<p><strong>ಕೆಜಿಎಫ್:</strong> ರಾಬರ್ಟಸನ್ಪೇಟೆಯ ಕರ್ನಾಟಕ ಒನ್ ಕೇಂದ್ರದಲ್ಲಿ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚಿಗೆ ಹಣ ಪಡೆಯುತ್ತಿದ್ದ ಆರೋಪದ ಮೇಲೆ ತಹಶೀಲ್ದಾರ್ ಕೆ.ನಾಗವೇಣಿ ಕೇಂದ್ರದ ಮೇಲೆ ಸೋಮವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದರು.</p>.<p>ಕೇಂದ್ರದಲ್ಲಿ ರಾಜ್ಯ ಸರ್ಕಾರ ನೀಡಿರುವ ಸವಲತ್ತುಗಳಿಗೆ ನಿಗದಿಗಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ದಿಢೀರನೇ ಕೇಂದ್ರಕ್ಕೆ ಭೇಟಿ ನೀಡಿದ ತಹಶೀಲ್ದಾರ್ ತಮ್ಮ ಪರಿಚಯ ಹೇಳಿಕೊಳ್ಳದೆ ಸಿಬ್ಬಂದಿ ಮತ್ತು ಸೇವೆ ಪಡೆಯಲು ಬಂದಿದ್ದವರಿಂದ ಮಾಹಿತಿ ಪಡೆದರು.</p>.<p>ನಿಗದಿಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದಾಗಿ ನೆರೆದಿದ್ದವರು ತಿಳಿಸಿದರು. ಕೂಡಲೇ ರೆವಿನ್ಯೂ ಇನ್ಸ್ಪೆಕ್ಟರ್ ರಘುರಾಮಸಿಂಗ್ ಮತ್ತು ಗ್ರಾಮ ಲೆಕ್ಕಾಧಿಕಾರಿ ವಿನೀತ್ ಸ್ಥಳಕ್ಕೆ ಧಾವಿಸಿ ಮಹಜರ್ ನಡೆಸಿದರು. ಅವರ ವರದಿಯ ಹಿನ್ನೆಲೆಯಲ್ಲಿ ಕೇಂದ್ರದ ಮೇಲೆ ಕ್ರಮ ಕೈಗೊಳ್ಳಲು ತಹಶೀಲ್ದಾರರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ರಾಬರ್ಟಸನ್ಪೇಟೆಯ ಕರ್ನಾಟಕ ಒನ್ ಕೇಂದ್ರದಲ್ಲಿ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚಿಗೆ ಹಣ ಪಡೆಯುತ್ತಿದ್ದ ಆರೋಪದ ಮೇಲೆ ತಹಶೀಲ್ದಾರ್ ಕೆ.ನಾಗವೇಣಿ ಕೇಂದ್ರದ ಮೇಲೆ ಸೋಮವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದರು.</p>.<p>ಕೇಂದ್ರದಲ್ಲಿ ರಾಜ್ಯ ಸರ್ಕಾರ ನೀಡಿರುವ ಸವಲತ್ತುಗಳಿಗೆ ನಿಗದಿಗಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ದಿಢೀರನೇ ಕೇಂದ್ರಕ್ಕೆ ಭೇಟಿ ನೀಡಿದ ತಹಶೀಲ್ದಾರ್ ತಮ್ಮ ಪರಿಚಯ ಹೇಳಿಕೊಳ್ಳದೆ ಸಿಬ್ಬಂದಿ ಮತ್ತು ಸೇವೆ ಪಡೆಯಲು ಬಂದಿದ್ದವರಿಂದ ಮಾಹಿತಿ ಪಡೆದರು.</p>.<p>ನಿಗದಿಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದಾಗಿ ನೆರೆದಿದ್ದವರು ತಿಳಿಸಿದರು. ಕೂಡಲೇ ರೆವಿನ್ಯೂ ಇನ್ಸ್ಪೆಕ್ಟರ್ ರಘುರಾಮಸಿಂಗ್ ಮತ್ತು ಗ್ರಾಮ ಲೆಕ್ಕಾಧಿಕಾರಿ ವಿನೀತ್ ಸ್ಥಳಕ್ಕೆ ಧಾವಿಸಿ ಮಹಜರ್ ನಡೆಸಿದರು. ಅವರ ವರದಿಯ ಹಿನ್ನೆಲೆಯಲ್ಲಿ ಕೇಂದ್ರದ ಮೇಲೆ ಕ್ರಮ ಕೈಗೊಳ್ಳಲು ತಹಶೀಲ್ದಾರರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>