<p><strong>ಕೋಲಾರ:</strong> ಕೋವಿಡ್, ಲಾಕ್ಡೌನ್ ಹಾಗೂ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಮನೆಯಿಂದಲೇ ನಿರ್ವಹಿಸಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.</p>.<p>ಸರ್ಕಾರ ಜೂನ್ 15ರಿಂದಲೇ ಶೈಕ್ಷಣಿಕ ಚಟುವಟಿಕೆ ಆರಂಭಿಸುವಂತೆ ಸೂಚಿಸಿದೆ. ಆದರೆ, ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಅವಕಾಶ ನೀಡಿಲ್ಲ. ಇದರಿಂದ ಶಿಕ್ಷಕರಿಗೆ ಶಾಲೆಗಳಿಗೆ ತೆರಳಲು ಸಮಸ್ಯೆಯಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ್ಬಾಬು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ತಜ್ಞರ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಶಾಲೆಗಳಲ್ಲಿ ಒಂದೇ ಕೊಠಡಿಯಲ್ಲಿ ಮಕ್ಕಳು, ಶಿಕ್ಷಕರು ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಶಿಕ್ಷಕರಿಗೆ ಮನೆಯಿಂದಲೇ ಶೈಕ್ಷಣಿಕ ಚಟುವಟಿಕೆ ನಿರ್ವಹಿಸಲು ಅವಕಾಶ ನೀಡುವಂತೆ ಷಡಕ್ಷರಿ ಅವರು ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ.</p>.<p>ಶಿಕ್ಷಕರಿಗೆ ಪೂರ್ಣ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಹಾಕಿಲ್ಲ. ಮತ್ತೊಂದೆಡೆ ಮಕ್ಕಳಿಗೂ ಲಸಿಕೆ ಹಾಕಿಲ್ಲ. ಈ ಆತಂಕದ ನಡುವೆ ಶಾಲೆಗಳನ್ನು ಭೌತಿಕವಾಗಿ ಆರಂಭಿಸಿದರೆ ಹೆಚ್ಚಿನ ದುಷ್ಪರಿಣಾಮವಾಗುವ ಸಾಧ್ಯತೆಯಿದೆ. ಮಕ್ಕಳು, ಶಿಕ್ಷಕರ ಸುರಕ್ಷತೆ ದೃಷ್ಟಿಯಿಂದ ಆನ್ಲೈನ್ ತರಗತಿಗಳನ್ನು ಮನೆಯಿಂದಲೇ ನಡೆಸಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಕೋವಿಡ್, ಲಾಕ್ಡೌನ್ ಹಾಗೂ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಮನೆಯಿಂದಲೇ ನಿರ್ವಹಿಸಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.</p>.<p>ಸರ್ಕಾರ ಜೂನ್ 15ರಿಂದಲೇ ಶೈಕ್ಷಣಿಕ ಚಟುವಟಿಕೆ ಆರಂಭಿಸುವಂತೆ ಸೂಚಿಸಿದೆ. ಆದರೆ, ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಅವಕಾಶ ನೀಡಿಲ್ಲ. ಇದರಿಂದ ಶಿಕ್ಷಕರಿಗೆ ಶಾಲೆಗಳಿಗೆ ತೆರಳಲು ಸಮಸ್ಯೆಯಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ್ಬಾಬು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ತಜ್ಞರ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಶಾಲೆಗಳಲ್ಲಿ ಒಂದೇ ಕೊಠಡಿಯಲ್ಲಿ ಮಕ್ಕಳು, ಶಿಕ್ಷಕರು ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಶಿಕ್ಷಕರಿಗೆ ಮನೆಯಿಂದಲೇ ಶೈಕ್ಷಣಿಕ ಚಟುವಟಿಕೆ ನಿರ್ವಹಿಸಲು ಅವಕಾಶ ನೀಡುವಂತೆ ಷಡಕ್ಷರಿ ಅವರು ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ.</p>.<p>ಶಿಕ್ಷಕರಿಗೆ ಪೂರ್ಣ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಹಾಕಿಲ್ಲ. ಮತ್ತೊಂದೆಡೆ ಮಕ್ಕಳಿಗೂ ಲಸಿಕೆ ಹಾಕಿಲ್ಲ. ಈ ಆತಂಕದ ನಡುವೆ ಶಾಲೆಗಳನ್ನು ಭೌತಿಕವಾಗಿ ಆರಂಭಿಸಿದರೆ ಹೆಚ್ಚಿನ ದುಷ್ಪರಿಣಾಮವಾಗುವ ಸಾಧ್ಯತೆಯಿದೆ. ಮಕ್ಕಳು, ಶಿಕ್ಷಕರ ಸುರಕ್ಷತೆ ದೃಷ್ಟಿಯಿಂದ ಆನ್ಲೈನ್ ತರಗತಿಗಳನ್ನು ಮನೆಯಿಂದಲೇ ನಡೆಸಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>