿಕ ಉದ್ಯಮೆಗಳ ಖಾಸಗೀಕರಣ ಕೈಬಿಡಬೇಕು. ರಾಜ್ಯದಲ್ಲಿನ ಎಪಿಎಂಸಿ ಕಾಯ್ದೆ, ಭೂಸುಧಾರಣೆ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ಕೆಪಿಆರ್ಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎನ್.ಶ್ರೀರಾಮ್, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಸದಸ್ಯರಾದ ಭೀಮರಾಜ್, ಮಂಜುಳಾ, ಆಶಾ, ಕೆ.ವಿ.ಮಂಜುನಾಥ್ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>