<p><strong>ಕೋಲಾರ: </strong>ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಕೊರೋನಾ ವೈರಸ್ ತಡೆಗಟ್ಟಲು ನಿರಂತರವಾಗಿ ಶ್ರಮಿಸುತ್ತಿರುವ ವೈದ್ಯರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಮನೆಯ ಮುಂದೆ ನಿಂತು ಸಾರ್ವಜನಿಕರು ಚಪ್ಪಾಳೆ ತಟ್ಟುವ ಮೂಲಕ ಕೃತಜ್ಞತೆ ಸಲ್ಲಿಸಿದರು.</p>.<p>ವಿಶ್ವವನ್ನೇ ಮಾರಕವಾಗಿ ಕಾಡುತ್ತಿರುವ ಕೊರೋನಾ ಮಾರಿಯ ವಿರುದ್ದ ಸಮರ ಸಾರಿರುವ ಸರ್ಕಾರ, ಅದಕ್ಕಾಗಿ ಜನರ ಸಹಕಾರ ಕೋರಿ ಭಾನುವಾರ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಸಂಜೆ 5 ಗಂಟೆಯಾಗುವುದಕ್ಕೆ ಕಾದಿದ್ದ ನಾಗರಿಕರುಮನೆ ಮುಂಭಾಗಕ್ಕೆ ಬಂದು ಚಪ್ಪಾಳೆ ತಟ್ಟುವ ಮೂಲಕ ಮೋದಿ ಕರೆಗೆ ಓಗೊಟ್ಟು ದೇಶಪ್ರೇಮ ಮೆರೆದರು.</p>.<p>ನಗರದ ವಿವಿಧ ಬಡಾವಣೆಗಳ ನಿವಾಸಿಗಳು ಮನೆಯ ಹೊರಗೂ ಬಾರದ ಜನಸಂಜೆ 5 ಗಂಟೆಗೆ ಸ್ವಯಂಪ್ರೇರಿತರಾಗಿ ಹೊರ ಬಂದು ಮೋದಿ ಆದೇಶ ಪಾಲಿಸಿದರು.</p>.<p>ನಿವೃತ್ತ ಪೋಸ್ಟ್ ಮಾಸ್ಟರ್ ಶ್ರೀರಾಮಪ್ಪ ಮಾತನಾಡಿ, ‘ಇಡೀ ದೇಶವೇ ಕೊರೋನಾವೈರಸ್ವಿರುದ್ದ ಹೋರಾಟ ನಡೆಸುತ್ತಿದೆ. ಪ್ರಧಾನಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕರೆ ನೀಡಿರುವ ಈ ಕರ್ಫ್ಯೂಗೆ ಈ ದೇಶದ ಪ್ರಜೆಯಾಗಿ ಪ್ರತಿಯೊಬ್ಬರೂ ಗೌರವ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ವೈರಸ್ ಸೋಂಕಿಗೆ ಒಳಗಾಗದಂತೆ ವೈದ್ಯರು ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ, ವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳಬೇಕು, ಹೊರ ದೇಶಗಳಿಂದ ಬಂದ ವ್ಯಕ್ತಿಗಳಿಂದ ಸಾಮಾಜಿಕ ಹಂತರ ಕಾಯ್ದುಕೊಳ್ಳಬೇಕು, ಬಡಾವಣೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಕೊರೋನಾ ವೈರಸ್ ತಡೆಗಟ್ಟಲು ನಿರಂತರವಾಗಿ ಶ್ರಮಿಸುತ್ತಿರುವ ವೈದ್ಯರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಮನೆಯ ಮುಂದೆ ನಿಂತು ಸಾರ್ವಜನಿಕರು ಚಪ್ಪಾಳೆ ತಟ್ಟುವ ಮೂಲಕ ಕೃತಜ್ಞತೆ ಸಲ್ಲಿಸಿದರು.</p>.<p>ವಿಶ್ವವನ್ನೇ ಮಾರಕವಾಗಿ ಕಾಡುತ್ತಿರುವ ಕೊರೋನಾ ಮಾರಿಯ ವಿರುದ್ದ ಸಮರ ಸಾರಿರುವ ಸರ್ಕಾರ, ಅದಕ್ಕಾಗಿ ಜನರ ಸಹಕಾರ ಕೋರಿ ಭಾನುವಾರ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಸಂಜೆ 5 ಗಂಟೆಯಾಗುವುದಕ್ಕೆ ಕಾದಿದ್ದ ನಾಗರಿಕರುಮನೆ ಮುಂಭಾಗಕ್ಕೆ ಬಂದು ಚಪ್ಪಾಳೆ ತಟ್ಟುವ ಮೂಲಕ ಮೋದಿ ಕರೆಗೆ ಓಗೊಟ್ಟು ದೇಶಪ್ರೇಮ ಮೆರೆದರು.</p>.<p>ನಗರದ ವಿವಿಧ ಬಡಾವಣೆಗಳ ನಿವಾಸಿಗಳು ಮನೆಯ ಹೊರಗೂ ಬಾರದ ಜನಸಂಜೆ 5 ಗಂಟೆಗೆ ಸ್ವಯಂಪ್ರೇರಿತರಾಗಿ ಹೊರ ಬಂದು ಮೋದಿ ಆದೇಶ ಪಾಲಿಸಿದರು.</p>.<p>ನಿವೃತ್ತ ಪೋಸ್ಟ್ ಮಾಸ್ಟರ್ ಶ್ರೀರಾಮಪ್ಪ ಮಾತನಾಡಿ, ‘ಇಡೀ ದೇಶವೇ ಕೊರೋನಾವೈರಸ್ವಿರುದ್ದ ಹೋರಾಟ ನಡೆಸುತ್ತಿದೆ. ಪ್ರಧಾನಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕರೆ ನೀಡಿರುವ ಈ ಕರ್ಫ್ಯೂಗೆ ಈ ದೇಶದ ಪ್ರಜೆಯಾಗಿ ಪ್ರತಿಯೊಬ್ಬರೂ ಗೌರವ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ವೈರಸ್ ಸೋಂಕಿಗೆ ಒಳಗಾಗದಂತೆ ವೈದ್ಯರು ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ, ವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳಬೇಕು, ಹೊರ ದೇಶಗಳಿಂದ ಬಂದ ವ್ಯಕ್ತಿಗಳಿಂದ ಸಾಮಾಜಿಕ ಹಂತರ ಕಾಯ್ದುಕೊಳ್ಳಬೇಕು, ಬಡಾವಣೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>