<p><strong>ಕೋಲಾರ:</strong> ‘ಬಡ ವಿದ್ಯಾರ್ಥಿಗಳು ಹಾಗೂ ರೋಗಿಗಳಿಗೆ ಟ್ರಸ್ಟ್ ಮೂಲಕ ಕೈಲಾದಷ್ಟು ಆರ್ಥಿಕ ನೆರವು ನೀಡಲಾಗುವುದು’ ಎಂದು ಮನ್ವಂತರ ಜನ ಸೇವಾ ಟ್ರಸ್ಟ್ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ತಿಳಿಸಿದರು.</p>.<p>ನಗರದ ಸರ್ಕಾರಿ ಮಹಿಳಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಅಕ್ಷತಾ ಅವರ ವಿದ್ಯಾಭ್ಯಾಸಕ್ಕೆ ಇಲ್ಲಿ ಶುಕ್ರವಾರ ಹಣಕಾಸು ನೆರವು ನೀಡಿ ಮಾತನಾಡಿ, ‘ಕಳೆದ 2 ದಶಕದಿಂದ ಬಡವರಿಗೆ ಸಹಾಯ ಮಾಡುತ್ತಿದ್ದೇನೆ. 3 ವರ್ಷಗಳಿಂದ ಮನ್ವಂತರ ಜನ ಸೇವಾ ಟ್ರಸ್ಟ್ ಮೂಲಕ ಬಡ ವಿದ್ಯಾರ್ಥಿಗಳು, ಕಲಾವಿದರು ಹಾಗೂ ಅಸಹಾಯಕರಿಗೆ ಸಹಾಯಹಸ್ತ ಚಾಚಿದ್ದೇವೆ’ ಎಂದು ಹೇಳಿದರು.</p>.<p>‘ಟ್ರಸ್ಟ್ನ ನೆರವಿಗೆ ಅರ್ಹರಿರುವ ಫಲಾನುಭವಿಗಳನ್ನು ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಅನಂತರಾಮ್ ಗುರುತಿಸುತ್ತಾರೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರಿಯಲು ಹೆಚ್ಚಿನ ಆದ್ಯತೆ ನೀಡುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಕೋವಿಡ್ನಿಂದ ಬಡ ಜನರಿಗೆ ಹೆಚ್ಚಿನ ತೊಂದರೆಯಾಗಿದೆ. ಹಿಂದಿನ ವರ್ಷ ಕೊರೊನಾ ಆತಂಕದ ನಡುವೆಯೂ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಕಲ್ಪಿಸಲಾಗಿದೆ. ಈ ವರ್ಷ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಬಡ ವಿದ್ಯಾರ್ಥಿಗಳು ಹಾಗೂ ರೋಗಿಗಳಿಗೆ ಟ್ರಸ್ಟ್ ಮೂಲಕ ಕೈಲಾದಷ್ಟು ಆರ್ಥಿಕ ನೆರವು ನೀಡಲಾಗುವುದು’ ಎಂದು ಮನ್ವಂತರ ಜನ ಸೇವಾ ಟ್ರಸ್ಟ್ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ತಿಳಿಸಿದರು.</p>.<p>ನಗರದ ಸರ್ಕಾರಿ ಮಹಿಳಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಅಕ್ಷತಾ ಅವರ ವಿದ್ಯಾಭ್ಯಾಸಕ್ಕೆ ಇಲ್ಲಿ ಶುಕ್ರವಾರ ಹಣಕಾಸು ನೆರವು ನೀಡಿ ಮಾತನಾಡಿ, ‘ಕಳೆದ 2 ದಶಕದಿಂದ ಬಡವರಿಗೆ ಸಹಾಯ ಮಾಡುತ್ತಿದ್ದೇನೆ. 3 ವರ್ಷಗಳಿಂದ ಮನ್ವಂತರ ಜನ ಸೇವಾ ಟ್ರಸ್ಟ್ ಮೂಲಕ ಬಡ ವಿದ್ಯಾರ್ಥಿಗಳು, ಕಲಾವಿದರು ಹಾಗೂ ಅಸಹಾಯಕರಿಗೆ ಸಹಾಯಹಸ್ತ ಚಾಚಿದ್ದೇವೆ’ ಎಂದು ಹೇಳಿದರು.</p>.<p>‘ಟ್ರಸ್ಟ್ನ ನೆರವಿಗೆ ಅರ್ಹರಿರುವ ಫಲಾನುಭವಿಗಳನ್ನು ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಅನಂತರಾಮ್ ಗುರುತಿಸುತ್ತಾರೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರಿಯಲು ಹೆಚ್ಚಿನ ಆದ್ಯತೆ ನೀಡುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಕೋವಿಡ್ನಿಂದ ಬಡ ಜನರಿಗೆ ಹೆಚ್ಚಿನ ತೊಂದರೆಯಾಗಿದೆ. ಹಿಂದಿನ ವರ್ಷ ಕೊರೊನಾ ಆತಂಕದ ನಡುವೆಯೂ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಕಲ್ಪಿಸಲಾಗಿದೆ. ಈ ವರ್ಷ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>