<p><strong>ಕೆಜಿಎಫ್:</strong> ರಾಬರ್ಟಸನ್ಪೇಟೆಯ ಮಹಾವೀರ್ ಜೈನ್ ಕಾಲೇಜಿನಲ್ಲಿ ಜ. 10ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮ್ಮೇಳನವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ಎಲ್ಲರೂ ಸಹಕಾರ ನೀಡಬೇಕು ಎಂದು ತಹಶೀಲ್ದಾರ್ ಕೆ.ಎನ್. ಸುಜಾತಾ ಕೋರಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಗುರುವಾರ ನಡೆದ ತಾಲ್ಲೂಕು ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>ಗಡಿಭಾಗದಲ್ಲಿ ನಡೆಯುವ ಕನ್ನಡ ಪರ ಕಾರ್ಯಕ್ರಮಗಳಿಗೆ ಸಹಕಾರ ನೀಡುವುದು ಸಾರ್ವಜನಿಕರು ಮತ್ತು ಅಧಿಕಾರಿಗಳ ಕರ್ತವ್ಯ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲು ಸಮಯ ಸಿಗಲಿಲ್ಲ. ಸಮಯದ ಅಭಾವವನ್ನು ಚಿಂತಿಸದೆ, ಕಸಾಪ ಕಾರ್ಯಕರ್ತರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಬೇಕಾಗಿದೆ ಎಂದರು.</p>.<p>‘ಪರಿಷತ್ತಿನ ಆದೇಶದಂತೆ ತಾಲ್ಲೂಕು ಸಮ್ಮೇಳನಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಡು, ನುಡಿಯ ಸಂತೆಯು ಮನಸ್ಸಿನಲ್ಲಿ ಉಳಿಯುವಂತಹ ರೀತಿಯಲ್ಲಿ ನಡೆಯಬೇಕು’ ಎಂದು ಕಸಾಪ ಅಧ್ಯಕ್ಷ ವಿ.ಬಿ. ದೇಶಪಾಂಡೆ ಹೇಳಿದರು.</p>.<p>ನಗರಸಭೆಯಿಂದ ₹ 25 ಸಾವಿರ ಮತ್ತು ವೈಯಕ್ತಿಕ ದೇಣಿಗೆಯಾಗಿ ₹ 25 ಸಾವಿರ ನೀಡುವುದಾಗಿ ನಗರಸಭೆ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುನಂದಮ್ಮ, ಮಂಜುನಾಥ ಹೆಗಡೆ, ವೀರವೆಂಕಟಪ್ಪ, ಎಲ್ಲಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ರಾಬರ್ಟಸನ್ಪೇಟೆಯ ಮಹಾವೀರ್ ಜೈನ್ ಕಾಲೇಜಿನಲ್ಲಿ ಜ. 10ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮ್ಮೇಳನವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ಎಲ್ಲರೂ ಸಹಕಾರ ನೀಡಬೇಕು ಎಂದು ತಹಶೀಲ್ದಾರ್ ಕೆ.ಎನ್. ಸುಜಾತಾ ಕೋರಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಗುರುವಾರ ನಡೆದ ತಾಲ್ಲೂಕು ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>ಗಡಿಭಾಗದಲ್ಲಿ ನಡೆಯುವ ಕನ್ನಡ ಪರ ಕಾರ್ಯಕ್ರಮಗಳಿಗೆ ಸಹಕಾರ ನೀಡುವುದು ಸಾರ್ವಜನಿಕರು ಮತ್ತು ಅಧಿಕಾರಿಗಳ ಕರ್ತವ್ಯ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲು ಸಮಯ ಸಿಗಲಿಲ್ಲ. ಸಮಯದ ಅಭಾವವನ್ನು ಚಿಂತಿಸದೆ, ಕಸಾಪ ಕಾರ್ಯಕರ್ತರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಬೇಕಾಗಿದೆ ಎಂದರು.</p>.<p>‘ಪರಿಷತ್ತಿನ ಆದೇಶದಂತೆ ತಾಲ್ಲೂಕು ಸಮ್ಮೇಳನಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಡು, ನುಡಿಯ ಸಂತೆಯು ಮನಸ್ಸಿನಲ್ಲಿ ಉಳಿಯುವಂತಹ ರೀತಿಯಲ್ಲಿ ನಡೆಯಬೇಕು’ ಎಂದು ಕಸಾಪ ಅಧ್ಯಕ್ಷ ವಿ.ಬಿ. ದೇಶಪಾಂಡೆ ಹೇಳಿದರು.</p>.<p>ನಗರಸಭೆಯಿಂದ ₹ 25 ಸಾವಿರ ಮತ್ತು ವೈಯಕ್ತಿಕ ದೇಣಿಗೆಯಾಗಿ ₹ 25 ಸಾವಿರ ನೀಡುವುದಾಗಿ ನಗರಸಭೆ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುನಂದಮ್ಮ, ಮಂಜುನಾಥ ಹೆಗಡೆ, ವೀರವೆಂಕಟಪ್ಪ, ಎಲ್ಲಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>