<p><strong>ಕೋಲಾರ: </strong>‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ. ದೌರ್ಜನ್ಯಕ್ಕೆ ಒಳಗಾದವರಿಗೆ ಖುದ್ದು ನ್ಯಾಯ ಒದಗಿಸಲು ಶ್ರಮಿಸುತ್ತೇನೆ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.</p>.<p>ಇಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯ ತಾತೇನಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಜೀವಂತ ಸುಡಲಾಗಿದೆ. ಈ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಿ’ ಎಂದು ಕೆಜಿಎಫ್ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರಿಗೆ ಸೂಚಿಸಿದರು.</p>.<p>‘ಸಭೆಯು ಚರ್ಚೆಗೆ ಸೀಮಿತವಾಗಬಾರದು. ಸಭೆಯಲ್ಲಿ ಕೈಗೊಂಡ ತೀರ್ಮಾನಗಳು ಜಾರಿಯಾಗಬೇಕು. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ಶೀಘ್ರವೇ ಬ್ಯಾಂಕ್ ಸಾಲ ಮಂಜೂರು ಆಗಬೇಕು. ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಬೇಕು’ ಎಂದು ಸೂಚನೆ ನೀಡಿದರು.</p>.<p>‘ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ದಾಖಲೆಪತ್ರ ಸರಿಯಿಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ಸಾಲ ನಿರಾಕರಿಸಿದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೇ ಜವಾಬ್ದಾರಿ. ದಾಖಲೆಪತ್ರಗಳನ್ನು ಬ್ಯಾಂಕ್ಗೆ ಕಳುಹಿಸುವ ಮುನ್ನ ಅಧಿಕಾರಿಗಳು ಸರಿಯಾಗಿ ಪರಿಶೀಲಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ವಿಶೇಷ ಘಟಕ ಯೋಜನೆ (ಎಸ್ಸಿಪಿ) ಮತ್ತು ಗಿರಿಜನ ಉಪ ಯೋಜನೆಯ (ಟಿಎಸ್ಪಿ) ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಅನುದಾನ ಬಳಕೆ ಆಗದೆ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗಬಾರದು’ ಎಂದು ಕಿವಿಮಾತು ಹೇಳಿದರು.</p>.<p>‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡವೆಂದು ಪ್ರತ್ಯೇಕಿಸದೆ ಎಲ್ಲಾ ವರ್ಗದ ಜನಾಂಗಕ್ಕೆ ಅನುಕೂಲವಾಗುವಂತೆ ಸರ್ಕಾರ ಸಾರ್ವಜನಿಕವಾಗಿ ಸ್ಮಶಾನ ಭೂಮಿ ನೀಡುತ್ತಿದೆ. ದೌರ್ಜನ್ಯ ಪ್ರಕರಣಗಳ ಬಗ್ಗೆ ಕೆಳ ಹಂತದ ಪೊಲೀಸ್ ಅಧಿಕಾರಿಗಳಿಗೆ ಅರಿವು ಮೂಡಿಸಬೇಕು’ ಎಂದು ಸೂಚಿಸಿದರು.</p>.<p><strong>ಶಿಸ್ತುಕ್ರಮದ ಎಚ್ಚರಿಕೆ:</strong> ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಸೌಲಭ್ಯಗಳನ್ನು ಇತರೆ ವರ್ಗದವರು ಪಡೆದಿದ್ದರೆ ಆ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಎಚ್ಚರಿಕೆ ನೀಡಿದರು.</p>.<p>‘ಎಲ್ಲಾ ವರ್ಗದ ಗುತ್ತಿಗೆದಾರರು ಯಾವುದೇ ಇಲಾಖೆಯ ಕಾಮಗಾರಿಗಳ ಗುತ್ತಿಗೆ ಪಡೆಯಲು ಅರ್ಹರು. ₹ 1 ಲಕ್ಷಕ್ಕಿಂತ ಕಡಿಮೆ ಮೊತ್ತದ ಗುತ್ತಿಗೆಗಳನ್ನು ಕೊಟೇಷನ್ ಮೂಲಕ ಪಡೆಯಬಹುದು. ಜಿ.ಪಂ ಕಾಮಗಾರಿ ಗುತ್ತಿಗೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಮುಕ್ತವಾಗಿ ಭಾಗವಹಿಸಬಹುದು’ ಎಂದು ವಿವರಿಸಿದರು.</p>.<p><strong>ಸಾಲ ದೊರೆಯುತ್ತಿಲ್ಲ:</strong> ‘ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಶೇ 90ರಷ್ಟು ಸಬ್ಸಿಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉದ್ಯಮಿಗಳಾಗಲು ಸಾಲ ನೀಡಲಾಗುತ್ತಿದೆ. ಆದರೆ, ಆರ್ಥಿಕವಾಗಿ ಸಬಲರಾದವರೆ ಈ ಸೌಲಭ್ಯ ಪಡೆಯುತ್ತಿದ್ದಾರೆ. ದುರ್ಬಲರಿಗೆ ಸಾಲ ದೊರೆಯುತ್ತಿಲ್ಲ’ ಎಂದು ಸಮಿತಿ ಸದಸ್ಯ ಅಂಬರೀಶ್ ದೂರಿದರು.</p>.<p>‘ಕೆಜಿಎಫ್ ತಾಲ್ಲೂಕಿನ ಚೊಕ್ಕರಬಂಡೆ ಗ್ರಾಮದಲ್ಲಿ 17 ವರ್ಷದ ಬಾಲಕಿ ಮೇಲೆ ದೌರ್ಜನ್ಯ ನಡೆದಿದೆ. ಆ ಸಂತ್ರಸ್ತೆಗೆ ರಕ್ಷಣೆ ನೀಡಬೇಕು. ಕೆಲ ವೈದ್ಯಕೀಯ ವಿದ್ಯಾರ್ಥಿಗಳು ನಕಲಿ ಜಾತಿ ಪ್ರಮಾಣಪತ್ರ ನೀಡಿ ವಿದ್ಯಾರ್ಥಿವೇತನ ಪಡೆದಿದ್ದಾರೆ. ಕೊಳೂರು ಗ್ರಾಮದಲ್ಲಿನ ಒಂದೇ ಕುಟುಂಬದವರು ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ 6 ಕೊಳವೆ ಬಾವಿ ಪಡೆದಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು’ ಎಂದು ಸಮಿತಿ ಸದಸ್ಯ ವೆಂಕಟೇಶ್ ಒತ್ತಾಯಿಸಿದರು.</p>.<p><strong>ಸಮಗ್ರ ತನಿಖೆ:</strong> ‘ಜಿಲ್ಲೆಯಲ್ಲಿ 59 ನಕಲಿ ಜಾತಿ ಪ್ರಮಾಣಪತ್ರಗಳ ಸಂಬಂಧ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಸಮಿತಿ ರಚಿಸಿದ್ದು, ಗೋಪ್ಯ ವರದಿ ನೀಡುವಂತೆ ಸೂಚಿಸಿದ್ದಾರೆ. ಜಾರಿ ನಿರ್ದೇಶನಾಲಯದೊಂದಿಗೆ ಸಭೆ ನಡೆಸಿ ಇತ್ಯರ್ಥಪಡಿಸುತ್ತೇವೆ’ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಾಲಾಜಿ ಮಾಹಿತಿ ನೀಡಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ರೆಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್.ಜಾಹ್ನವಿ, ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ,ಸಮಿತಿ ಸದಸ್ಯ ಮುನಿಯಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ. ದೌರ್ಜನ್ಯಕ್ಕೆ ಒಳಗಾದವರಿಗೆ ಖುದ್ದು ನ್ಯಾಯ ಒದಗಿಸಲು ಶ್ರಮಿಸುತ್ತೇನೆ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.</p>.<p>ಇಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯ ತಾತೇನಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಜೀವಂತ ಸುಡಲಾಗಿದೆ. ಈ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಿ’ ಎಂದು ಕೆಜಿಎಫ್ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರಿಗೆ ಸೂಚಿಸಿದರು.</p>.<p>‘ಸಭೆಯು ಚರ್ಚೆಗೆ ಸೀಮಿತವಾಗಬಾರದು. ಸಭೆಯಲ್ಲಿ ಕೈಗೊಂಡ ತೀರ್ಮಾನಗಳು ಜಾರಿಯಾಗಬೇಕು. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ಶೀಘ್ರವೇ ಬ್ಯಾಂಕ್ ಸಾಲ ಮಂಜೂರು ಆಗಬೇಕು. ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಬೇಕು’ ಎಂದು ಸೂಚನೆ ನೀಡಿದರು.</p>.<p>‘ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ದಾಖಲೆಪತ್ರ ಸರಿಯಿಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ಸಾಲ ನಿರಾಕರಿಸಿದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೇ ಜವಾಬ್ದಾರಿ. ದಾಖಲೆಪತ್ರಗಳನ್ನು ಬ್ಯಾಂಕ್ಗೆ ಕಳುಹಿಸುವ ಮುನ್ನ ಅಧಿಕಾರಿಗಳು ಸರಿಯಾಗಿ ಪರಿಶೀಲಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ವಿಶೇಷ ಘಟಕ ಯೋಜನೆ (ಎಸ್ಸಿಪಿ) ಮತ್ತು ಗಿರಿಜನ ಉಪ ಯೋಜನೆಯ (ಟಿಎಸ್ಪಿ) ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಅನುದಾನ ಬಳಕೆ ಆಗದೆ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗಬಾರದು’ ಎಂದು ಕಿವಿಮಾತು ಹೇಳಿದರು.</p>.<p>‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡವೆಂದು ಪ್ರತ್ಯೇಕಿಸದೆ ಎಲ್ಲಾ ವರ್ಗದ ಜನಾಂಗಕ್ಕೆ ಅನುಕೂಲವಾಗುವಂತೆ ಸರ್ಕಾರ ಸಾರ್ವಜನಿಕವಾಗಿ ಸ್ಮಶಾನ ಭೂಮಿ ನೀಡುತ್ತಿದೆ. ದೌರ್ಜನ್ಯ ಪ್ರಕರಣಗಳ ಬಗ್ಗೆ ಕೆಳ ಹಂತದ ಪೊಲೀಸ್ ಅಧಿಕಾರಿಗಳಿಗೆ ಅರಿವು ಮೂಡಿಸಬೇಕು’ ಎಂದು ಸೂಚಿಸಿದರು.</p>.<p><strong>ಶಿಸ್ತುಕ್ರಮದ ಎಚ್ಚರಿಕೆ:</strong> ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಸೌಲಭ್ಯಗಳನ್ನು ಇತರೆ ವರ್ಗದವರು ಪಡೆದಿದ್ದರೆ ಆ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಎಚ್ಚರಿಕೆ ನೀಡಿದರು.</p>.<p>‘ಎಲ್ಲಾ ವರ್ಗದ ಗುತ್ತಿಗೆದಾರರು ಯಾವುದೇ ಇಲಾಖೆಯ ಕಾಮಗಾರಿಗಳ ಗುತ್ತಿಗೆ ಪಡೆಯಲು ಅರ್ಹರು. ₹ 1 ಲಕ್ಷಕ್ಕಿಂತ ಕಡಿಮೆ ಮೊತ್ತದ ಗುತ್ತಿಗೆಗಳನ್ನು ಕೊಟೇಷನ್ ಮೂಲಕ ಪಡೆಯಬಹುದು. ಜಿ.ಪಂ ಕಾಮಗಾರಿ ಗುತ್ತಿಗೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಮುಕ್ತವಾಗಿ ಭಾಗವಹಿಸಬಹುದು’ ಎಂದು ವಿವರಿಸಿದರು.</p>.<p><strong>ಸಾಲ ದೊರೆಯುತ್ತಿಲ್ಲ:</strong> ‘ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಶೇ 90ರಷ್ಟು ಸಬ್ಸಿಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉದ್ಯಮಿಗಳಾಗಲು ಸಾಲ ನೀಡಲಾಗುತ್ತಿದೆ. ಆದರೆ, ಆರ್ಥಿಕವಾಗಿ ಸಬಲರಾದವರೆ ಈ ಸೌಲಭ್ಯ ಪಡೆಯುತ್ತಿದ್ದಾರೆ. ದುರ್ಬಲರಿಗೆ ಸಾಲ ದೊರೆಯುತ್ತಿಲ್ಲ’ ಎಂದು ಸಮಿತಿ ಸದಸ್ಯ ಅಂಬರೀಶ್ ದೂರಿದರು.</p>.<p>‘ಕೆಜಿಎಫ್ ತಾಲ್ಲೂಕಿನ ಚೊಕ್ಕರಬಂಡೆ ಗ್ರಾಮದಲ್ಲಿ 17 ವರ್ಷದ ಬಾಲಕಿ ಮೇಲೆ ದೌರ್ಜನ್ಯ ನಡೆದಿದೆ. ಆ ಸಂತ್ರಸ್ತೆಗೆ ರಕ್ಷಣೆ ನೀಡಬೇಕು. ಕೆಲ ವೈದ್ಯಕೀಯ ವಿದ್ಯಾರ್ಥಿಗಳು ನಕಲಿ ಜಾತಿ ಪ್ರಮಾಣಪತ್ರ ನೀಡಿ ವಿದ್ಯಾರ್ಥಿವೇತನ ಪಡೆದಿದ್ದಾರೆ. ಕೊಳೂರು ಗ್ರಾಮದಲ್ಲಿನ ಒಂದೇ ಕುಟುಂಬದವರು ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ 6 ಕೊಳವೆ ಬಾವಿ ಪಡೆದಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು’ ಎಂದು ಸಮಿತಿ ಸದಸ್ಯ ವೆಂಕಟೇಶ್ ಒತ್ತಾಯಿಸಿದರು.</p>.<p><strong>ಸಮಗ್ರ ತನಿಖೆ:</strong> ‘ಜಿಲ್ಲೆಯಲ್ಲಿ 59 ನಕಲಿ ಜಾತಿ ಪ್ರಮಾಣಪತ್ರಗಳ ಸಂಬಂಧ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಸಮಿತಿ ರಚಿಸಿದ್ದು, ಗೋಪ್ಯ ವರದಿ ನೀಡುವಂತೆ ಸೂಚಿಸಿದ್ದಾರೆ. ಜಾರಿ ನಿರ್ದೇಶನಾಲಯದೊಂದಿಗೆ ಸಭೆ ನಡೆಸಿ ಇತ್ಯರ್ಥಪಡಿಸುತ್ತೇವೆ’ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಾಲಾಜಿ ಮಾಹಿತಿ ನೀಡಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ರೆಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್.ಜಾಹ್ನವಿ, ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ,ಸಮಿತಿ ಸದಸ್ಯ ಮುನಿಯಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>