<p><strong>ಕೋಲಾರ</strong>: ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದ ಮಧ್ಯೆ ಹಾಕಿದ್ದ ತಿಪ್ಪೆ ಗುಂಡಿಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ತೆರವುಗೊಳಿಸಲಾಯಿತು.</p>.<p>ಗ್ರಾಮದ ಮಧ್ಯೆ ಕೆಲವರು ನಿಯಮಬಾಹಿರವಾಗಿ ತಿಪ್ಪೆ ಹಾಕಿದ್ದರಿಂದ ಪರಿಸರ ಮಾಲಿನ್ಯಕ್ಕೆ ಕಾರಣವಾಗಿತ್ತು. ಈ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದರು. ಅಧಿಕಾರಿಗಳು ತಿಪ್ಪೆ ತೆರವುಗೊಳಿಸುವಂತೆ ಹಲವಾರು ಬಾರಿ ಸೂಚನೆ ನೀಡಿದರು ತೆರವು ಮಾಡಿರಲಿಲ್ಲ.</p>.<p>ಹೀಗಾಗಿ ಗ್ರಾ.ಪಂ ಆಡಳಿತಾಧಿಕಾರಿ ಎ.ಬಿ.ರಾಮಕೃಷ್ಣ ಹಾಗೂ ಪಿಡಿಒ ಕೆ.ಅನುರಾಧಾ ಅವರ ನೇತೃತ್ವದಲ್ಲಿ ಜೆಸಿಬಿ ಬಳಸಿ ತಿಪ್ಪೆಗಳನ್ನು ತೆರವು ಮಾಡಲಾಯಿತು. ಬಳಿಕ ತಿಪ್ಪೆಗಳ ಗೊಬ್ಬರವನ್ನು ಗ್ರಾಮದ ಹೊರಗೆ ಸಾಗಿಸಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<p>‘ಗ್ರಾಮದ ಮಧ್ಯೆ ತಿಪ್ಪೆಗಳನ್ನು ಹಾಕಿದ್ದರಿಂದ ಸೊಳ್ಳೆ ಕಾಟ ಹೆಚ್ಚಿತ್ತು. ತಿಪ್ಪೆಯ ವಾಸನೆಯಿಂದ ಗ್ರಾಮಸ್ಥರಿಗೆ ಸಮಸ್ಯೆಯಾಗಿತ್ತು. ಅಲ್ಲದೇ, ಸಾಂಕ್ರಾಮಿಕ ರೋಗ ಎದುರಾಗಿತ್ತು. ಈ ಕಾರಣಕ್ಕೆ ತಿಪ್ಪೆಗಳನ್ನು ತೆರವುಗೊಳಿಸಲಾಯಿತು’ ಎಂದು ರಾಮಕೃಷ್ಣಪ್ಪ ತಿಳಿಸಿದರು.</p>.<p>‘ಗ್ರಾಮಸ್ಥರ ಆರೋಗ್ಯದ ದೃಷ್ಟಿಯಿಂದ ತಿಪ್ಪೆಗಳನ್ನು ತೆರವು ಮಾಡಲಾಗಿದೆ. ಪರಿಸರ ಮಾಲಿನ್ಯ ತಡೆಗೆ ಸಾರ್ವಜನಿಕರು ಗ್ರಾ.ಪಂ ಜತೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.</p>.<p>ಗ್ರಾ.ಪಂ ಕಾರ್ಯದರ್ಶಿ ಪ್ರಮೀಳಾ, ಪ್ರಥಮ ದರ್ಜೆ ಸಹಾಯಕ ನಾಗರಾಜ, ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದ ಮಧ್ಯೆ ಹಾಕಿದ್ದ ತಿಪ್ಪೆ ಗುಂಡಿಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ತೆರವುಗೊಳಿಸಲಾಯಿತು.</p>.<p>ಗ್ರಾಮದ ಮಧ್ಯೆ ಕೆಲವರು ನಿಯಮಬಾಹಿರವಾಗಿ ತಿಪ್ಪೆ ಹಾಕಿದ್ದರಿಂದ ಪರಿಸರ ಮಾಲಿನ್ಯಕ್ಕೆ ಕಾರಣವಾಗಿತ್ತು. ಈ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದರು. ಅಧಿಕಾರಿಗಳು ತಿಪ್ಪೆ ತೆರವುಗೊಳಿಸುವಂತೆ ಹಲವಾರು ಬಾರಿ ಸೂಚನೆ ನೀಡಿದರು ತೆರವು ಮಾಡಿರಲಿಲ್ಲ.</p>.<p>ಹೀಗಾಗಿ ಗ್ರಾ.ಪಂ ಆಡಳಿತಾಧಿಕಾರಿ ಎ.ಬಿ.ರಾಮಕೃಷ್ಣ ಹಾಗೂ ಪಿಡಿಒ ಕೆ.ಅನುರಾಧಾ ಅವರ ನೇತೃತ್ವದಲ್ಲಿ ಜೆಸಿಬಿ ಬಳಸಿ ತಿಪ್ಪೆಗಳನ್ನು ತೆರವು ಮಾಡಲಾಯಿತು. ಬಳಿಕ ತಿಪ್ಪೆಗಳ ಗೊಬ್ಬರವನ್ನು ಗ್ರಾಮದ ಹೊರಗೆ ಸಾಗಿಸಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<p>‘ಗ್ರಾಮದ ಮಧ್ಯೆ ತಿಪ್ಪೆಗಳನ್ನು ಹಾಕಿದ್ದರಿಂದ ಸೊಳ್ಳೆ ಕಾಟ ಹೆಚ್ಚಿತ್ತು. ತಿಪ್ಪೆಯ ವಾಸನೆಯಿಂದ ಗ್ರಾಮಸ್ಥರಿಗೆ ಸಮಸ್ಯೆಯಾಗಿತ್ತು. ಅಲ್ಲದೇ, ಸಾಂಕ್ರಾಮಿಕ ರೋಗ ಎದುರಾಗಿತ್ತು. ಈ ಕಾರಣಕ್ಕೆ ತಿಪ್ಪೆಗಳನ್ನು ತೆರವುಗೊಳಿಸಲಾಯಿತು’ ಎಂದು ರಾಮಕೃಷ್ಣಪ್ಪ ತಿಳಿಸಿದರು.</p>.<p>‘ಗ್ರಾಮಸ್ಥರ ಆರೋಗ್ಯದ ದೃಷ್ಟಿಯಿಂದ ತಿಪ್ಪೆಗಳನ್ನು ತೆರವು ಮಾಡಲಾಗಿದೆ. ಪರಿಸರ ಮಾಲಿನ್ಯ ತಡೆಗೆ ಸಾರ್ವಜನಿಕರು ಗ್ರಾ.ಪಂ ಜತೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.</p>.<p>ಗ್ರಾ.ಪಂ ಕಾರ್ಯದರ್ಶಿ ಪ್ರಮೀಳಾ, ಪ್ರಥಮ ದರ್ಜೆ ಸಹಾಯಕ ನಾಗರಾಜ, ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>