ಮಾವು, ಟೊಮೆಟೊ ಸಂಸ್ಕರಣಾ ಘಟಕ ಹಾಗೂ ಜ್ಯೂಸ್ ಕೈಗಾರಿಕೆಗಳನ್ನು ಆರಂಭಿಸಿ ರೈತರ ಹಿತ ಕಾಯಬೇಕಾದ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ತಿದ್ದುಪಡಿ ಮಸೂದೆ ಜಾರಿಯಾದರೆ ಕಾರ್ಪೊರೇಟ್ ಕಂಪನಿಗಳು ಹಾಗೂ ವರ್ತಕರಿಗೆ ಅನುಕೂಲವಾಗುತ್ತದೆ. ಇದರಿಂದ ರೈತರ ರಕ್ಷಣೆ ಅಸಾಧ್ಯ. ಈ ಮಸೂದೆಗೆ ಸಮಾಜದ ಪ್ರತಿಯೊಬ್ಬರೂ ವಿರೋಧ ವ್ಯಕ್ತಪಡಿಸಿ ರೈತರ ರಕ್ಷಣೆಗೆ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.