ಪರಿಹಾರಕ್ಕೆ ಪ್ರಯತ್ನ: ಮನವಿಗೆ ಸ್ಪಂದಿಸಿದ ಡಿಡಿಪಿಐ, ‘ಜಿಲ್ಲೆಗೆ ಇತ್ತೀಚೆಗಷ್ಟೇ ವರ್ಗಾವಣೆಯಾಗಿ ಬಂದಿದ್ದು, ಶಿಕ್ಷಕರ ಸಮಸ್ಯೆಗಳನ್ನು ಅರಿಯುತ್ತಿದ್ದೇನೆ. ಶಿಕ್ಷಕರ ಎಲ್ಲಾ ಸಮಸ್ಯೆಗಳಿಗೂ ನನ್ನ ಅಧಿಕಾರ ಮಿತಿಯಲ್ಲಿ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡುತ್ತೇನೆ. ಶೈಕ್ಷಣಿಕ ಸಾಧನೆ ಹಾಗೂ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಶಿಕ್ಷಕರು ಸಹಕಾರ ನೀಡಬೇಕು’ ಎಂದು ಕೋರಿದರು.