‘ಅರಸು ಪುತ್ಥಳಿ ಸ್ಥಾಪನೆಗೆ ಹಿಂದಿನ ವರ್ಷ ಜಿಲ್ಲಾಡಳಿತದಿಂದ ಹಣ ಮಂಜೂರು ಮಾಡಲಾಗಿತ್ತು. ಆದರೆ, ಇನ್ನೂ ಪುತ್ಥಳಿ ಸ್ಥಾಪನೆ ಕೆಲಸ ಪೂರ್ಣಗೊಂಡಿಲ್ಲ. ಹಿಂದುಳಿದ ವರ್ಗಗಳ ಹರಿಕಾರ ದೇವರಾಜ ಅರಸು ಅವರ ಜಯಂತಿಯನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಯ್ದುಕೊಂಡು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಬೇಕು’ ಎಂದು ಹೇಳಿದರು.