ಪೌರಾಡಳಿತ ನಿರ್ದೇಶನಾಲಯ ಸಹ ಆದಷ್ಟು ಬೇಗನೆ ಎಲ್ಲಾ ಆಯುಕ್ತರನ್ನು ನಗರಸಭೆ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಆದೇಶಿಸಿದೆ. ಆದರೆ, ಕೋಲಾರ ನಗರಸಭೆಯ ಆಯುಕ್ತ ಶ್ರೀಕಾಂತ್ ಅವರು ಈವರೆಗೂ ಗೌರಿಬಿದನೂರು ನಗರಸಭೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿಲ್ಲ. ಅವರು ಕೋಲಾರ ನಗರಸಭೆಯಲ್ಲೇ ಮುಂದುವರಿಯಲು ಜನಪ್ರತಿನಿಧಿಗಳ ಮೂಲಕ ಲಾಬಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.