ಆರೋಪಿಗಳು ಬೆಟ್ಟದಲ್ಲಿನ ದೇವಾಲಯಕ್ಕೆ ಬಂದಿದ್ದ ಸಾರ್ವಜನಿಕರೊಂದಿಗೆ ಮಾರ್ಗ ಮಧ್ಯೆ ಅಸಭ್ಯವಾಗಿ ವರ್ತಿಸುತ್ತಿದ್ದರು. ಇದನ್ನು ಪ್ರಶ್ನಿಸಿದ ಕಾನ್ಸ್ಟೆಬಲ್ಗಳಾದ ಶಂಕರ್ ಮತ್ತು ಅರುಣ್ ಅವರೊಂದಿಗೆ ಆರೋಪಿಗಳು ವಾಗ್ವಾದ ನಡೆಸಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದರು. ಅಲ್ಲದೇ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.